CHITRADURGA NEWS | 18 JANUARY 2024
ಹೊಳಲ್ಕೆರೆ: ಕಾರು ಮತ್ತು ಕೆಟಿಎಂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಹೊಳಲ್ಕೆರೆ ತಾಲೂಕು ಚಿತ್ರಹಳ್ಳಿ ಗ್ರಾಮದ 19 ವರ್ಷದ ದಿನೇಶ್ ಮೃತ ಯುವಕ. ಬೈಕಿನ ಹಿಂಬದಿಯಲ್ಲಿದ್ದ ಮತ್ತೋರ್ವ ಯುವಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ.
ಇದನ್ನೂ ಓದಿ: ಜನವರಿ 23 ರಂದು ಚಿತ್ರದುರ್ಗ ಬಂದ್ ಕರೆ
ಚಿತ್ರಹಳ್ಳಿ ನಿವಾಸಿ ದಿನೇಶ್ ಕುರಿ ವ್ಯಾಪಾರಕ್ಕಾಗಿ ಚಿತ್ರಹಳ್ಳಿ ಗೊಲ್ಲರಹಟ್ಟಿ, ಅಮೃತಾಪುರ ಗ್ರಾಮಗಳಲ್ಲಿ ಸುತ್ತಾಡಿ, ವ್ಯಾಪಾರ ಮುಗಿಸಿಕೊಂಡು ತನ್ನ ಕೆಟಿಎಂ ಆರ್ಸಿ 200 ಸಿಸಿ ಬೈಕಿನಲ್ಲಿ ಕಣಿವೆ ಜೋಗಿಹಳ್ಳಿಯ ಶಂಕರ್ ಎಂಬುವವರನ್ನು ಕೂರಿಸಿಕೊಂಡು ಊರಿಗೆ ಮರಳುವಾಗ ಭೀಕರ ಅಪಘಾತ ಸಂಭವಿಸಿದೆ.
ಚಿತ್ರಹಳ್ಳಿ ಗೇಟ್ ಸಮೀಪದಲ್ಲಿ ದಿನೇಶ್ ಚಾಲನೆ ಮಾಡುತ್ತಿದ್ದ ಬೈಕಿಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ದಿನೇಶ್ ತಲೆ ಮತ್ತಿತರೆ ಭಾಗಗಳಿಗೆ ಬಲವಾದ ಪೆಟ್ಟು ಬಿದ್ದಿದೆ. ತಕ್ಷಣ ಹೊಳಲ್ಕೆರೆ ಆಸ್ಪತ್ರೆಗೆ ಕರೆದೊಯ್ದಿದ್ದು, ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
