CHITRADURGA NEWS | 24 MAY 2026
ಚಿತ್ರದುರ್ಗ: ಹಿರಿಯೂರು ತಾಲೂಕು ಬಬ್ಬೂರು ತೋಟಗಾರಿಕೆ ಕೇಂದ್ರದಲ್ಲಿ ಮೇ 26ರಂದು ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ಮೇ 11 ರಿಂದ 31ರ ವರೆಗೆ ಸಿಯುಇಟಿ-ಐಸಿಎಆರ್ (CUET-ICAR) ಯುಜಿ ಪರೀಕ್ಷೆಗಳು ನಡೆಯಲಿರುವ ಕಾರಣ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮರು ಪರೀಕ್ಷೆಯ ದಿನಾಂಕವನ್ನು ಜೂನ್ 1ಕ್ಕೆ ಮುಂದೂಡಲಾಗಿದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಬೈಕ್ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
ಹಿರಿಯೂರು ತಾಲೂಕು ಬಬ್ಬೂರು ತೋಟಗಾರಿಕೆ ಮಹಾವಿದ್ಯಾಲಯ ಕೇಂದ್ರದಲ್ಲಿ ಮೇ 10ರಂದು ನಡೆದಿದ್ದ ಕೃಷಿಕರ ಕೋಟಾದ ಯುಜಿಸಿಇಟಿ-2026ರ ಕೃಷಿ ಪ್ರಾಯೋಗಿಕ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಈ ಕೇಂದ್ರದ ಅಭ್ಯರ್ಥಿಗಳಿಗೆ ಜೂನ್ 1ರಂದು ಮರು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ.
ಅಭ್ಯರ್ಥಿಗಳು ಮೇ 25 ರಿಂದ 29ರ ವರೆಗೆ ಅಧಿಕೃತ ವೆಬ್ಸೈಟ್ನಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಜೂನ್ 1ರಂದು ಬೆಳಿಗ್ಗೆ 9 ಗಂಟೆಗೆ ಪ್ರಾಯೋಗಿಕ ಮರು ಪರೀಕ್ಷೆ ಆರಂಭವಾಗಲಿದೆ. ಪರೀಕ್ಷೆ ಪೂರ್ಣಗೊಂಡ ತಕ್ಷಣವೇ ಮರು ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗುವುದು.
ಇದನ್ನೂ ಓದಿ:SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಲ್ಯೂಮಿನಿ ಮೀಟ್ – 2026
ಕಳೆದ ಮೇ 10ರಂದು ರಾಜ್ಯಾದ್ಯಂತ 17 ಕೇಂದ್ರಗಳಲ್ಲಿ ಕೃಷಿ ವಿಜ್ಞಾನ ಕೋರ್ಸ್ಗಳ ಆಯ್ಕೆಗಾಗಿ ಪ್ರಾಯೋಗಿಕ ಪರೀಕ್ಷೆ ನಡೆದಿತ್ತು. ಹಿರಿಯೂರು ಕೇಂದ್ರವೊಂದರಲ್ಲೇ ಸುಮಾರು 74 ವಿದ್ಯಾರ್ಥಿಗಳು 200ಕ್ಕೆ 200 ಅಂಕಗಳನ್ನು ಪಡೆದಿದ್ದರು. ಈ ಅಸಹಜ ಫಲಿತಾಂಶದಿಂದ ಪರೀಕ್ಷಾ ಅಕ್ರಮದ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ, ಪಾರದರ್ಶಕತೆ ಕಾಪಾಡಲು ಈ ಕೇಂದ್ರದಲ್ಲಿ ಮರು ಪರೀಕ್ಷೆಗೆ ಆದೇಶಿಸಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
