ಚಿತ್ರದುರ್ಗ ನ್ಯೂಸ್.ಕಾಂ: ದೇವರ ದರ್ಶನಕ್ಕಾಗಿ ಧರ್ಮಸ್ಥಳಕ್ಕೆ ತೆರಳಿ ವಾಪಾಸು ಬಂದ ನಂತರ ತವರಿನಲ್ಲಿದ್ದ ಹೆಂಡತಿ ಮಕ್ಕಳಿಗೆ ದೇವರ ಪ್ರಸಾದ ನೀಡಲು ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿ ಲಾರಿಗೆ ಡಿಕ್ಕಿಯಾಗಿ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು ತಾಲೂಕಿನಲ್ಲಿ ನಡೆದಿದೆ.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ತಾಲ್ಲೂಕಿನ ಹನುಮಾಪುರಂ ಗ್ರಾಮ, ಡಿ.ಹಿರೇಹಾಳ್ ಮಂಡಲಂ, ನಿವಾಸಿ 26 ವರ್ಷದ ಹೆಚ್.ಮಂಜುನಾಥ ಮೃತ ಬೈಕ್ ವ್ಯಕ್ತಿ.
ವ್ಯವಸಾಯ ಮಾಡಿಕೊಂಡಿರುವ ಮಂಜುನಾಥ್ ಅ.26 ರಂದು ರಾತ್ರಿ ಧರ್ಮಸ್ಥಳದಿಂದ ವಾಪಾಸು ಬಂದು ಚಿಕ್ಕೇರಹಳ್ಳಿ ಗ್ರಾಮದಲ್ಲಿದ್ದ ತನ್ನ ಹೆಂಡತಿ ಮತ್ತು ಮಕ್ಕಳಿಗೆ ಪ್ರಸಾದ ಕೊಡಲು ತನ್ನ ಪಲ್ಸರ್ ಬೈಕಿನಲ್ಲಿ ಬರುವಾಗ ಅವಘಡ ನಡೆದಿದೆ.

ಇದನ್ನೂ ಓದಿ: ಬಾಲಕಿ ಮೇಲೆ ಟಾಯ್ಲೆಟ್ ಆಸಿಡ್ ಪ್ರಕರಣ | ಮುಖ್ಯ ಶಿಕ್ಷಕ ಅಮಾನತು
ರಾಷ್ಟ್ರೀಯ ಹೆದ್ದಾರಿ 156(ಎ)ರಲ್ಲಿ ಬಳ್ಳಾರಿಯಿಂದ ಚಳ್ಳಕೆರೆ ಕಡೆಗೆ ಬರುತ್ತಿದ್ದ ಲಾರಿಯ ಚಾಲಕ ಮುನ್ಸೂಚನೆ ನೀಡದೆ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಹಿಂಬದಿ ಬರುತ್ತಿದ್ದ ಬೈಕ್ ಸವಾರ ಮಂಜುನಾಥ್ ಲಾರಿಗೆ ಡಿಕ್ಕಿ ಹೊಡೆದಿದ್ದು, ತಲೆ ಹಾಗೂ ಕೈ ಕಾಲುಗಳಿಗೆ ಪೆಟ್ಟು ಬಿದ್ದಿದೆ. ಈ ವೇಳೆ ಲಾರಿಯ ಚಾಲಕ ಪರಾರಿಯಾಗಿದ್ದಾನೆ.
ತಕ್ಷಣ ಮಂಜುನಾಥನನ್ನು ರಾಂಪುರ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿ ವಿಮ್ಸ್ಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ. ಈ ಬಗ್ಗೆ ರಾಂಪುರ police ಠಾಣೆಯಲ್ಲಿ ದೂರು ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
