
CHITRADURGA NEWS | 15 SEPTEMBER 2025
ಚಿತ್ರದುರ್ಗ: ಅಭಿವೃದ್ಧಿಗೆ ಅಧಿಕಾರಿಗಳು, ಸಿಬ್ಬಂದಿಯ ಸಹಕಾರ ಮುಖ್ಯ. ಸೇವಾ ಮನೋಭಾವದಿಂದ ತಮ್ಮ ಕರ್ತವ್ಯ ಮಾಡಿದಾಗ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ ಎಂದು ನಗರಸಭೆ ನೂತನ ಅಧ್ಯಕ್ಷೆ ಎಂ.ಪಿ.ಅನಿತಾ ರಮೇಶ್ ಹೇಳಿದರು.
ಇದನ್ನೂ ಓದಿ: ಅಣಬೆ ಬೇಸಾಯ ಕುರಿತು ತರಬೇತಿ | 50 ಜನ ರೈತರಿಗೆ ಅಹ್ವಾನ

ನಗರಸಭೆ ಕಚೇರಿಯಲ್ಲಿ ಸೋಮವಾರ ಅಧಿಕಾರ ಸ್ವಿಕಾರಿಸಿದ ಬಳಿಕ ಮಾತನಾಡಿದ ಅವರು, ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಚುನಾಯಿತ ಪ್ರತಿನಿಧಿಗಳ ನಡುವೆ ಉತ್ತಮ ಬಾಂಧವ್ಯ ಇದ್ದರೆ ಮಾತ್ರ ಪ್ರಗತಿ ಕಾಣಲು ಸಾಧ್ಯ. ಎಲ್ಲರೂ ಅವರ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಿ. ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದರು.
ಚಿತ್ರದುರ್ಗ ನಗರಸಭೆ ವ್ಯಾಪ್ತಿ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. ಸಮಸ್ಯೆಗಳೂ ಅಷ್ಟೇ ಪ್ರಮಾಣದಲ್ಲಿ ಉಲ್ಬಣವಾಗುವುದು ಸಹಜ. ಆದರೆ, ಸಾರ್ವಜನಿಕ ಕ್ಷೇತ್ರದಲ್ಲಿರುವ ನಾವು ನಮ್ಮ ಕರ್ತವ್ಯಗಳಿಂದ ವಿಮುಖರಾಗಬಾರದು ಎಂದು ಹೇಳಿದರು.
ನಗರಸಭೆ ಊಪಾಧ್ಯಕ್ಷೆ ಶಕೀಲಾಭಾನು ನೂತನ ಅಧ್ಯಕ್ಷೆ ಎಂ.ಪಿ.ಅನಿತಾ ರಮೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಇದನ್ನೂ ಓದಿ: ಕನ್ನಡ ಜಾಗೃತಿ ಸಮಿತಿ | ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ, ಸಂಗೇನಹಳ್ಳಿ ಅಶೋಕ್ಕುಮಾರ್ ಸೇರಿ ಐವರ ನೇಮಕ
ಪೌರಾಯುಕ್ತರಾದ ಲಕ್ಷ್ಮೀ, ಸ್ಥಾಯಿ ಸಮಿತಿ ಅಧ್ಯಕ್ಷ ನಸ್ರುಲ್ಲಾ, ನಗರಸಭೆ ಸದಸ್ಯ ಟಿ.ರಮೇಶ್, ಮೀನಾಕ್ಷಿ, ಹರಿಶ್, ನರಸಿಂಹಮೂರ್ತಿ, ಶ್ರೀನಿವಾಸ್, ನಗರಸಭೆ ಅಧಿಕಾರಿಗಳಾದ ರೇಣುಕಾ, ಇಂಜಿನಿಯರ್ ರಾಜು, ಗುತ್ತಿಗೆದಾರ ಈ.ಶಿವಕುಮಾರ್ ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
