ಕೇಂದ್ರ ಸಚಿವರ ಕಚೇರಿಗೆ ಖಾಲಿ ಮಡಿಕೆ, ಮನವಿ ಪತ್ರ | ಕರುನಾಡ ವಿಜಯಸೇನೆಯಿಂದ ವಿಶಿಷ್ಟ ಪ್ರತಿಭಟನೆ

ಎ.ನಾರಾಯಣಸ್ವಾಮಿ ಕಚೇರಿಗೆ ಖಾಲಿ ಮಡಿಕೆ

ಚಿತ್ರದುರ್ಗ ನ್ಯೂಸ್.ಕಾಂ: ಕೇಂದ್ರ ಸಚಿವ ಹಾಗೂ ಚಿತ್ರದುರ್ಗ ಸಂಸದ ಎ.ನಾರಾಯಣಸ್ವಾಮಿ ಕಚೇರಿಗೆ ಖಾಲಿ ಮಡಿಕೆಯೊಂದಿಗೆ ಮನವಿ ಪತ್ರ ಸಲ್ಲಿಸಿದ ಘಟನೆ ಮಂಗಳವಾರ ನಡೆಯಿತು.

ಕರುನಾಡ ವಿಜಯಸೇನೆ ಕಾರ್ಯಕರ್ತರು ಮಂಗಳವಾರ ಕೆಆರ್‍ಎಸ್ ಜಲಾಶಯದಿಂದ ಕಾವೇರಿಯನ್ನು ತಮಿಳುನಾಡಿಗೆ ಹರಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರಾಗಿರುವ ಎ.ನಾರಾಯಣಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಮುಂಬೈ ಡಿಜೆ | ದಾವಣಗೆರೆಯಲ್ಲಿ ಡಿಜೆ ಸೀಕ್ರೇಟ್ ರಿವಿಲ್ ಮಾಡಿದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸಂಸದರ ಕಚೇರಿ ಎದುರು ಖಾಲಿ ಮಡಿಕೆಗಳನ್ನು ಹಿಡಿದು ಪ್ರತಿಭಟಿಸಿದರು.

ಕಾವೇರಿ ನದಿ ನೀರು ಕುರಿತು ಸಂಸದರು ಎಲ್ಲಿಯೂ ಧ್ವನಿ ಎತ್ತಿಲ್ಲ. ಕಾವೇರಿ ನಮ್ಮವಳು. ರಾಜ್ಯ ಹಾಗೂ ನಾಡಿನ ಹಿತ ಕಾಪಾಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ. ತಕ್ಷಣ ನೀರು ನಿಲ್ಲಿಸುವಂತೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಬೇಕು ಎಂದು ಆಗ್ರಹಿಸಿದರು.

ಇನ್ನೂ ಮುಂದುವರೆದ ಪ್ರತಿಭಟನಾಕಾರರು ಸಚಿವರ ಕಚೇರಿ ಬಾಗಿಲಿಗೆ ಕಾವೇರಿ ನಮ್ಮವಳು ಎಂಬ ಪೋಸ್ಟರ್ ಅಂಟಿಸಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಸಿಬ್ಬಂದಿ ಪೋಸ್ಟರ್ ತೆಗೆದು ಪ್ರತಿಭಟನಾಕಾರರನು ದೂರ ಕರೆತಂದರು. ಸಂಸದರ ಕಚೇರಿ ಸಿಬ್ಬಂದಿ ಖಾಲಿ ಮಡಿಕೆಯೊಂದಿಗೆ ನೀಡಿದ ಮನವಿಪತ್ರವನ್ನು ಸ್ವೀಕರಿಸಿದರು.

ಪ್ರತಿಭಟನೆಯಲಿ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ವಿಶ್ವನಾರಾಯಣಮೂರ್ತಿ, ಜಗದೀಶ್, ಮಣಿಕಂಠ, ಅಖಿಲೇಶ್, ಮಹಮದ್ ರಫಿ, ಮತ್ತಿತರರು ಭಾಗವಹಿಸಿದ್ದರು.

ಕೇಂದ್ರ ಸಚಿವರ ಕಚೇರಿಗೆ ಖಾಲಿ ಮಾಡಿಕೆ, ಮನವಿ ಪತ್ರ

ಕೆಎಸ್‍ಆರ್‍ಟಿಸಿ ಬಸ್ಸುಗಳಿಗೂ ಪೋಸ್ಟರ್:

ಇನ್ನೂ ಬೆಂಗಳೂರು ಬಂದ್‍ಗೆ ಮುನ್ನಾ ದಿನ ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುವ ಎಲ್ಲ ಬಸ್ಸುಗಳಿಗೆ ಪೋಸ್ಟರ್ ಅಚಿಟಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗುವ ಪ್ರಯಾಣಿಕರು ಬಂದ್‍ಗೆ ಬೆಂಬಲ ನೀಡಿ, ಯಾರೂ ಕೂಡಾ ಪ್ರಯಾಣ ಬೆಳೆಸಬೇಡಿ ಎಂದು ಮನವಿ ಮಾಡಿಕೊಂಡಿದ್ದರು.

ಮುಂದುವರೆದು ಬಸ್ಸುಗಳಲ್ಲಿರುವ ಮುಖ್ಯಮಂತ್ರಿ ಸೇರಿದಂತೆ ಸಚಿವರ ಭಾವಚಿತ್ರಗಳಿಗೆ ಕೆಂಪು ಬಣ್ಣದ ಶಾಹಿಯಿಂದ ಮಾರ್ಕ್ ಮಾಡಿ ಆಕ್ರೋಶ ವ್ಯಕ್ತಡಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version