By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    9 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    11 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    11 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    12 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    16 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 day ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    4 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    5 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    23 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 10 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ದೂರ ಪ್ರಯಾಣದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 day ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    4 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    6 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    22 hours ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    23 hours ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
    face glowing in summer
    ಬೇಸಿಗೆಯಲ್ಲಿ ನಿಮ್ಮ ಮುಖ ಹೊಳೆಯುತ್ತಿರಲು ರಾತ್ರಿ ಈ ಬಿಳಿ ಪದಾರ್ಥದಿಂದ ಮುಖ ತೊಳೆಯಿರಿ
    2 days ago
    Consume omkalu and asafoetida powder
    ಮಲಗುವ ಮುನ್ನ ಉಗುರು ಬೆಚ್ಚಗಿನ ನೀರಿನೊಂದಿಗೆ ಓಂಕಾಳು ಮತ್ತು ಇಂಗು ಪುಡಿಯನ್ನು ಸೇವಿಸಿ, ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಿ
    3 days ago
Reading: ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ | ಡಾ.ಅಶೋಕ್ ದಳವಾಯಿ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ | ಡಾ.ಅಶೋಕ್ ದಳವಾಯಿ ಉದ್ಘಾಟನೆ

News Desk Chitradurga News
Last updated: 30 September 2025 22:37
News Desk Chitradurga News
7 months ago
Share
ಮುರುಘಾ ಮಠದಲ್ಲಿ ಕೃಷಿ ಮತ್ತು ಕೈಗಾರಿಕೆ ಮೇಳ
SHARE

CHITRADURGA NEWS | 01 OCTOBER 2025

ಚಿತ್ರದುರ್ಗ: ಶರಣ ಸಂಸ್ಕೃತಿ ಉತ್ಸವ 2025ರ ಅಂಗವಾಗಿ ಶ್ರೀ ಮುರುಘಾಮಠದಲ್ಲಿ ಅಯೋಜಿಸಲಾಗಿದ್ದ ಕೃಷಿ ಮತ್ತು ಕೈಗಾರಿಕೆ ಮೇಳವನ್ನು ಕರ್ನಾಟಕ ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾದ ಡಾ.ಅಶೋಕ್ ದಳವಾಯಿ ಉದ್ಘಾಟಿಸಿದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲೆ ಬರಪೀಡಿತ ಎಂದು ಘೋಷಿಸಿ | ಪ್ರತಿಭಟನೆ

ಈ ವೇಳೆ ಡಾ.ಅಶೋಕ್ ದಳವಾಯಿ ಮಾತನಾಡಿ, ಶರಣ ಸಂಸ್ಕೃತಿ ಎಂದರೆ ಕೇವಲ ಧಾರ್ಮಿಕ ಪದ್ಧತಿ ಅಲ್ಲ. ಅದು ಮಾನವ ಶ್ರೇಷ್ಠತೆಯ ಜೀವನಕ್ರಾಂತಿ. ಕರ್ಮ ಸಂಸ್ಕೃತಿಗೆ ಶರಣ ಸಂಸ್ಕೃತಿ ಉತ್ತರ ನೀಡುತ್ತದೆ. 12ನೇ ಶತಮಾನದಲ್ಲಿ ಶರಣರು ಕಾಯಕ ಪರಿಕಲ್ಪನೆ ಮೂಲಕ ಕರ್ಮ ಸಂಸ್ಕೃತಿಗೆ ಸ್ಪಷ್ಟ ಉತ್ತರ ನೀಡಿದರು. ನಾವು ಮಾಡುವ ಕೆಲಸ ಅದುವೇ ಕೈಲಾಸ. ಶರಣರು ಇದನ್ನು ಜಗತ್ತಿಗೆ ತಿಳಿಸಿದರು. 

ಕೃಷಿ ಕಾಯಕ ಶ್ರೇಷ್ಠವಾದದ್ದು, ಬಸವಣ್ಣನವರು ಹೇಳುವ ಹಾಗೆ ಕೃಷಿ ಕಾರ್ಯ ಮಾಡುವ ಸದ್ಭಕ್ತನ ಪಾದವ ತೋರಿಸಿ ಎನ್ನುತ್ತಾರೆ. ಮೇಟಿ ಮತ್ತು ನಾಟಿಗಳ ಮಧ್ಯೆ ನಿರರ್ಥಕ ಸಂಬಂಧವಿದೆ. ನಂತರದ್ದು ದಾಸೋಹ ಪರಿಕಲ್ಪನೆ. 

ಕಾಯಕದಿಂದ ದುಡಿದಿದ್ದನ್ನು ಸ್ವಾರ್ಥಕ್ಕಾಗಿ ಬಳಸದೆ ದಾಸೋಹಕ್ಕೆ ನೀಡುವುದೇ ಪರಮಸುಖ. ಸಂಪಾದನೆ ನಿನ್ನದಾದರೆ ಲಾಭ ಸಮಾಜಕ್ಕೆ ಸೇರಬೇಕು. ಶರಣ ಸಂಸ್ಕೃತಿಯು ಇಂದಿನ ಜ್ವಲಂತ ಸಮಸ್ಯೆಗಳ ನಿರ್ಮೂಲನೆಗೆ ಇರುವ ಒಂದು ಉತ್ತರ. ಯೋಗಿ ಎಂದರೆ ಜಗತ್ತಿಗೆ ಅನ್ನ ಕೊಡುವವನು. ಕೃಷಿಕರ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗಬೇಕು. ಇಲ್ಲವಾದಲ್ಲಿ ರೈತರ ಸಂಖ್ಯೆ ಕಡಿಮೆಯಾಗುವ ಸಂಭವವಿದೆ. 

ಇದನ್ನೂ ಓದಿ: PHC ಗಳಲ್ಲಿ ವೈದ್ಯರು ಕಡ್ಡಾಯ ಹಾಜರಾತಿಗೆ ಸೂಚನೆ | ಜಿಪಂ ಸಿಇಒ ಆದೇಶ

ಎಲ್ಲಾ ಉದ್ಯೋಗಗಳಿಗಿಂತ ಕೃಷಿಯಿಂದ ಹೆಚ್ಚಿನ ಮಾನ್ಯತೆ ದೊರೆಯುತ್ತದೆ. ನಮ್ಮ ಯೋಚನೆ ವಿಚಾರ ಕೃತಿಗಳಲ್ಲಿ ಹತ್ತಿರ ಸಂಬಂಧವಿರಬೇಕು. ಜಾಗತಿಕ ಪರಿವರ್ತನೆಗೆ ಶರಣ ಸಂಸ್ಕೃತಿ ಸಹಕಾರವಾಗಿದೆ ಎಂದು ನುಡಿದರು.

ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಅಧ್ಯಕ್ಷ ಶಿವಯೋಗಿ ಸಿ ಕಳಸದ ಮಾತನಾಡಿ, ಕೃಷಿಯಲ್ಲಿ ಆಸಕ್ತಿ ಇರುವವರನ್ನು ಸೇರಿಸಿ ಉತ್ತಮ ವೇದಿಕೆಯನ್ನು ಶ್ರೀಮಠದ ವತಿಯಿಂದ ಕಲ್ಪಿಸಿಕೊಡುತ್ತೇವೆ. ರೈತರ ಬೆಳೆಗೆ ಯೋಗ್ಯವಾದ ಬೆಲೆ ಬರುವಲ್ಲಿ ಶ್ರಮಿಸಬೇಕಿದೆ. 

ಶ್ರೀಮಠವು ಅನೇಕ ಜಾಗದಲ್ಲಿ ಉಪಯೋಗವಾಗುವಂತೆ ಗಿಡಮರ, ತೋಟಗಾರಿಕೆಯನ್ನು ಶ್ರೀಮಠದ ವತಿಯಿಂದ ಮಾಡಿಸುತ್ತಿದ್ದೇವೆ. ಕೃಷಿ ಪದ್ಧತಿ ದಾಖಲಾತಿಯನ್ನು ಮುಂದಿನ ಪೀಳಿಗೆಗೆ ಅನುಕೂಲವಾಗುವಂತೆ ಮಾಡಲು ಶ್ರೀಮಠ ಬದ್ಧವಾಗಿದೆ.  ಶ್ರೀಮಠದ ಮುಂದಿನ ಕಾರ್ಯಕ್ರಮಗಳಲ್ಲಿ ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಕರೆ ನೀಡಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ರೈತರು ಅನ್ನ ಕೊಡುತ್ತಾರೆ, ಆದರೆ ಅವರೇ ಬಡವರು ಎಂಬ ಮಾತಿದೆ. ಅದಕ್ಕೆ ನಾವು ರೈತರು ಬೆಳೆದ ಬೆಳೆಗೆ ಬೆಂಬಲ ನೀಡುವಂತೆ ಕೇಳುತ್ತಿದ್ದೇವೆ. 

ಇದನ್ನೂ ಓದಿ: ನಾಗರಿಕ ಸೇವಾ ಹುದ್ದೆಗಳ ನೇಮಕಾತಿ | 3 ವರ್ಷ ವಯೋಮಿತಿ ಸಡಿಲಿಕೆ | ರಾಜ್ಯ ಸರ್ಕಾರ ಆದೇಶ 

ನಮ್ಮ ರೈತರ ಆದಾಯ ಹೆಚ್ಚು ಮಾಡದಿದ್ದರೆ, ನಮ್ಮ ರೈತರ ಸಂಖ್ಯೆ ಕಡಿಮೆಯಾಗುತ್ತದೆ. ಜೊತೆಗೆ ರೈತರು ಬಹುಬೆಳ ಪದ್ಧತಿ ಅಳವಡಿಸಿಕೊಳ್ಳಬೇಕಿದೆ. ರೈತರು ಮಾರುಕಟ್ಟೆ ಪದ್ಧತಿಯನ್ನು ಕೃಷಿ ಸಹಕಾರ ಸಂಘಗಳ ಮೂಲಕ ಮಾಡಬೇಕಾಗಿದೆ. ಗಾಂಧೀಜಿಯವರ ಗ್ರಾಮ ಸ್ವರಾಜ್ ಕಲ್ಪನೆಯನ್ನು, ರೈತರ ಸಮಸ್ಯೆಗಳನ್ನು ರೈತರೇ ಪರಿಹಾರೋಪಾಯ ಮಾಡಿಕೊಂಡರೆ ಸಾಧ್ಯ ಎಂದು ನುಡಿದರು.

ಅಕ್ಕಡಿ ಬೇಸಾಯ ತಜ್ಞರಾದ ಅರಿವು ಪ್ರಭಾಕರ್ ಬಿ ಮಾತನಾಡಿ, ನಾನು ರೈತರ ಅನುಭವ ಎಂಬ ಸಂಸ್ಥೆ ಸ್ಥಾಪಿಸಿದ್ದೇನೆ. ಅಕ್ಷಯಪಾತ್ರೆಯ ರೂಪದಲ್ಲಿ 18 ಬೆಳೆಗಳನ್ನು ಅಕ್ಕಡಿ ಸಾಲುಗಳ ಮೂಲಕ ಬೆಳೆಯಬಹುದು. ಮಳೆಯ ಮುಖಾಂತರ ಈ ಬೆಳೆಗಳನ್ನು ಬೆಳೆಯಬಹುದು. ಬೆಳಗಾವಿಯನ್ನು ಬೆಳೆಕಾಳು ರಾಜ ಎನ್ನುತ್ತಾರೆ. ನಮ್ಮ ಪೂರ್ವಜರು ಮಾಡಿದ ನೈಸರ್ಗಿಕ ಬೇಸಾಯ ಪದ್ಧತಿಯಲ್ಲಿ ಬೇಸಾಯ ಮಾಡುವುದರಿಂದ ಪೌಷ್ಟಿಕಾಂಶಯುತವಾದ ಬೆಳೆಯನ್ನು ಬೆಳೆಯಬಹುದು ಎಂದರು.

ಹುಲಿಕೆರೆ ಕೃಷಿಕರಾದ ವಿಶ್ವೇಶ್ವರ ಸಜ್ಜನ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ ನಾರಾಣಾಪುರ, ಶಿವಮೊಗ್ಗ ಪಶುವೈದ್ಯಾಧಿಕಾರಿ ಡಾ. ಟಿ.ವಿ.ಗಿರೀಶ್ ಜಲತಜ್ಞರಾದ ಡಾ.ದೇವರಾಜರೆಡ್ಡಿ, ಮಹಮ್ಮದ್ ನೂರುಲ್ಲಾ, ಮಂಗಳಾ ಕಿರಣ್ ನೀಲಗುಂದ, ಹಾವೇರಿಯ ಸಿದ್ದನಗೌಡ ಪಾಟೀಲ್ ಮಾತನಾಡಿದರು.

ಇದನ್ನೂ ಓದಿ: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅಧಿಕಾರ ಸ್ವೀಕಾರ

ಗೋಕಾಕ್ ಶ್ರೀ ಶೂನ್ಯ ಸಂಪಾದನೆ ಮಠದ ಮುರುಘರಾಜೇಂದ್ರ ಸ್ವಾಮಿಗಳು, ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ, ಶ್ರೀ ವಚನಾನಂದ ಸ್ವಾಮೀಜಿ, ಭದ್ರಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿ ಅಧ್ಯಕ್ಷ ಲಿಂಗಾರೆಡ್ಡಿ, ರೈತಸಂಘದ ಅಧ್ಯಕ್ಷ ಬಡಗಲಪುರದ ನಾಗೇಂದ್ರ, ಸಂಗನಗೌಡ ಪಾಟೀಲ್, ಹೆಚ್.ಎನ್.ಸೋಮಶೇಖರಪ್ಪ, ಕೆ. ಚಿಕ್ಕಣ್ಣ, ಶಾಂತಅಶೋಕ್, ಧನಂಜಯ, ಕೆಸಿ ಹೊರಕೇರಪ್ಪ, ರೆಡ್ಡಿಹಳ್ಳಿ ವೀರಣ್ಣ, ಭೂತಯ್ಯ, ಸಿದ್ದರಾಮಪ್ಪ ಹಿರಿಯೂರು, ತಿಮ್ಮಯ್ಯ, ಬಸ್ತಹಳ್ಳಿ ಸುರೇಶ್ ಬಾಬು, ಚಿಕ್ಕಪ್ಪನಳ್ಳಿ ರುದ್ರಸ್ವಾಮಿ, ಚಿಕ್ಕಪ್ಪನಹಳ್ಳಿ ಎನ್.ಜೆ.ಸಂತೋಷ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಳಗುಂದ ಸಮಗ್ರ ಕೃಷಿಕರಾದ ಮಂಗಳ ಕಿರಣ್ ನೀಲಗುಂದ, ರಾಜಶೇಖರ ನಿಂಬರಗಿ, ಕೊರಟಗೆರೆ ತಾಲೂಕು ಪಾತಗನಹಳ್ಳಿ ಎ.ಎಸ್.ನಟರಾಜ್, ಮಂಡ್ಯ ಜಿಲ್ಲೆ ಸಾತೇನಹಳ್ಳಿ ನೈಸರ್ಗಿಕ ಕೃಷಿಕಾರದ ಕುಮಾರಸ್ವಾಮಿ, ತಿಪಟೂರು ಜಾಬಘಟ್ಟ ಆರ್.ರಮೇಶ್, ಮಹಮದ್ ನೂರುಲ್ಲಾ ಇವರನ್ನು ಸನ್ಮಾನಿಸಲಾಯಿತು.

ಹಸುವಿಗೆ ಮೇವು ತಿನ್ನಿಸಿದರ ಮೂಲಕ ಸಾಕುಪ್ರಾಣಿಗಳ ಪ್ರದರ್ಶನವನ್ನು ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್.ಜೆ.ಎಂ.ವಿದ್ಯಾಪೀಠದ ಆಡಳಿತಮಂಡಳಿಯ ಅಧ್ಯಕ್ಷರಾದ ಶ್ರೀ ಶಿವಯೋಗಿ ಸಿ ಕಳಸದರವರು ಉದ್ಘಾಟಿಸಿದರು. ವಿವಿಧ ತಳಿಗಳಾದ ಹಳ್ಳಿಕಾರು, ಅಮೃತ ಮಹಲ್, ಶಿಲಾರಿ ಸ್ಥಳೀಯ ಎತ್ತುಗಳು, ಜಾಫರ್, ಬಾಡಿ, ಮುರ ತಳಿಯ ಎಮ್ಮೆಗಳು, ಜರ್ಸಿ, ಮಲೆನಾಡಗಿಡ್ಡ ತಳಿಯ ಆಕಳುಗಳು, ನಂದಿ ದುರ್ಗದ ಮೇಕೆಗಳು, ಕೋಳಿ, ಕುದುರೆ ವಿವಿಧ ಗಿಳಿಗಳು ಪ್ರದರ್ಶನಗೊಂಡವು. 

ಇದನ್ನೂ ಓದಿ: ಕೋಟೆ ಇತಿಹಾಸ ಸಾರುವಲ್ಲಿ ಪ್ರವಾಸಿ ಮಾರ್ಗದರ್ಶಿಗಳ ಪಾತ್ರ ಮುಖ್ಯ | ತಹಶೀಲ್ದಾರ್ ನಾಗವೇಣಿ

ಕೃಷಿ ಮತ್ತು ಕೈಗಾರಿಕಾ ಮೇಳದಲ್ಲಿ ಎಸ್‌ಜೆಎಂ ತಾಂತ್ರಿಕ ಮಹಾವಿದ್ಯಾಲಯದ ಜೈವಿಕ ಇಂಧನ ಉತ್ಪನ್ನದ ಘಟಕ, ಅಮೃತ್ ಆರ್ಗ್ಯಾನಿಕ್ ಫರ್ಟಿಲೈಜರ್ಸ್, ವಾಹಿನಿಪೈಪ್ಸ್, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಅಭಿವೃದ್ಧಿ ಉದ್ಯಮಶೀಲತಾ ಅಭಿವೃದ್ಧಿ ಇಲಾಖೆ, ರೇಷ್ಮೆ ಇಲಾಖೆ, ಚಳ್ಳಕೆರೆಯ ಹೂವಿನ ಹಾರ ಹಾಗೂ ರೊಟ್ಟಿ ಉತ್ಪಾದನೆ, ಸೆಲ್ಕೋ ಸೋಲಾರ್ ಲೈಟಿಂಗ್ ವಿದ್ಯುತ್ ಉತ್ಪಾದನೆ, ಕಾಟನ್ ಬ್ಯಾಗು ಉತ್ಪಾದನೆ ಮಾರಾಟ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕ¯ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಶಿವಮೊಗ್ಗದ ಅಂಜನಾ ಆರ್ಗಾನಿಕ್ಸ್, ಚಿತ್ರದುರ್ಗದ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಕೈಮಗ್ಗ ಮತ್ತು ಜವಳಿ ಇಲಾಖೆ, ಕಡೂರಿನ ಅಡಿಕೆ ಬೇಸಾಯ, ತರೀಕೆರೆಯ ಸ್ವಸಹಾಯ ಸಂಘದ ತರಕಾರಿಬೀಜ ಉತ್ಪಾದನೆ, ಶ್ರೀ ಕಲ್ಲೇಶ್ವರ ಕಾಯರ್ ಇಂಡಸ್ಟ್ರೀಸ್ ಅಂಡ್ ಆರ್ಗಾನಿಕ್ ಮ್ಯಾನುಫ್ಯಾಕ್ಚರರ್ಸ್, ಬಸವೇಶ್ವರ ವೈದ್ಯಕೀಯ ಆರೋಗ್ಯ ತಪಾಸಣೆಯ ಮಾಹಿತಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಸಮಗ್ರ ಮಕ್ಕಳ ರಕ್ಷಣೆ, ಸಾಮಾಜಿಕ ಅರಣ್ಯ ವಿಭಾಗ ಜಿಲ್ಲಾ ಪಂಚಾಯತ್, ಚಿತ್ರದುರ್ಗ ಜಲಸಂಪನ್ಮೂಲ ಇಲಾಖೆ ವಿಶ್ವೇಶ್ವರಯ್ಯ ಜಲನಿಗಮ ಮಂಡಳಿ, ಭದ್ರಾ ಮೇಲ್ದಂಡೆ ಯೋಜನೆ, ವಾಹಿನಿ ಪಾಲಿಟೆಕ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್, ಶ್ರೀದೇವಿ ಸ್ತ್ರೀಶಕ್ತಿ ಮಹಿಳಾ ಸಂಘ ಕೃಷಿ ಮತ್ತು ವಸ್ತು ಪ್ರದರ್ಶನ, ತಾಲೂಕು ಪಂಚಾಯತ್ ಸಿರಿಧಾನ್ಯ ವಸ್ತುಗಳ ಮಾಹಿತಿ, ಸಹಾಯಕ ಕೃಷಿ ನಿರ್ದೇಶನಾಲಯ ಚಿತ್ರದುರ್ಗ, ವರ್ಷ ಕೃಷಿ ಉಪಕರಣಗಳು ಚಿತ್ರದುರ್ಗ ಪ್ರದರ್ಶನಗೊಂಡವು.

ಕೃಷಿ ಮತ್ತು ಕೈಗಾರಿಕ ವಸ್ತು ಪ್ರದರ್ಶನದಲ್ಲಿ ಕೃಷಿ ಇಲಾಖೆ, ಚಿತ್ರದುರ್ಗ ಪ್ರಥಮ, ತೋಟಗಾರಿಕಾ ಇಲಾಖೆ ಚಿತ್ರದುರ್ಗ ದ್ವಿತೀಯ, ಭದ್ರಾ ಮೇಲ್ದಂಡೆ ಯೋಜನೆ ತೃತೀಯ, ಜಿಲ್ಲಾ ಪಂಚಾಯತ್ ಮಹಿಳಾ ಸಂಘ ಸಮಾಧಾನಕರ ಬಹುಮಾನಗಳನ್ನು ಪಡೆದವು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Agricultural fairChitradurgaChitradurga newsMuruga Mathಕೃಷಿ ಮೇಳಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠ
Share This Article
Facebook Email Print
Previous Article ಚಿತ್ರದುರ್ಗ ಜಿಲ್ಲೆ ಬರಪೀಡಿತ ಎಂದು ಘೋಷಿಸಿ | ಪ್ರತಿಭಟನೆ
Next Article today bhavishya ದಿನ ಭವಿಷ್ಯ | ಅಕ್ಟೋಬರ್ 01 |ಹಠಾತ್ ಆರ್ಥಿಕ ಲಾಭ, ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶ, ಆದಾಯಕ್ಕಿಂತ ಖರ್ಚು ಹೆಚ್ಚು
Leave a Comment

Leave a Reply Cancel reply

Your email address will not be published. Required fields are marked *

JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಮುಖ್ಯ ಸುದ್ದಿ
ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
ಮುಖ್ಯ ಸುದ್ದಿ
ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up