By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಕೋಟೆನಾಡಿನಲ್ಲಿ ಕಸ ವಿಂಗಡಣೆಗೆ ವಿನೂತನ ಪ್ರಯೋಗ | ಚಿತ್ರದುರ್ಗ ನಗರಸಭೆಯಿಂದ ಕಾರ್ಡ್ ವಿತರಣೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಕೋಟೆನಾಡಿನಲ್ಲಿ ಕಸ ವಿಂಗಡಣೆಗೆ ವಿನೂತನ ಪ್ರಯೋಗ | ಚಿತ್ರದುರ್ಗ ನಗರಸಭೆಯಿಂದ ಕಾರ್ಡ್ ವಿತರಣೆ 

ಮುಖ್ಯ ಸುದ್ದಿ

ಕೋಟೆನಾಡಿನಲ್ಲಿ ಕಸ ವಿಂಗಡಣೆಗೆ ವಿನೂತನ ಪ್ರಯೋಗ | ಚಿತ್ರದುರ್ಗ ನಗರಸಭೆಯಿಂದ ಕಾರ್ಡ್ ವಿತರಣೆ 

News Desk Chitradurga News
Last updated: 4 July 2024 18:36
News Desk Chitradurga News
12 months ago
Share
ಚಿತ್ರದುರ್ಗ ನಗರಸಭೆಯಿಂದ ಕಾರ್ಡ್ ವಿತರಣೆ
ಚಿತ್ರದುರ್ಗ ನಗರಸಭೆಯಿಂದ ಕಾರ್ಡ್ ವಿತರಣೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 04 JULY 2024

ಚಿತ್ರದುರ್ಗ: ಮನೆ, ಅಂಗಡಿಗಳಲ್ಲಿ ಹಸಿ ಕಸ ಮತ್ತು ಒಣ ಕಸ ವಿಂಗಡಿಸಿ ನೀಡುವ ಕಾರ್ಡ್‍ಗಳನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಿತ್ರದುರ್ಗ ನಗರಸಭೆಯು ವಿತರಿಸಿದೆ.

ಇದನ್ನೂ ಓದಿ: ವಿಎಲ್‌ಟಿ, ಪ್ಯಾನಿಕ್‌ ಬಟನ್ ಅಳವಡಿಕೆ ಕಡ್ಡಾಯ | ನಿರ್ಲಕ್ಷಿಸಿದರೆ ₹ 1000 ದಂಡ ಖಚಿತ

ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ಪ್ರತಿ ಮನೆಗಳಿಗೂ ಹಸಿ ಕಸ ಮತ್ತು ಒಣ ಕಸ ವಿಂಗಡಣೆ ಮಾಡಿ, ನಗರಸಭೆಯ ವಾಹನಗಳಿಗೆ ನೀಡುವ ಬಗ್ಗೆ “ಸ್ವಚ್ಛ ಸರ್ವೇಕ್ಷಣೆ-2024ರ ಅಂಗವಾಗಿ ಮನೆ, ಅಂಗಡಿಗಳಲ್ಲಿ ಹಸಿ ಕಸ ಮತ್ತು ಒಣ ಕಸ ವಿಂಗಡಿಸಿ ನೀಡುವ ಕಾರ್ಡ್‍ಗಳನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿತರಿಸಲಾಗಿದ್ದು, ಮೂಲದಲ್ಲಿಯೇ ಕಸ ವಿಂಗಡಿಸಿ, ಸಂಗ್ರಹಿಸುವ ವಿನೂತನ ಪ್ರಯೋಗಕ್ಕೆ ನಗರಸಭೆ ಮುಂದಾಗಿದೆ.

ಪ್ರಾಯೋಗಿಕವಾಗಿ ನಾಲ್ಕು ತಿಂಗಳ ಅವಧಿಗೆ ಮುದ್ರಿಸಿ, ಏಪ್ರಿಲ್ ಮಾಹೆಯಲ್ಲಿ ವಾರ್ಡ್ ನಂ. 9 ರಿಂದ 17 ಒಟ್ಟು 9 ವಾರ್ಡ್‍ಗಳಲ್ಲಿ ಬರುವ ಎಲ್ಲಾ ಮನೆಗಳಿಗೂ ಹಂಚಲಾಗಿರುತ್ತದೆ. ಹಾಗೂ ಈ ಕುರಿತು ಪ್ರತಿನಿತ್ಯ ಪರಿಶೀಲನೆ ನಡೆಸಿದ್ದು, ಇದನ್ನು ಇತರೆ ವಾರ್ಡ್‍ಗಳಿಗೆ ಅನ್ವಯಿಸಿಲು ಯೋಚಿಸಿ, ಮೇ ಮಾಹೆಯಲ್ಲಿ ವಾರ್ಡ್ ನಂ.5, 6, 7, 24, 25, 26, 27 ಒಟ್ಟು 7 ವಾರ್ಡ್ ಮನೆಗಳಿಗೂ ಹಂಚಿ ಒಟ್ಟು 16 ವಾರ್ಡ್‍ಗಳಿಗೆ ನಾಲ್ಕು ತಿಂಗಳ ಕಾರ್ಡ್‍ನ್ನು ಹಂಚಲಾಗಿರುತ್ತದೆ.

ಮುಂದುವರೆದು ಚಿತ್ರದುರ್ಗ ನಗರಸಭೆ ವ್ಯಾಪ್ತಿಯ 35 ವಾರ್ಡ್‍ಗಳಿಗೂ ಈ ಸೌಲಭ್ಯ ನೀಡಲು ಜುಲೈ ಮಾಹೆಯಲ್ಲಿ ಆರು ತಿಂಗಳ ಅವಧಿಗೆ ಅಂದರೆ 2024ರ ಡಿಸೆಂಬರ್ ಅಂತ್ಯದವರೆಗೆ ಕಾರ್ಡ್‍ಗಳನ್ನು ಉಳಿದ 19 ವಾರ್ಡ್‍ಗಳಿಗೆ ಅಂದರೆ ವಾರ್ಡ್ ನಂ.1, 2, 3, 4, 8, 18, 19, 20, 21, 22, 23, 28, 29, 30, 31, 32, 33, 34, 35 ವಾರ್ಡ್‍ಗಳ ಪ್ರತಿ ಮನೆಗೂ ಕಾರ್ಡ್‍ನ್ನು ವಿತರಣೆ ಮಾಡಲಾಗಿರುತ್ತದೆ.

ಇದನ್ನೂ ಓದಿ: ವಾಹನ ಚಾಲಕರೇ ಎಚ್ಚರ…ನಗರದಲ್ಲಿ ಬಿಗಿಯಾಗಲಿದೆ ಟ್ರಾಫಿಕ್‌ ರೂಲ್ಸ್‌ | ಸಿದ್ಧವಾಗಿದೆ ಮಾಸ್ಟರ್‌ ಪ್ಲಾನ್‌

ಸಾರ್ವಜನಿಕರು ಈ ಕಾರ್ಯಕ್ಕೆ ಸಹಕರಿಸಿ, ಪ್ರತಿನಿತ್ಯವೂ ಹಸಿ ಕಸ, ಒಣ ಕಸ ವಿಂಗಡಣೆ ಮಾಡಿ ನಗರಸಭೆಯ ವಾಹನಗಳಿಗೆ ನೀಡಿ, ತಮಗೆ ವಿತರಿಸಿರುವ ಕಾರ್ಡ್‍ಗಳಲ್ಲಿ ದಾಖಲಿಸಲು ಮನವಿ ಮಾಡಿದೆ. ಒಂದು ವೇಳೆ ನಗರಸಭೆಯ ವಾಹನ ಪ್ರತಿ ದಿನ ಅಥವಾ 2 ದಿನಕ್ಕೊಮ್ಮೆ ನಿರಂತರವಾಗಿ ಬರುತ್ತಿರುವ ಬಗ್ಗೆ ಸಹ ಈ ಕಾರ್ಡ್‍ನಲ್ಲಿ ಮನೆಯ ಮಾಲೀಕರ ಸಹಿ ಹಾಕುವುದರಿಂದ ತಿಳಿದುಬರುತ್ತದೆ.

ಎರಡು-ಮೂರು ತಿಂಗಳ ಅವಧಿಯಲ್ಲಿ ಸಾರ್ವಜನಿಕರಿಗೆ ನಗರಸಭೆಯ ಸಿಬ್ಬಂದಿಗಳು ಹಾಗೂ ಆರೋಗ್ಯ ನಿರೀಕ್ಷಕರು ಅರಿವು ಮೂಡಿಸಲು ಸೂಚಿಸಲಾಗಿರುತ್ತದೆ. ಆ ನಂತರವೂ ಸಹ ಸಾರ್ವಜನಿಕರು ಕಸವನ್ನು ವಿಂಗಡಿಸಿ ನಗರಸಭೆಯ ವಾಹನಗಳಿಗೆ ನೀಡದೇ ಇದ್ದರೆ, ದಂಡ ವಿಧಿಸಲು ಚಿಂತಿಸಲಾಗಿರುತ್ತದೆ.

ಚಿತ್ರದುರ್ಗ ನಗರವು ಐತಿಹಾಸಿಕ ನಗರವಾಗಿದ್ದು, ನಗರ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಎಲ್ಲರ ಹೊಣೆ. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ. ಪ್ರತಿ ದಿನ ಮನೆ, ಅಂಗಡಿಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ರಸ್ತೆಗೆ, ಚರಂಡಿಗೆ ಹಾಕದೇ ಹಸಿ ಕಸ, ಒಣ ಕಸವನ್ನಾಗಿ ಬೇರ್ಪಡಿಸಿ ನಗರಸಭೆಯ ವಾಹನ ಮನೆ ಬಾಗಿಲಿಗೆ ಬಂದಾಗ ನೀಡಲು ಪ್ರತಿ ನಿತ್ಯ ಕಸದ ವಾಹನಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ.

ಇದನ್ನೂ ಓದಿ: 15 ರ ಬದಲು 21 ಮೀಟರ್ ಮುಖ್ಯ ರಸ್ತೆ ವಿಸ್ತರಿಸಿ | ಜಿಲ್ಲಾಧಿಕಾರಿಗೆ ಪತ್ರ

ಆದರೂ ಸಹ ಇನ್ನೂ ಪೂರ್ಣ ಪ್ರಮಾಣದಲ್ಲಿ ಹಸಿ ಕಸ, ಒಣ ಕಸ ವಿಂಗಡಿಸಿ, ನಗರಸಭೆಯ ವಾಹನಗಳಿಗೆ ನೀಡದೇ ರಸ್ತೆ, ಚರಂಡಿ ಮತ್ತು ಖಾಲಿ ನಿವೇಶನಗಳಲ್ಲಿ ಸಾರ್ವಜನಿಕರು ಎಸೆಯುತ್ತಿರುವುದು ಕಂಡುಬಂದಿರುತ್ತದೆ. ಹಸಿ ಕಸ, ಒಣ ಕಸವನ್ನಾಗಿ ವಿಂಗಡಿಸಿ, ನಗರಸಭೆಯ ವಾಹನಗಳಿಗೆ ನೀಡಿದರೆ, ಚಿತ್ರದುರ್ಗ ನಗರವನ್ನು ಸ್ವಚ್ಛ, ಸುಂದರ ನಗರವನ್ನಾಗಿ ಮಾಡಲು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರಾದ ಎಂ.ರೇಣುಕಾ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CardChitradurga newsCity CouncildeliveryexperimentgarbageinnovationKannada Newsto sortingಕನ್ನಡ ನ್ಯೂಸ್ಕಸಕಾರ್ಡ್ಚಿತ್ರದುರ್ಗ ನ್ಯೂಸ್ನಗರಸಭೆಪ್ರಯೋಗವಿಂಗಡಣೆಗೆವಿತರಣೆವಿನೂತನ
Share This Article
Facebook Email Print
Previous Article ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪಿಹೆಚ್‍ಡಿ ಫೆಲೋಶಿಪ್ | ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Next Article fort light ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ | ಜಿಲ್ಲಾಧಿಕಾರಿ ಟಿ.ವೆಂಕಟೇಶ್
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up