
CHITRADURGA NEWS | 27 AUGUST 2024
ಚಿತ್ರದುರ್ಗ: ಬೆಂಗಳೂರಿನಿಂದ ಹಾವೇರಿಗೆ ಮೃತದೇಹ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಪಾಲಿಗೆ ನಡು ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಯೇ ಜವರಾಯನಾಗಿದೆ.
ಮಂಗಳವಾರ ನಸುಕಿನಲ್ಲಿ ಹಾವೇರಿಗೆ ಶವ ಸಾಗಿಸುತ್ತಿದ್ದ ಅಂಬ್ಯುಲೆನ್ಸ್ ಚಿತ್ರದುರ್ಗ ಸಮೀಪದ ಬಳ್ಳೆಕಟ್ಟೆ ಬಳಿ ಕೆಟ್ಟು ನಿಂತಿದ್ದ ಅದಿರು ಸಾಗಾಣೆ ಮಾಡುವ ಲಾರಿಗೆ ಡಿಕ್ಕಿಯಾಗಿ ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ದೇವಸ್ಥಾನದಲ್ಲಿ ಗಲಾಟೆ | ಪರಸ್ಪರ ದೂರು ದಾಖಲು
ಹಾವೇರಿ ಮೂಲದ ಸರೋಜಮ್ಮ(60) ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅಂಬ್ಯುಲೆನ್ಸ್ ಚಾಲಕ ಮಂಜುನಾಥ್ ಸೇರಿದಂತೆ ಇನ್ನೂ ಇಬ್ಬರು ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ (National Highway) ನಡುವೆ ಕೆಟ್ಟಿದ್ದ ಲಾರಿಯನ್ನು ಚಾಲಕ ನಡು ರಸ್ತೆಯಲ್ಲೇ ನಿಲ್ಲಿಸಿ ರಿಪೇರಿ ಮಾಡುತ್ತಿದ್ದ ಎನ್ನಲಾಗಿದೆ. ವೇಗವಾಗಿ ಬಂದ ಅಂಬ್ಯುಲೆನ್ಸ್ ಲಾರಿಗೆ ಡಿಕ್ಕಿಯಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
