ತೋಟಕ್ಕೆ ಆಕಸ್ಮಿಕ ಬೆಂಕಿ | ಹಲವು ಮರ, ಗಿಡ ಬೆಂಕಿಗಾಹುತಿ

ಪರಶುರಾಮಪುರ ಗ್ರಾಮದ ತೋಟಕ್ಕೆ ಆಕಸ್ಮಿಕ ಬೆಂಕಿ

CHITRADURGA NEWS | 03 MAY 2024

ಚಳ್ಳಕೆರೆ: ಚಳ್ಳಕೆರೆ ತಾಲೂಕು ಪರಶುರಾಮಪುರ ಗ್ರಾಮದ ಹೊರವಲಯದ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದು, ಅಪಾರ ಪ್ರಮಾಣದ ಗಿಡ, ಮರಗಳು ಸುಟ್ಟು ನಷ್ಟವಾಗಿದೆ.

ಪರಶುರಾಮಪುರ-ಪಾವಗಡ ಮಾರ್ಗದ ಮುಖ್ಯ ರಸ್ತೆಯ ಪಕ್ಕದಲ್ಲಿರುವ ರೈತ ಕೊಂಡ್ಲೇರ ಪರಮೇಶ್ವರಪ್ಪ ಅವರ ತೋಟಕ್ಕೆ ಶುಕ್ರವಾರ ಮಧ್ಯಾಹ್ನ ಬೆಂಕಿ ತಗುಲಿದ್ದು ಅಡಕೆ, ತೆಂಗು, ಮಾವಿನ ಮರಗಳು ಸುಟ್ಟಿವೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಬೆನ್ನಲ್ಲೆ ಮತ್ತೊಂದು ಚುನಾವಣೆ | ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವೇಳಾಪಟ್ಟಿ ಪ್ರಕಟ

ಫಸಲಿಗೆ ಬಂದಿದ್ದ 14 ಹುಣಸೆ ಮರಗಳು, 8 ಮಾವಿನ ಮರಗಳು, 2 ನಿಂಬೆ ಮರ, 2 ತೆಂಗಿನ ಮರ ಸೇರಿದಂತೆ ಹಲವು ಸಸ್ಯಗಳಿಗೆ ಬೆಂಕಿ ತಗುಲಿ ಸುಮಾರು 2 ಲಕ್ಷ ರೂ. ನಷ್ಟವಾಗಿದೆ.

ಬೆಂಕಿ ತಗುಲಿದ್ದನ್ನು ಗಮನಿಸಿದ ಸ್ಥಳೀಯರು ಚಳ್ಳಕೆರೆ ಅಗ್ನಿಶಾಮಕ ಠಾಣೆಗೆ ತಕ್ಷಣ ಮಾಹಿತಿ ನೀಡಿದ್ದು, ಅಗ್ನಿಶಾಮಕ ಠಾಣೆಯ ಸಿಬ್ಬಂದಿ ವಾಹನದೊಂದಿಗೆ ಸಕಾಲಕ್ಕೆ ಬಂದು ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ಹಾಗೂ ಹಾನಿ ತಪ್ಪಿದಂತಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version