
ಚಿತ್ರದುರ್ಗ ನ್ಯೂಸ್.ಕಾಂ: ಹೊಳಲ್ಕೆರೆ ತಾಲೂಕಿನ ಕುಮ್ಮಿನಘಟ್ಟದ ಗುಡ್ಡದ ಮೇಲಿರುವ ಶ್ರೀ ಗುಡ್ಡದ ತಿಮ್ಮಪ್ಪ ದೇವಸ್ಥಾನದಲ್ಲಿ ಶನಿವಾರ ಮಹಾಲಯ ಅಮಾವಾಸ್ಯೆ ಅಂಗವಾಗಿ ಅನ್ನದ ಕೋಟೆ ಕಾರ್ಯಕ್ರಮ ಜರುಗಿತು.
ಮಹಾಲಯ ಅಮಾವಾಸ್ಯೆ ಪ್ರಯುಕ್ತ ಪ್ರತಿ ವರ್ಷದಂತೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅನ್ನದ ಕೋಟೆ ನಿರ್ಮಿಸಿ ಭಕ್ತರು ತಮ್ಮ ಹರಕೆ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಇದನ್ನೂ ಓದಿ: ಕೆರೆಯಲ್ಲಿ ಮುಳುಗಿ ದಡ ಸೇರಿದರೂ ಬಿಡದ ಜವರಾಯ
ದೇವಸ್ಥಾನದ ಮುಂಭಾಗದಲ್ಲಿ 6 ಅಡಿ ಅಗಲ 6 ಅಡಿ ಉದ್ದ 2 ಅಡಿ ಎತ್ತರದ ಅನ್ನದ ಕೋಟೆಯನ್ನು ನಿರ್ಮಿಸಿ ಅದಕ್ಕೆ ಬೆಲ್ಲ ಬಾಳೆಹಣ್ಣು, ದ್ರಾಕ್ಷಿ ಗೋಡಂಬಿ ತುಪ್ಪ ಎಳ್ಳು ಸೂಸಲು ಮತ್ತಿತರ ವಸ್ತುಗಳನ್ನು ಭಕ್ತರು ಸಮರ್ಪಣೆ ಮಾಡಿದರು.
ಮಹಾ ಮಂಗಳಾರತಿ ನಂತರ ದಾಸಯ್ಯನವರು ದೊಡ್ಡೆಡೆ ಸೇವೆ ಸಲ್ಲಿಸಿದರು. ಭಾಗವಹಿಸಿದ್ದ ಸಾವಿರಾರು ಭಕ್ತರು ಪ್ರಸಾದ ಸ್ವೀಕರಿಸಿದರು.
ಈ ಕಾರ್ಯಕ್ರಮದಲ್ಲಿ ಹೊಳಲ್ಕೆರೆಯ ಶಾಸಕರಾದ ಡಾ.ಎಂ. ಚಂದ್ರಪ್ಪ ಕೂಡಾ ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
