
CHITRADURGA NEWS | 19 JANUARY 2024
ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕು ಗುಡ್ಡದರಂಗವ್ವನಹಳ್ಳಿ ಗ್ರಾಮಕ್ಕೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ-ರೈತ ಸಂಜೀವಿನಿ ವಾಹನದ ತಜ್ಞರ ತಂಡ ಭೇಟಿ ನೀಡಿ ಕಡಲೆ ಬೆಳೆಯನ್ನು ಪರೀಕ್ಷಿಸಿದಾಗ ಆಸ್ಕೋ ಕೈಟಾ ಅಂಗಮಾರಿ ರೋಗ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಪ್ರಸ್ತುತ ಕಡಲೆ ಬೆಳೆ ಹೂವಾಡುವ ಹಂತದಲ್ಲಿದೆ. ಈ ಹಂತದಲ್ಲಿ ಕಡಲೆ ಬೆಳೆಗೆ ಆಸ್ಕೋ ಕೈಟಾ ಅಂಗಮಾರಿ ರೋಗವು ಗುಡ್ಡದ ರಂಗವ್ವನಹಳ್ಳಿ ಗ್ರಾಮ, ಸುತ್ತಮುತ್ತ ಪ್ರದೇಶದಲ್ಲಿ ಹಾಗೂ ಕಡಲೆ ಬೆಳೆದಂತಹ ಚಿತ್ರದುರ್ಗ ತಾಲ್ಲೂಕಿನಲ್ಲಿ ಕೂಡ ಈ ಸಂದರ್ಭದಲ್ಲಿ ಕಂಡುಬರುವ ಸಾಧ್ಯತೆ ಇರುತ್ತದೆ.
ಇದನ್ನೂ ಓದಿ: ರುಡ್ಸೆಟ್ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ
ಈ ಹಿನ್ನೆಲೆಯಲ್ಲಿ ಆಸ್ಕೋ ಕೈಟಾ ಅಂಗಮಾರಿ ರೋಗದ ಹತೋಟಿಗೆ ಮ್ಯಾಂಕೋಜೆಬ್ 2 ಗ್ರಾಂ ಪ್ರತಿ ಲೀಟರ್ಗೆ ಅಥವಾ ಸಾಫ್ 2 ಗ್ರಾಂ ಪ್ರತಿ ಲೀಟರ್ಗೆ ಅಥವಾ ಕಾರ್ಬನ್ಡೈಜಿಯಂ 2 ಗ್ರಾಂ ಪ್ರತಿ ಲೀಟರ್ಗೆ ಬೆರೆಸಿ ಸಂಪಡಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಸಹಾಯಕ ನಿರ್ದೇಶಕರು (ವಿಷಯ ತಜ್ಞರು) ರೈತರಿಗೆ ಸಲಹೆ ನೀಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

