By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
    JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
    9 hours ago
    ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ
    ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಾಯ 
    21 hours ago
    ಸುದ್ದಿಗೋಷ್ಠಿಯಲ್ಲಿ ಬಿ.ಟಿ.ಜಗದೀಶ್ ಮಾತನಾಡಿದರು
    ಸಿದ್ದರಾಮಯ್ಯ ರಾಜೀನಾಮೆ ನೀಡಿರುವುದು ಕುರುಬ ಸಮಾಜಕ್ಕೆ ನೋವುಂಟಾಗಿದೆ | ಜಗದೀಶ್
    21 hours ago
    ಕೆ.ಆರ್. ಶಿವಪ್ರಕಾಶ್ ಅವರ ಸ್ಮರಣೆ ಕಾರ್ಯಕ್ರಮ
    ಕೆ.ಆರ್. ಶಿವಪ್ರಕಾಶ್ ಸ್ಮರಣೆಯಲ್ಲಿ ವಿವಿಧ ಮಠಾಧೀಶರು ಭಾಗೀ 
    22 hours ago
    ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಕಾರ್ಯಕ್ರಮ
    ಡೆಂಗ್ಯೂ ನಿಯಂತ್ರಣಕ್ಕೆ ಜಾಗೃತಿ ಅಗತ್ಯ | ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು | ಡಾ.ರಾಘವೇಂದ್ರ ಪ್ರಸಾದ್
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    5 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    10 hours ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    1 day ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    2 days ago
    today bhavishya
    ದಿನ ಭವಿಷ್ಯ | ಮೇ. 29 | ಉದ್ಯೋಗದಲ್ಲಿ ಒತ್ತಡ ಹೆಚ್ಚು, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಮೇ.28 | ಕೈಗೊಂಡ ಕೆಲಸಗಳು ನಿಧಾನ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    2 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    4 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    1 week ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    4 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    4 weeks ago
  • Life Style
    Life StyleShow More
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    9 hours ago
    tooth
    ಮನೆಯಲ್ಲೇ ಹಲ್ಲು ಕುಳಿಗಳಿಗೆ ಚಿಕಿತ್ಸೆ ನೀಡಲು ಈ ಮನೆಮದ್ದನ್ನು ಬಳಸಿ
    10 hours ago
    poppy seeds
    ಪ್ರತಿದಿನ ಗಸಗಸೆ ಸೇವಿಸಿ ಈ ಪ್ರಯೋಜನ ಪಡೆಯಿರಿ
    1 day ago
    Eyelash
    ರೆಪ್ಪೆಗೂದಲುಗಳು ಉದ್ದವಾಗಿ, ದಪ್ಪವಾಗಿ ಬೆಳೆಯಲು ಈ ಸೀರಮ್ ಹಚ್ಚಿ
    2 days ago
    lose weight
    ತೂಕ ಇಳಿಸಿಕೊಳ್ಳುವ ಉತ್ಸಾಹದಲ್ಲಿ ಈ ತಪ್ಪುಗಳನ್ನು ಮಾಡಬೇಡಿ
    2 days ago
Reading: ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ | ಡಾ.ಅಶೋಕ್ ದಳವಾಯಿ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ | ಡಾ.ಅಶೋಕ್ ದಳವಾಯಿ ಉದ್ಘಾಟನೆ

News Desk Chitradurga News
Last updated: 30 September 2025 22:37
News Desk Chitradurga News
8 months ago
Share
ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ
SHARE

CHITRADURGA NEWS | 01 OCTOBER 2025

ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವ 2025ರ ಅಂಗವಾಗಿ ಶ್ರೀ ಮುರುಘಾಮಠದಲ್ಲಿ ಅಯೋಜಿಸಲಾಗಿದ್ದ ಕೃಷಿ ಮತ್ತು ಕೈಗಾರಿಕೆ ಮೇಳವನ್ನು ಕರ್ನಾಟಕ ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಡಾ.ಅಶೋಕ್ ದಳವಾಯಿ ಉದ್ಘಾಟಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆ ಬರಪೀಡಿತ ಎಂದು ಘೋಷಿಸಿ | ಪ್ರತಿಭಟನೆ

ಈ ವೇಳೆ ಡಾ.ಅಶೋಕ್ ದಳವಾಯಿ ಮಾತನಾಡಿ, ಶರಣ ಸಂಸ್ಕೃತಿ ಎಂದರೆ ಕೇವಲ ಧಾರ್ಮಿಕ ಪದ್ಧತಿ ಅಲ್ಲ. ಅದು ಮಾನವ ಶ್ರೇಷ್ಠತೆಯ ಜೀವನಕ್ರಾಂತಿ. ಕರ್ಮ ಸಂಸ್ಕೃತಿಗೆ ಶರಣ ಸಂಸ್ಕೃತಿ ಉತ್ತರ ನೀಡುತ್ತದೆ. 12ನೇ ಶತಮಾನದಲ್ಲಿ ಶರಣರು ಕಾಯಕ ಪರಿಕಲ್ಪನೆ ಮೂಲಕ ಕರ್ಮ ಸಂಸ್ಕೃತಿಗೆ ಸ್ಪಷ್ಟ ಉತ್ತರ ನೀಡಿದರು. ನಾವು ಮಾಡುವ ಕೆಲಸ ಅದುವೇ ಕೈಲಾಸ. ಶರಣರು ಇದನ್ನು ಜಗತ್ತಿಗೆ ತಿಳಿಸಿದರು. 

ಕೃಷಿ ಕಾಯಕ ಶ್ರೇಷ್ಠವಾದದ್ದು, ಬಸವಣ್ಣನವರು ಹೇಳುವ ಹಾಗೆ ಕೃಷಿ ಕಾರ್ಯ ಮಾಡುವ ಸದ್ಭಕ್ತನ ಪಾದವ ತೋರಿಸಿ ಎನ್ನುತ್ತಾರೆ. ಮೇಟಿ ಮತ್ತು ನಾಟಿಗಳ ಮಧ್ಯೆ ನಿರರ್ಥಕ ಸಂಬಂಧವಿದೆ. ನಂತರದ್ದು ದಾಸೋಹ ಪರಿಕಲ್ಪನೆ. 

ಕಾಯಕದಿಂದ ದುಡಿದಿದ್ದನ್ನು ಸ್ವಾರ್ಥಕ್ಕಾಗಿ ಬಳಸದೆ ದಾಸೋಹಕ್ಕೆ ನೀಡುವುದೇ ಪರಮಸುಖ. ಸಂಪಾದನೆ ನಿನ್ನದಾದರೆ ಲಾಭ ಸಮಾಜಕ್ಕೆ ಸೇರಬೇಕು. ಶರಣ ಸಂಸ್ಕೃತಿಯು ಇಂದಿನ ಜ್ವಲಂತ ಸಮಸ್ಯೆಗಳ ನಿರ್ಮೂಲನೆಗೆ ಇರುವ ಒಂದು ಉತ್ತರ. ಯೋಗಿ ಎಂದರೆ ಜಗತ್ತಿಗೆ ಅನ್ನ ಕೊಡುವವನು. ಕೃಷಿಕರ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಬೇಕು. ಇಲ್ಲವಾದಲ್ಲಿ ರೈತರ ಸಂಖ್ಯೆ ಕಡಿಮೆಯಾಗುವ ಸಂಭವವಿದೆ. 

ಇದನ್ನೂ ಓದಿ: PHC ಗಳಲ್ಲಿ ವೈದ್ಯರು ಕಡ್ಡಾಯ ಹಾಜರಾತಿಗೆ ಸೂಚನೆ | ಜಿಪಂ ಸಿಇಒ ಆದೇಶ

ಎಲ್ಲಾ ಉದ್ಯೋಗಗಳಿಗಿಂತ ಕೃಷಿಯಿಂದ ಹೆಚ್ಚಿನ ಮಾನ್ಯತೆ ದೊರೆಯುತ್ತದೆ. ನಮ್ಮ ಯೋಚನೆ ವಿಚಾರ ಕೃತಿಗಳಲ್ಲಿ ಹತ್ತಿರ ಸಂಬಂಧವಿರಬೇಕು. ಜಾಗತಿಕ ಪರಿವರ್ತನೆಗೆ ಶರಣ ಸಂಸ್ಕೃತಿ ಸಹಕಾರವಾಗಿದೆ ಎಂದು ನುಡಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಅಧ್ಯಕ್ಷ ಶಿವಯೋಗಿ ಸಿ ಕಳಸದ ಮಾತನಾಡಿ, ಕೃಷಿಯಲ್ಲಿ ಆಸಕ್ತಿ ಇರುವವರನ್ನು ಸೇರಿಸಿ ಉತ್ತಮ ವೇದಿಕೆಯನ್ನು ಶ್ರೀಮಠದ ವತಿಯಿಂದ ಕಲ್ಪಿಸಿಕೊಡುತ್ತೇವೆ. ರೈತರ ಬೆಳೆಗೆ ಯೋಗ್ಯವಾದ ಬೆಲೆ ಬರುವಲ್ಲಿ ಶ್ರಮಿಸಬೇಕಿದೆ. 

ಶ್ರೀಮಠವು ಅನೇಕ ಜಾಗದಲ್ಲಿ ಉಪಯೋಗವಾಗುವಂತೆ ಗಿಡಮರ, ತೋಟಗಾರಿಕೆಯನ್ನು ಶ್ರೀಮಠದ ವತಿಯಿಂದ ಮಾಡಿಸುತ್ತಿದ್ದೇವೆ. ಕೃಷಿ ಪದ್ಧತಿ ದಾಖಲಾತಿಯನ್ನು ಮುಂದಿನ ಪೀಳಿಗೆಗೆ ಅನುಕೂಲವಾಗುವಂತೆ ಮಾಡಲು ಶ್ರೀಮಠ ಬದ್ಧವಾಗಿದೆ.  ಶ್ರೀಮಠದ ಮುಂದಿನ ಕಾರ್ಯಕ್ರಮಗಳಲ್ಲಿ ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಕರೆ ನೀಡಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ರೈತರು ಅನ್ನ ಕೊಡುತ್ತಾರೆ, ಆದರೆ ಅವರೇ ಬಡವರು ಎಂಬ ಮಾತಿದೆ. ಅದಕ್ಕೆ ನಾವು ರೈತರು ಬೆಳೆದ ಬೆಳೆಗೆ ಬೆಂಬಲ ನೀಡುವಂತೆ ಕೇಳುತ್ತಿದ್ದೇವೆ. 

ಇದನ್ನೂ ಓದಿ: ನಾಗರಿಕ ಸೇವಾ ಹುದ್ದೆಗಳ ನೇಮಕಾತಿ | 3 ವರ್ಷ ವಯೋಮಿತಿ ಸಡಿಲಿಕೆ | ರಾಜ್ಯ ಸರ್ಕಾರ ಆದೇಶ 

ನಮ್ಮ ರೈತರ ಆದಾಯ ಹೆಚ್ಚು ಮಾಡದಿದ್ದರೆ, ನಮ್ಮ ರೈತರ ಸಂಖ್ಯೆ ಕಡಿಮೆಯಾಗುತ್ತದೆ. ಜೊತೆಗೆ ರೈತರು ಬಹುಬೆಳ ಪದ್ಧತಿ ಅಳವಡಿಸಿಕೊಳ್ಳಬೇಕಿದೆ. ರೈತರು ಮಾರುಕಟ್ಟೆ ಪದ್ಧತಿಯನ್ನು ಕೃಷಿ ಸಹಕಾರ ಸಂಘಗಳ ಮೂಲಕ ಮಾಡಬೇಕಾಗಿದೆ. ಗಾಂಧೀಜಿಯವರ ಗ್ರಾಮ ಸ್ವರಾಜ್ ಕಲ್ಪನೆಯನ್ನು, ರೈತರ ಸಮಸ್ಯೆಗಳನ್ನು ರೈತರೇ ಪರಿಹಾರೋಪಾಯ ಮಾಡಿಕೊಂಡರೆ ಸಾಧ್ಯ ಎಂದು ನುಡಿದರು.

ಅಕ್ಕಡಿ ಬೇಸಾಯ ತಜ್ಞರಾದ ಅರಿವು ಪ್ರಭಾಕರ್ ಬಿ ಮಾತನಾಡಿ, ನಾನು ರೈತರ ಅನುಭವ ಎಂಬ ಸಂಸ್ಥೆ ಸ್ಥಾಪಿಸಿದ್ದೇನೆ. ಅಕ್ಷಯಪಾತ್ರೆಯ ರೂಪದಲ್ಲಿ 18 ಬೆಳೆಗಳನ್ನು ಅಕ್ಕಡಿ ಸಾಲುಗಳ ಮೂಲಕ ಬೆಳೆಯಬಹುದು. ಮಳೆಯ ಮುಖಾಂತರ ಈ ಬೆಳೆಗಳನ್ನು ಬೆಳೆಯಬಹುದು. ಬೆಳಗಾವಿಯನ್ನು ಬೆಳೆಕಾಳು ರಾಜ ಎನ್ನುತ್ತಾರೆ. ನಮ್ಮ ಪೂರ್ವಜರು ಮಾಡಿದ ನೈಸರ್ಗಿಕ ಬೇಸಾಯ ಪದ್ಧತಿಯಲ್ಲಿ ಬೇಸಾಯ ಮಾಡುವುದರಿಂದ ಪೌಷ್ಟಿಕಾಂಶಯುತವಾದ ಬೆಳೆಯನ್ನು ಬೆಳೆಯಬಹುದು ಎಂದರು.

ಹುಲಿಕೆರೆ ಕೃಷಿಕರಾದ ವಿಶ್ವೇಶ್ವರ ಸಜ್ಜನ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ ನಾರಾಣಾಪುರ, ಶಿವಮೊಗ್ಗ ಪಶುವೈದ್ಯಾಧಿಕಾರಿ ಡಾ. ಟಿ.ವಿ.ಗಿರೀಶ್ ಜಲತಜ್ಞರಾದ ಡಾ.ದೇವರಾಜರೆಡ್ಡಿ, ಮಹಮ್ಮದ್ ನೂರುಲ್ಲಾ, ಮಂಗಳಾ ಕಿರಣ್ ನೀಲಗುಂದ, ಹಾವೇರಿಯ ಸಿದ್ದನಗೌಡ ಪಾಟೀಲ್ ಮಾತನಾಡಿದರು.

ಇದನ್ನೂ ಓದಿ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅಧಿಕಾರ ಸ್ವೀಕಾರ

ಗೋಕಾಕ್ ಶ್ರೀ ಶೂನ್ಯ ಸಂಪಾದನೆ ಮಠದ ಮುರುಘರಾಜೇಂದ್ರ ಸ್ವಾಮಿಗಳು, ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಶ್ರೀ ವಚನಾನಂದ ಸ್ವಾಮೀಜಿ, ಭದ್ರಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿ ಅಧ್ಯಕ್ಷ ಲಿಂಗಾರೆಡ್ಡಿ, ರೈತಸಂಘದ ಅಧ್ಯಕ್ಷ ಬಡಗಲಪುರದ ನಾಗೇಂದ್ರ, ಸಂಗನಗೌಡ ಪಾಟೀಲ್, ಹೆಚ್.ಎನ್.ಸೋಮಶೇಖರಪ್ಪ, ಕೆ. ಚಿಕ್ಕಣ್ಣ, ಶಾಂತಅಶೋಕ್, ಧನಂಜಯ, ಕೆಸಿ ಹೊರಕೇರಪ್ಪ, ರೆಡ್ಡಿಹಳ್ಳಿ ವೀರಣ್ಣ, ಭೂತಯ್ಯ, ಸಿದ್ದರಾಮಪ್ಪ ಹಿರಿಯೂರು, ತಿಮ್ಮಯ್ಯ, ಬಸ್ತಹಳ್ಳಿ ಸುರೇಶ್ ಬಾಬು, ಚಿಕ್ಕಪ್ಪನಳ್ಳಿ ರುದ್ರಸ್ವಾಮಿ, ಚಿಕ್ಕಪ್ಪನಹಳ್ಳಿ ಎನ್.ಜೆ.ಸಂತೋಷ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಳಗುಂದ ಸಮಗ್ರ ಕೃಷಿಕರಾದ ಮಂಗಳ ಕಿರಣ್ ನೀಲಗುಂದ, ರಾಜಶೇಖರ ನಿಂಬರಗಿ, ಕೊರಟಗೆರೆ ತಾಲೂಕು ಪಾತಗನಹಳ್ಳಿ ಎ.ಎಸ್.ನಟರಾಜ್, ಮಂಡ್ಯ ಜಿಲ್ಲೆ ಸಾತೇನಹಳ್ಳಿ ನೈಸರ್ಗಿಕ ಕೃಷಿಕಾರದ ಕುಮಾರಸ್ವಾಮಿ, ತಿಪಟೂರು ಜಾಬಘಟ್ಟ ಆರ್.ರಮೇಶ್, ಮಹಮದ್ ನೂರುಲ್ಲಾ ಇವರನ್ನು ಸನ್ಮಾನಿಸಲಾಯಿತು.

ಹಸುವಿಗೆ ಮೇವು ತಿನ್ನಿಸಿದರ ಮೂಲಕ ಸಾಕುಪ್ರಾಣಿಗಳ ಪ್ರದರ್ಶನವನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಅಧ್ಯಕ್ಷರಾದ ಶ್ರೀ ಶಿವಯೋಗಿ ಸಿ ಕಳಸದರವರು ಉದ್ಘಾಟಿಸಿದರು. ವಿವಿಧ ತಳಿಗಳಾದ ಹಳ್ಳಿಕಾರು, ಅಮೃತ ಮಹಲ್, ಶಿಲಾರಿ ಸ್ಥಳೀಯ ಎತ್ತುಗಳು, ಜಾಫರ್, ಬಾಡಿ, ಮುರ ತಳಿಯ ಎಮ್ಮೆಗಳು, ಜರ್ಸಿ, ಮಲೆನಾಡಗಿಡ್ಡ ತಳಿಯ ಆಕಳುಗಳು, ನಂದಿ ದುರ್ಗದ ಮೇಕೆಗಳು, ಕೋಳಿ, ಕುದುರೆ ವಿವಿಧ ಗಿಳಿಗಳು ಪ್ರದರ್ಶನಗೊಂಡವು. 

ಇದನ್ನೂ ಓದಿ: ಕೋಟೆ ಇತಿಹಾಸ ಸಾರುವಲ್ಲಿ ಪ್ರವಾಸಿ ಮಾರ್ಗದರ್ಶಿಗಳ ಪಾತ್ರ ಮುಖ್ಯ | ತಹಶೀಲ್ದಾರ್ ನಾಗವೇಣಿ

ಕೃಷಿ ಮತ್ತು ಕೈಗಾರಿಕಾ ಮೇಳದಲ್ಲಿ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಜೈವಿಕ ಇಂಧನ ಉತ್ಪನ್ನದ ಘಟಕ, ಅಮೃತ್ ಆರ್ಗ್ಯಾನಿಕ್ ಫರ್ಟಿಲೈಜರ್ಸ್, ವಾಹಿನಿಪೈಪ್ಸ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಅಭಿವೃದ್ಧಿ ಉದ್ಯಮಶೀಲತಾ ಅಭಿವೃದ್ಧಿ ಇಲಾಖೆ, ರೇಷ್ಮೆ ಇಲಾಖೆ, ಚಳ್ಳಕೆರೆಯ ಹೂವಿನ ಹಾರ ಹಾಗೂ ರೊಟ್ಟಿ ಉತ್ಪಾದನೆ, ಸೆಲ್ಕೋ ಸೋಲಾರ್ ಲೈಟಿಂಗ್ ವಿದ್ಯುತ್ ಉತ್ಪಾದನೆ, ಕಾಟನ್ ಬ್ಯಾಗು ಉತ್ಪಾದನೆ ಮಾರಾಟ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕ¯ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಿವಮೊಗ್ಗದ ಅಂಜನಾ ಆರ್ಗಾನಿಕ್ಸ್, ಚಿತ್ರದುರ್ಗದ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆ, ಕಡೂರಿನ ಅಡಿಕೆ ಬೇಸಾಯ, ತರೀಕೆರೆಯ ಸ್ವಸಹಾಯ ಸಂಘದ ತರಕಾರಿಬೀಜ ಉತ್ಪಾದನೆ, ಶ್ರೀ ಕಲ್ಲೇಶ್ವರ ಕಾಯರ್ ಇಂಡಸ್ಟ್ರೀಸ್ ಅಂಡ್ ಆರ್ಗಾನಿಕ್ ಮ್ಯಾನುಫ್ಯಾಕ್ಚರರ್ಸ್, ಬಸವೇಶ್ವರ ವೈದ್ಯಕೀಯ ಆರೋಗ್ಯ ತಪಾಸಣೆಯ ಮಾಹಿತಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಮಗ್ರ ಮಕ್ಕಳ ರಕ್ಷಣೆ, ಸಾಮಾಜಿಕ ಅರಣ್ಯ ವಿಭಾಗ ಜಿಲ್ಲಾ ಪಂಚಾಯತ್, ಚಿತ್ರದುರ್ಗ ಜಲಸಂಪನ್ಮೂಲ ಇಲಾಖೆ ವಿಶ್ವೇಶ್ವರಯ್ಯ ಜಲನಿಗಮ ಮಂಡಳಿ, ಭದ್ರಾ ಮೇಲ್ದಂಡೆ ಯೋಜನೆ, ವಾಹಿನಿ ಪಾಲಿಟೆಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್, ಶ್ರೀದೇವಿ ಸ್ತ್ರೀಶಕ್ತಿ ಮಹಿಳಾ ಸಂಘ ಕೃಷಿ ಮತ್ತು ವಸ್ತು ಪ್ರದರ್ಶನ, ತಾಲೂಕು ಪಂಚಾಯತ್ ಸಿರಿಧಾನ್ಯ ವಸ್ತುಗಳ ಮಾಹಿತಿ, ಸಹಾಯಕ ಕೃಷಿ ನಿರ್ದೇಶನಾಲಯ ಚಿತ್ರದುರ್ಗ, ವರ್ಷ ಕೃಷಿ ಉಪಕರಣಗಳು ಚಿತ್ರದುರ್ಗ ಪ್ರದರ್ಶನಗೊಂಡವು.

ಕೃಷಿ ಮತ್ತು ಕೈಗಾರಿಕ ವಸ್ತು ಪ್ರದರ್ಶನದಲ್ಲಿ ಕೃಷಿ ಇಲಾಖೆ, ಚಿತ್ರದುರ್ಗ ಪ್ರಥಮ, ತೋಟಗಾರಿಕಾ ಇಲಾಖೆ ಚಿತ್ರದುರ್ಗ ದ್ವಿತೀಯ, ಭದ್ರಾ ಮೇಲ್ದಂಡೆ ಯೋಜನೆ ತೃತೀಯ, ಜಿಲ್ಲಾ ಪಂಚಾಯತ್ ಮಹಿಳಾ ಸಂಘ ಸಮಾಧಾನಕರ ಬಹುಮಾನಗಳನ್ನು ಪಡೆದವು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Agricultural fairChitradurgaChitradurga newsMuruga Mathಕೃಷಿ ಮೇಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠ
Share This Article
Facebook Email Print
Previous Article ಚಿತ್ರದುರ್ಗ ಜಿಲ್ಲೆ ಬರಪೀಡಿತ ಎಂದು ಘೋಷಿಸಿ | ಪ್ರತಿಭಟನೆ
Next Article today bhavishya ದಿನ ಭವಿಷ್ಯ | ಅಕ್ಟೋಬರ್ 01 |ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶ, ಆದಾಯಕ್ಕಿಂತ ಖರ್ಚು ಹೆಚ್ಚು
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
ಮಾರುಕಟ್ಟೆ ಧಾರಣೆ
fish
ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
Life Style
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ರಂಗನಾಥ್ ಮಾತನಾಡಿದರು
JDU ಪಕ್ಷ ಸಂಘಟನೆ ಮಾಡುವುದು ನಮ್ಮ ಮುಂದಿನ ಗುರಿ | ಪ್ರಧಾನ ಕಾರ್ಯದರ್ಶಿ ರಂಗನಾಥ್
ಮುಖ್ಯ ಸುದ್ದಿ
today bhavishya
ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up