CHITRADURGA NEWS | 17 FEBRUARY 2024
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯಲು ತಾಲ್ಲೂಕು ಕೇಂದ್ರಗಳು ಸರಣಿಯಂತೆ ಬಂದ್ ಮಾಡಲಾಗಿದೆ. ಇದೀಗ ಮೊಳಕಾಲ್ಮುರು ಬಂದ್ ನಡೆಸಲು ನಿರ್ಧರಿಸಲಾಗಿದೆ.
ತಾಲ್ಲೂಕಿಗೆ ಭದ್ರಾ ಮೇಲ್ದಂಡೆ ಯೋಜನೆಯಡಿ ನೀರು ತರಲಾಗುವುದು ಎಂದು ಹೇಳಿ ಹಲವು ದಶಕಗಳಿಂದ ವಂಚಿಸಲಾಗುತ್ತಿದೆ. ಚುನಾವಣೆ ಸಂದರ್ಭಗಳಲ್ಲಿ ಸುಳ್ಳು ಭರವಸೆಗಳನ್ನು ನೀಡಲಾಗುತ್ತಿದೆ. ಫೆ.21ರಂದು ಮತ್ತೊಮ್ಮೆ ಸಂಘಟನೆಗಳ ಸಭೆ ಕರೆದು ಬಂದ್ ದಿನಾಂಕ ಪ್ರಕಟಿಸುವ ಬಗ್ಗೆ ಸಂಘಟನೆಗಳ ಮುಖಂಡರು ನಿರ್ಧರಿಸಿದ್ದಾರೆ.
ತೀರಾ ಕಡಿಮೆ ಮಳೆ ಬೀಳುವ ಇಲ್ಲಿ ನೀರಿನ ಕೊರತೆಯಿಂದಾಗಿ ಜನ, ಜಾನುವಾರು ಜೀವನ ನಡೆಸುವುದು ಕಷ್ಟವಾಗುತ್ತಿದೆ. ಆದ್ದರಿಂದ ಬಂದ್ ಮೂಲಕ ನಮ್ಮ ಆಕ್ರೋಶ ಮತ್ತು ಅಳಲನ್ನು ಸರ್ಕಾರಕ್ಕೆ ಮುಟ್ಟಿಸಬೇಕಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಇದನ್ನೂ ಓದಿ: 12 ಪೆಟ್ಟಿಗೆ ದೇವರುಗಳ ಗುಗ್ಗರಿ ಹಬ್ಬ ಮಹೋತ್ಸವ | ಮೂರು ದಿನ ಸಂಭ್ರಮ
ಪಟ್ಟಣದಲ್ಲಿ 5 ವರ್ಷಗಳ ನಂತರ ಐತಿಹಾಸಿಕ ನುಂಕಪ್ಪ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಧಾರ್ಮಿಕ ಸಿದ್ಧತೆಗಳು ನಡೆಸಿದ್ದು, ಇದಕ್ಕೆ ತೊಂದರೆಯಾಗದಂತೆ ಜಾತ್ರೆ ನಂತರ ಬಂದ್ ಆಚರಿಸುವುದು ಸೂಕ್ತ ಎಂದು ಕೆಲವರು ಸಲಹೆ ನೀಡಿದರು.
ರೈತ ಮುಖಂಡರಾದ ಆರ್. ನಿಜಲಿಂಗಪ್ಪ, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಮರ್ಲಹಳ್ಳಿ ರವಿಕುಮಾರ್, ಎಸ್. ಮಂಜುನಾಥ್, ಟಿ. ಚಂದ್ರಣ್ಣ, ಮುಖಂಡರಾದ ಕೊಂಡಾಪುರ ಪರಮೇಶ್ವರಪ್ಪ, ಬಿ. ವಿಜಯ್, ಗುರುರಾಣ್ಣ, ವಿ. ಮಾರನಾಯಕ, ಐಯಣ್ಣ, ಬಿ.ಟಿ. ನಾಗಭೂಷಣ, ಸಂಜೀವಪ್ಪ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
