
CHITRADURGA NEWS | 14 MARCH 2025
ಚಿತ್ರದುರ್ಗ: ದೇವಾಲಯದ ರೂಢಿ ಮತ್ತು ಸಂಪ್ರದಾಯ ಧಾರ್ಮಿಕ ಪದ್ಧತಿಯಂತೆ ಮುಕ್ತಿಬಾವುಟವನ್ನು ಹರಾಜು ಮಾಡುತ್ತಾ ಬಂದಿದ್ದು, ಹಿಂದೂ ಧಾರ್ಮಿಕ ದತ್ತಿ ಇಲಾಖಾ ಕಾಯ್ದೆಯ ಸೆಕ್ಷನ್-58ರಂತೆ ರೂಢಿ ಸಂಪ್ರದಾಯಗಳನ್ನು ಎಲ್ಲ ಅಧಿಕಾರಿಗಳು ಪಾಲಿಸಬೇಕಾಗಿದೆ, ಅದರಂತೆ ಮುಕ್ತಿಬಾವುಟ ಹರಾಜು ನಡೆಸಲು ತೀರ್ಮಾನಿಸಲಾಗಿದೆ.
Also Read: ನಾಯಕನಹಟ್ಟಿ ಜಾತ್ರೆಗೆ ಏನೆಲ್ಲಾ ವ್ಯವಸ್ಥೆ ಆಗಿದೆ ನೋಡಿ..
ಮುಕ್ತಿಬಾವುಟ ಹರಾಜು ನಡೆಸುವ ಮುಂಚೆ ನೂರು ರೂಪಾಯಿ ಮುಖ ಬೆಲೆಯ ಛಾಪ ಕಾಗದ ತಯಾರಿಸಿಕೊಂಡು ಆಖೈರು ಹರಾಜುದಾರರನ್ನು 1ನೇ ಪಾರ್ಟಿಯಾಗಿ ಸಹಿ ಪಡೆಯಲು ಹಾಗೂ ವರ್ಷದೊಳಗೆ ಹರಾಜಿನ ಮೊತ್ತವನ್ನು ಸಲ್ಲಿಸಲು ಒಂದು ಅಡ್ವಾನ್ಸ್ ದಿನಾಂಕದ ಚೆಕ್ನ್ನು ಪಡೆದುಕೊಳ್ಳಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಅದರಂತೆಯೇ ಮುಕ್ತಿ ಬಾವುಟ ಹರಾಜು ಪ್ರಕ್ರಿಯೆ ನಡೆಸಲಾಗುವುದು, ಈ ನಿಟ್ಟಿನಲ್ಲಿ ಹರಾಜು ಕೂಗುವವರು ಸಹಕರಿಸಬೇಕು.
Also Read: ನಾಯಕನಹಟ್ಟಿ ಜಾತ್ರೆಗೆ ಕ್ಷಣಗಣನೆ | ಮಾ.16 ರಂದು ದೊಡ್ಡ ರಥೋತ್ಸವ
ಮುಕ್ತಿಬಾವುಟ ಹರಾಜಿನ ಬಾಬ್ತು ಬಾಕಿ ಇರಿಸಿಕೊಂಡಿರುವವರೆಗಿ ಹರಾಜಿನಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
