ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗದ ತುರುವನೂರು ರಸ್ತೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳ ಅಧಿಕಾರಿಗಳು, ಸಿಬ್ಬಂದಿಗಳ ಜೊತೆ ಎಸ್ಪಿ ಧಮೇಂದರ್ ಕುಮಾರ್ ಮೀನಾ ಮಹತ್ವದ ಸಭೆ ನಡೆಸಿದರು.

ಮುಂಬರುವ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬದ ವೇಳೆ ಶಾಂತಿ ಸುವ್ಯವಸ್ಥೆ ನೆಲೆಸುವಂತೆ ಮಾಡುವುದು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು.

ಇದನ್ನೂ ಓದಿ: ಕೆ.ಪರಶುರಾಮ್ ಇಂಟಲಿಜೆನ್ಸ್ ಎಸ್ಪಿ: ರಾಜ್ಯ ಸರ್ಕಾರದಿಂದ ನಿಯೋಜನೆ
ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆಗಮಿಸಿರುವ ಧಮೇಂದರ್ ಕುಮಾರ್ ಮೀನಾ ಇಡೀ ಜಿಲ್ಲೆ ಪ್ರವಾಸ ಮಾಡಿ, ಎಲ್ಲ ಠಾಣೆಗಳ ಸ್ಥಿತಿಗತಿಗಳನ್ನು ಅರಿತು, ಈಗ ಗಣೇಶೋತ್ಸವ ಆಚರಣೆಗಳ ವೇಳೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಿದರು.
ಮುಂದಿನ 15 ದಿನಗಳಲ್ಲಿ ಜಿಲ್ಲೆಯಾದ್ಯಂತ ಸಾರ್ವಜನಿಕ ಗಶೇಶೋತ್ಸವಗಳು, ಬೃಹತ್ ಮೆರವಣಿಗೆಗಳು, ವಿಸರ್ಜನಾ ಕಾರ್ಯಗಳು ನಡೆಯುವುದರಿಂದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಂದೋಬಸ್ತ್ ಕುರಿತು ಸೂಚನೆಗಳನ್ನು ನೀಡಿದರು ಎನ್ನಲಾಗಿದೆ.
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.
https://chat.whatsapp.com/EQUQpKalYFT1fVcJDTDjCk)


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
