ಚಿತ್ರದುರ್ಗ ನ್ಯೂಸ್: ಸಕಾಲಕ್ಕೆ ಮಳೆಯಾಗದೆ ಚಿತ್ರದುರ್ಗ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬರ ಘೋಷಣೆಗೆ ಈಗಾಗಲೇ ಎಲ್ಲೆಡೆಯಿಂದ ಆಗ್ರಹ ಕೇಳಿ ಬರುತ್ತಿದೆ. ಇದೇ ವೇಳೆ ಕೃಷಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಇಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು ಕುತೂಹಲ ಮೂಡಿಸಿದೆ. ಬರ ಘೋಷಣೆ ಹಿನ್ನೆಲೆಯಲ್ಲೇ ಸಚಿವರು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆಯೇ ಎನ್ನುವ ಕುತೂಹಲ ರೈತರಲ್ಲಿ ಮನೆ ಮಾಡಿದೆ. ಬೆಳಗ್ಗೆ 7 ಗಂಟೆಗೆ ಬೆಂಗಳೂರಿನಿAದ ಹೊರಟಿರುವ ಕೃಷಿ ಸಚಿವರು ಚಿತ್ರದುರ್ಗ ಜಿಲ್ಲೆಯಲ್ಲಿ ಸಂಜೆ 4 ಗಂಟೆವರೆಗೆ ಇರಲಿದ್ದಾರೆ.
ಇಡೀ ದಿನ ಕೃಷಿ ಸಚಿವರ ಕಾರ್ಯ ಚಟುವಟಿಕೆಗಳು ಏನೇನಿದೆ. ಎಲ್ಲೆಲ್ಲಿ ಪ್ರವಾಸ ಮಾಡುತ್ತಾರೆ, ಯಾರನ್ನೆಲ್ಲಾ ಭೇಟಿ ಮಾಡುತ್ತಾರೆ ಎಂಬ ಸಂಪೂರ್ಣ ವಿವರ ಇಲ್ಲಿದೆ.
- ಮಂಗಳವಾರ ಬೆ:ಳಗ್ಗೆ 7 ಗಂಟೆಗೆ ಬೆಂಗಳೂರಿನಿAದ ಹೊರಟು ಬೆಳಿಗ್ಗೆ 9.30ಕ್ಕೆ ಚಿತ್ರದುರ್ಗ ಸರ್ಕಾರಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು.
- ನಂತರ ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಕೃಷಿ ಇಲಾಖಾ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬೆಳಿಗ್ಗೆ 10.45ಕ್ಕೆ ಪಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ.
- ಬೆಳಿಗ್ಗೆ 11.15ಕ್ಕೆ ಚಿತ್ರದುರ್ಗ ತಾಲ್ಲೂಕಿನ ದೊಡ್ಡಸಿದ್ದವನಹಳ್ಳಿಯಲ್ಲಿ ಸಾವಯವ ಹಾಗೂ ಸಮಗ್ರ ಕೃಷಿ ತೋಟ ವೀಕ್ಷಣೆ ಮಾಡುವರು. 11.30ಕ್ಕೆ ಚಿತ್ರದುರ್ಗ ತಾಲ್ಲೂಕಿನ ಲಕ್ಷಿö್ಮÃಸಾಗರ ಗ್ರಾಮದ ಮೆಕ್ಕೆಜೋಳ ಹಾನಿಗೊಳಗಾದ ತಾಕುಗಳ ವೀಕ್ಷಣೆ ಮಾಡುವರು.
- ಮಧ್ಯಾಹ್ನ 12ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವ ತುಂತುರು ನೀರಾವರಿ ಯಂತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12.15 ರಿಂದ 1.15 ರವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೃಷಿ ತಜ್ಞರು, ಪ್ರಗತಿಪರ ಕೃಷಿಕರು, ಕೃಷಿ ಸಾಧಕರು ಹಾಗೂ ಎಫ್ಪಿಒ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
- ಮಧ್ಯಾಹ್ನ 1.15ಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೊಷ್ಠಿ ನಡೆಸುವರು. ಮಧ್ಯಾಹ್ನ 2.15ಕ್ಕೆ ಚಿತ್ರದುರ್ಗದಿಂದ ನಿರ್ಗಮಿಸಿ, ಮಧ್ಯಾಹ್ನ 2.30ಕ್ಕೆ ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ ಗ್ರಾಮದ ಹೊಲಗಳಲ್ಲಿ ಲೇಜರ್ ತಂತ್ರಜ್ಞಾನದಿAದ ಡ್ರಿಪ್ ಅಳವಡಿಕೆ ಮಾಡಿದ ಮೆಕ್ಕೆಜೋಳ ಕ್ಷೇತ್ರದ ವೀಕ್ಷಣೆ ಮಾಡುವರು.
- ಮಧ್ಯಾಹ್ನ 3.15ಕ್ಕೆ ಚಳ್ಳಕೆರೆ ತಾಲ್ಲೂಕಿನ ಜುಂಜರಗುAಟೆ ಗ್ರಾಮದ ಶೇಂಗಾ ಬೆಳೆ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವರು. 3.30ಕ್ಕೆ ಚಳ್ಳಕೆರೆ ತಾಲ್ಲೂಕಿನ ಚೌಳೂರು ಸಮೀಪದ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣದ ನಂತರ ಆಗಿರುವ ಬೆಳೆ ಪರಿವರ್ತನೆಯಾದ ತಾಕುಗಳಿಗೆ ಭೇಟಿ ನೀಡುವರು. ಸಂಜೆ 4 ಗಂಟೆಗೆ ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ಹುಣಸೆಹುಳಿ ಸಾರು, ಅನ್ನದ ನೇವೈದ್ಯಕ್ಕೆ ಒಲಿಯುವ ನಾಗಪ್ಪ: ದೊಡ್ಡಚೆಲ್ಲೂರು ಕಮರದ ಕಾಡಿನಲ್ಲಿ ನೆಲೆ ವಿಶಿಷ್ಟ ಆಚರಣೆ
(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ https://www.facebook.com/chitradurganews?mibextid=ZbWKwL)
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
