By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಮೊಬೈಲ್‍ಗಾಗಿ ಜೀವವನ್ನೇ ಕಳೆದುಕೊಂಡ ಯುವಕ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಮೊಬೈಲ್‍ಗಾಗಿ ಜೀವವನ್ನೇ ಕಳೆದುಕೊಂಡ ಯುವಕ

ಕ್ರೈಂ ಸುದ್ದಿತಾಲೂಕುಮುಖ್ಯ ಸುದ್ದಿಹೊಳಲ್ಕೆರೆ

ಮೊಬೈಲ್‍ಗಾಗಿ ಜೀವವನ್ನೇ ಕಳೆದುಕೊಂಡ ಯುವಕ

chitradurganews.com
Last updated: 20 October 2023 17:48
chitradurganews.com
2 years ago
Share
ಯಶವಂತ್
ಯಶವಂತ್
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಮೊಬೈಲ್ ಒಂದಲ್ಲದಿದ್ದರೆ ಹತ್ತು ಖರೀಧಿಸಬಹುದು. ಆದರೆ, ಹೋದ ಜೀವ ಬರುತ್ತಾ. ಇಂಥ ಸಣ್ಣ ಪುಟ್ಟ ಕಾರಣಗಳಿಗೆ ಜೀವ ಕಳೆದುಕೊಳ್ಳುವ ಆಲೋಚನೆಯ ಬಗ್ಗೆ ಗಂಭೀರವಾಗಿ ಯೋಚನೆ ಮಾಡಬೇಕಾಗಿದೆ.

ಹೌದು, ಪುಟ್ಟ ಮೊಬೈಲೊಂದಕ್ಕೆ ಕೇವಲ 20 ವರ್ಷದ ತರುಣ ಜೀವವನ್ನೇ ಕಳೆದುಕೊಂಡಿರುವ ಘಟನೆ ಹೊಳಲ್ಕೆರೆ ತಾಲೂಕಿನ ಕೊಳಾಳು ಗ್ರಾಮದಲ್ಲಿ ನಡೆದಿದೆ.

ಚಿತ್ರದುರ್ಗದ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಬಂದಿದ್ದ ವೇಳೆ ಮೊಬೈಲ್ ಕಳೆದುಕೊಂಡಿದ್ದ 20 ವರ್ಷದ ಯಶವಂತ್, ಆನಂತರ ತನ್ನ ಅಜ್ಜನಿಗೆ ಪ್ರತಿನಿತ್ಯ ಮೊಬೈಲ್ ಕೊಡಿಸುವಂತೆ ಕೇಳಿದ್ದಾನೆ.

ಇದನ್ನೂ ಓದಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕಿ

ಅಜ್ಜ ಉಗ್ರಪ್ಪ, ಈರುಳ್ಳಿ ಕೊಯ್ಲು ಮಾಡಿ, ಅದನ್ನು ಮಾರಾಟ ಮಾಡಿದ ತಕ್ಷಣ ಕೊಡಿಸುತ್ತೇನೆ. ಸ್ವಲ್ಪ ದಿನ ಸುಮ್ಮನಿರಪ್ಪ ಎಂದು ಮೊಮ್ಮಗನಿಗೆ ಸಮಾಧಾನ ಮಾಡಿದ್ದಾರೆ. ಆದರೂ ಯಶವಂತ್ ತನ್ನ ಹಠ ಬಿಟ್ಟಿರಲಿಲ್ಲ.

ಅ.18 ಬುಧವಾರ ಬೆಳಗ್ಗೆ ಕೀಟನಾಶಕ ಸೇವಿಸಿದ್ದಾನೆ. ತಕ್ಷಣ ಅವನನ್ನು ಐಮಂಗಲ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಗೆ ಕರೆದೊಯ್ಯುವಾಗ ಯಶವಂತ್ ಮೃತಪಟ್ಟಿದ್ದಾನೆ.

17 ವರ್ಷಗಳ ಹಿಂದೆ ಯಶವಂತ್ ತಂದೆ ಮೃತಪಟ್ಟಿದ್ದರು. ತಾಯಿ ಬೇರೆಡೆ ಕೆಲಸ ಮಾಡುತ್ತಿದ್ದರು. ಈ ಕಾರಣಕ್ಕೆ ತನ್ನ ಅಜ್ಜನ ಆಶ್ರಯದಲ್ಲಿ ಬೆಳೆಯುತ್ತಿದ್ದ. ಈಗ ಮೊಬೈಲ್‍ಗಾಗಿ ಮೊಮ್ಮಗನೇ ಇಲ್ಲವಾದ ಸ್ಥಿತಿಯಲ್ಲಿ ಕುಟುಂಬ ರೋಧಿಸುತ್ತಿದೆ.

ಮೊಬೈಲ್‍ಗಾಗಿ ಯಶವಂತ್ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga UpdatescrimeHolalkereKannada Latest NewsKolalumobilePoliceSuicideಅಪರಾಧಆತ್ಮಹತ್ಯೆಕನ್ನಡ ಲೇಟೆಸ್ಟ್ ನ್ಯೂಸ್ಕೊಳಾಳುಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಪೊಲೀಸ್ಮೊಬೈಲ್ಹೊಳಲ್ಕೆರೆ
Share This Article
Facebook Email Print
Previous Article ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕಿ ಪೂರ್ಣಿಮಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್
Next Article ಪೂರ್ಣಿಮಾ-ಶ್ರೀನಿವಾಸ್‍ಗೆ ಅನ್ಯಾಯ ಆಗಲು ಬಿಡಲ್ಲ ಎಂದು ಸಿಎಂ ಬಹಳ ದಿನಗಳಿಂದ ಗಾಳ ಹಾಕಿದ್ದೆ ಎಂದ ಡಿಕೆಶಿ | ಪೂರ್ಣಿಮಾ-ಶ್ರೀನಿವಾಸ್‍ಗೆ ಅನ್ಯಾಯ ಆಗಲು ಬಿಡಲ್ಲ ಎಂದ ಸಿಎಂ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up