Connect with us

    ಕುಡಿಯುವ ನೀರಿನ ಕಾಮಗಾರಿಗಳಿಗೆ ಚುರುಕು

    ಬಹುಗ್ರಾಮ ಕುಡಿಯುವ ನೀರಿನ ಯೋಜನೆ

    ಮುಖ್ಯ ಸುದ್ದಿ

    ಕುಡಿಯುವ ನೀರಿನ ಕಾಮಗಾರಿಗಳಿಗೆ ಚುರುಕು

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 19 APRIL 2024

    ಚಿತ್ರದುರ್ಗ: ವಾಣಿವಿಲಾಸ ಸಾಗರದಿಂದ ಹೊಳಲ್ಕೆರೆ ತಾಲೂಕಿಗೆ ಸರಬರಾಜಾಗುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪ್ರಗತಿಯನ್ನು ಆರ್‍ಡಿಪಿಆರ್ ಇಲಾಖೆ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಪರಿಶೀಲನೆ ನಡೆಸಿದರು.

    ವಾಣಿವಿಲಾಸ ಸಾಗರದಿಂದ ಹಿರಿಯೂರು ತಾಲೂಕಿನ ಐಮಂಗಲ ಹಾಗೂ ಹೊಳಲ್ಕೆರೆ ತಾಲೂಕಿಗೆ ನೀರು ಸರಬರಾಜು ಮಾಡುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.

    ಇದನ್ನೂ ಓದಿ: ಮೂರು ದಿನ ‘ಮಳೆರಾಯನ ಜಿಲ್ಲಾ ಪ್ರವಾಸ’ | ಹರ್ಷ ಮೂಡಿಸುವ ಮುನ್ಸೂಚನೆ ನೀಡಿದ ವರುಣ ದೇವ

    ಜಾಕ್‍ವೆಲ್ ಪಾಯಿಂಟ್, ಎಂ.ಎಸ್. ಪೈಪ್ ಸ್ಟಾಕ್ ಯಾರ್ಡ್‍ಗೆ ಭೇಟಿ ನೀಡಿದ ಅವರು ಹೊಳಲ್ಕೆರೆ ತಾಲೂಕಿನ ಹಾಲೇನಹಳ್ಳಿ ಬಳಿ ನಿರ್ಮಾಣವಾಗುತ್ತಿರುವ ನೀರು ಶುದ್ಧೀಕರಣ ಘಟಕ ಹಾಗೂ ಚೌಡಗೊಂಡನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯ ಕಾರ್ಯಾತ್ಮಕ ನಳ ಸಂಪರ್ಕ ಕಾಮಗಾರಿಯನ್ನು ವೀಕ್ಷಿಸಿದರು.

    ಇದೇ ವೇಳೆ ಸ್ವಚ್ಛಭಾರತ ಮಿಷನ್ ಯೋಜನೆಯ ಮಲ ನಿರ್ವಹಣೆ ಘಟಕ ಮತ್ತು ಘನ ತ್ಯಾಜ್ಯ ನಿರ್ವಹಣೆ ಘಟಕಗಳ ಪರಿಶೀಲನೆ ನಡೆಸಿದರು.

    ಇದನ್ನೂ ಓದಿ: ಶಿವಮೊಗ್ಗದಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಭರ್ಜರಿ ಜಿಗಿತ | ಒಂದೇ ದಿನ 1500 ರೂ. ಹೆಚ್ಚಳ

    ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಎಸ್.ಜೆ.ಸೋಮಶೇಖರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ ಸೇರಿಂದತೆ ಮತ್ತಿತರರು ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top