CHITRADURGA NEWS | 26 MAY 2024
ಚಿತ್ರದುರ್ಗ: ಹೊಳಲ್ಕೆರೆ ಪಟ್ಣಣದ ಮುಷ್ಟಿಗರ ಹಟ್ಟಿಯ ನಿರ್ಮಲಮ್ಮ(55) ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಶುಕ್ರವಾರ ತಡರಾತ್ರ ತಮಿಳುನಾಡಿನಲ್ಲಿ ಈ ಘಟನೆ ನಡೆದಿದೆ.
ರೈಲಿನೊಳಗೆ ತಡರಾತ್ರಿ ವೇಳೆ ಶೌಚಾಲಯಕ್ಕೆ ಹೋಗಿದ್ದಾಗ ಕಾಲು ಜಾರಿ ಬೋಗಿಯಿಂದ ಹೊರಗೆ ಬಿದ್ದಿದ್ದಾರೆ.

ಇದನ್ನೂ ಓದಿ: ವಿವಿ ಸಾಗರಕ್ಕೆ ಹೆಚ್ಚಾದ ಒಳಹರಿವು | 114 ಅಡಿ ತಲುಪಿದ ಜಲಾಶಯ ಮಟ್ಟ
ಹೊಳಲ್ಕೆರೆಯ ಮುಷ್ಟಿಗರಹಟ್ಟಿಯ ರೈತ ಮುಖಂಡ ಕುಮಾರ್ ಆಚಾರ್ ಅವರ ಪತ್ನಿ ನಿರ್ಮಲಮ್ಮ ಹಾಗೂ ಅಕ್ಕಪಕ್ಕದ ಮನೆಯವರೆಲ್ಲಾ ಸೇರಿ ಚೀಟಿ ಹಾಕಿಕೊಂಡು ಆ ಹಣದಲ್ಲಿ ಸುಮಾರು 50 ಜನ ಪ್ರವಾಸಕ್ಕೆ ತೆರಳಿದ್ದರು.
ಕಳೆದ ವಾರ ಚಿಕ್ಕಜಾಜೂರಿನಿಂದ ರೈಲು ಮೂಲಕ ಪ್ರವಾಸಕ್ಕೆ ತೆರಳಿದ್ದು, ತಮಿಳುನಾಡು ಪ್ರವಾಸ ಮುಗಿಸಿ ಕನ್ಯಾಕುಮಾರಿಯಿಂದ ವಾಪಾಸಾಗಲು ಮಧುರೈ ಮಾರ್ಗದಲ್ಲಿ ಬೆಂಗಳೂರಿಗೆ ಸ್ಲೀಪರ್ ಕೋಚ್ನಲ್ಲಿ ಪ್ರಯಾಣಿಸುತ್ತಿದ್ದರು.
ಇದನ್ನೂ ಓದಿ: ಮೊಳಕಾಲ್ಮೂರು ಘಟನೆಗೆ ಬೆಸ್ಕಾಂ ಸ್ಪಷ್ಟನೆ | ಹಾಗಾದರೆ ಅಂದು ರಾತ್ರಿ ಎಷ್ಟೊತ್ತು ವಿದ್ಯುತ್ ಇರಲಿಲ್ಲ
ನಿರ್ಮಲಮ್ಮ ತಡರಾತ್ರಿ ಮೂತ್ರ ವಿಸರ್ಜನೆಗಾಗಿ ಶೌಚಾಲಯಕ್ಕೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬೋಗಿಯಿಂದ ಹೊರಗೆ ಬಿದ್ದಿದ್ದಾರೆ. ಪತಿ ಕುಮಾರ ಆಚಾರ್ ಎಚ್ಚರಗೊಂಡಾಗ ಪಕ್ಕದಲ್ಲಿ ಪತ್ನಿ ಇರಲಿಲ್ಲ. ಗಾಬರಿಯಿಂದ ಬೋಗಿಯಲ್ಲಿ ಹುಡುಕಾಡಿದ್ದಾರೆ.
ಈ ವೇಳೆ ಶೌಚಾಲಯದ ಬಳಿ ನಿರ್ಮಲಮ್ಮ ಅವರ ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಗಿದೆ. ತಕ್ಷಣ ಅದೇ ನಿಲ್ದಾಣದಲ್ಲಿ ಇಳಿದು ಸ್ಥಳೀಯರಿಗೆ ಮಾಹಿತಿ ನೀಡಿ, ಕುಮಾರ್ ಆಚಾರ್ ಮತ್ತು ಅಳಿಯಂದಿರು ಹತ್ತಿರದ ಧರ್ಮಪುರಿ ಠಾಣೆಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ಸಿನಿಂದ ಶಿಕ್ಷಣ ಕ್ಷೇತ್ರ ಕಲುಷಿತ | ಬಿ.ವೈ.ವಿಜಯೇಂದ್ರ ವಾಗ್ದಾಳಿ
ಪೊಲೀಸರ ಜೊತೆಗೆ ರೈಲ್ವೇ ಹಳಿ ಹುಡುಕಿಕೊಂಡು ಹೋದಾಗ ಟೋನೂರು ಎಂಬಲ್ಲಿ ನಿರ್ಮಲಮ್ಮ ಅವರ ಶವ ಪತ್ತೆಯಾಗಿದೆ.
ಧರ್ಮಪುರಿ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
