
CHITRADURGA NEWS | 28 JULY 2025
ಚಿತ್ರದುರ್ಗ: ನಗರದ ಹೃದಯ ಭಾಗದ ಹಳೇ ನಗರಸಭೆ ಕಚೇರಿ ಜಾಗದಲ್ಲಿ ನಿಮಾರ್ಣವಾಗಿರುವ ವಾಲ್ಮೀಕಿ ಸಮುದಾಯ ಭವನ ಹತ್ತು ವರ್ಷ ಕಳೆದರೂ ಲೋಕಾರ್ಪಣೆಯಾಗದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿರುವ ಜಿಲ್ಲಾ ನಿವೃತ್ತ ನಾಯಕ ನೌಕರರ ಸಂಘ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಅತೀ ತುರ್ತಾಗಿ ಜನ ಸೇವೆಗೆ ಲಭ್ಯವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ.
ಇದನ್ನೂ ಓದಿ: ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್ ಸ್ಪರ್ಧೆ | ವಿದ್ಯಾ ವಿಕಾಸ ಶಾಲೆಗೆ ಪ್ರಥಮ ಸ್ಥಾನ
ಚಿತ್ರದುರ್ಗ ಜಿಲ್ಲಾ ನಿವೃತ್ತ ನಾಯಕ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಸಿ.ಬೋರಯ್ಯ ನೇತೃತ್ವದಲ್ಲಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ವಾಲ್ಮೀಕಿ ಸಮುದಾಯ ಭವನವನ್ನು ಲೋಕಾರ್ಪಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಚಿತ್ರದುರ್ಗ ಐತಿಹಾಸಿಕ ಹಿನ್ನಲೆಯ ಜಿಲ್ಲೆಯಾಗಿದೆ. ಮದಕರಿ ನಾಯಕ ಆಳ್ವಿಕೆಯ ಈ ನಗರ ದೇಶ ವಿದೇಶಗಳಲ್ಲಿಯೂ ಪ್ರಸಿದ್ದಿಯಾಗಿದೆ. ನಗರದ ಹೃಯದ ಭಾಗದಲ್ಲಿ ಅಂದರೆ ಮದಕರಿ ನಾಯಕನ ಪ್ರತಿಮೆ ಬಳಿ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಗೊಂದಿದೆ. ಆದರೆ ಹತ್ತು ವರ್ಷಗಳು ಕಳೆದರೂ ಇನ್ನೂ ಈ ಸಮುದಾಯ ಭವನಕ್ಕೆ ಉದ್ಘಾಟನೆ ಭಾಗ್ಯ ದೊರೆತಿಲ್ಲವೆಂದು ಪದಾಧಿಕಾರಿಗಳು ತೀವ್ರ ಬೇಸರ ವ್ಯಕ್ತ ಪಡಿಸಿದರು.
ಸರ್ಕಾರಗಳು ಅನೇಕ ಜಾತಿ, ಸಮುದಾಯಗಳ ಶ್ರೇಯಸ್ಸಿಗಾಗಿ, ಆಯಾ ಸಮಾಜದ ಮದುವೆ, ಇನ್ನಿತರೆ ಶುಭ ಸಮಾರಂಭಗಳಿಗೆ, ಜನೋಪಯೋಗಿ ಕಾರ್ಯಕ್ರಮಗಳಿಗೆ ಅನುಕೂಲವಾಗಲಿ ಎನ್ನುವ ಆಶಯವಿಟ್ಟುಕೊಂಡು ಸಮುದಾಯ ಭವನಗಳನ್ನು ನಿರ್ಮಿಸಿರುವುದು ಸ್ವಾಗತಾರ್ಹ.
ಇದನ್ನೂ ಓದಿ: ದಿಶಾ ಸಮಿತಿಗೆ 8 ಜನರ ನಾಮನಿರ್ದೇಶನ | ಜಿಪಂ ಸಿಇಓ ಆದೇಶ
ಇದು ಎಲ್ಲಾ ಸರ್ಕಾರಗಳು ಮಾಡಿಕೊಂಡು ಬಂದಿರುವ ಕೆಲಸವೂ ಆಗಿದೆ. ಆದರೆ ಸಣ್ಣ ಪುಟ್ಟ ಕಾರಣಗಳನ್ನು ಇಟ್ಟುಕೊಂಡು ವಾಲ್ಮೀಕಿ ಸಮುದಾಯ ಭವನವನ್ನು ಜನರ ಸೇವೆಗೆ ಲೋಕಾರ್ಪಣೆ ಮಾಡದಿರುವುದು ತರವಲ್ಲದ ನಡವಳಿಕೆ ಎಂದು ಜಿಲ್ಲಾ ನಿವೃತ್ತ ನಾಯಕ ನೌಕರರ ಸಂಘದ ಅಧ್ಯಕ್ಷ ಸಿ.ಬೋರಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಸಣ್ಣ ಪುಟ್ಟ ಕಾಮಗಾರಿಗಳಿಗೆ ಅನುದಾನದ ಕೊರತೆ ಇದ್ದರೆ ಸರ್ಕಾರದ ಗಮನಕ್ಕೆ ತಂದು ಮಂಜೂರು ಮಾಡಿಸಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಮುಂದಿನ ಮೂರು ತಿಂಗಳ ಒಳಗಾಗಿ ವಾಲ್ಮೀಕಿ ಸಮುದಾಯವನ್ನು ಲೋಕಾರ್ಪಣೆ ಮಾಡಬೇಕು ಎಂದು ಬೋರಯ್ಯ ಆಗ್ರಹಿಸಿದರು.
ಇದನ್ನೂ ಓದಿ: ಚಿತ್ರದುರ್ಗ ನಗರಸಭೆ ಉಪಾಧ್ಯರ ಚುನಾವಣೆ | ಶಕೀಲಾಬಾನು ಅವಿರೋಧ ಆಯ್ಕೆ
ಜಿಲ್ಲಾ ನಿವೃತ್ತ ನಾಯಕ ಕ್ಷೇಮಾಭಿವೃದ್ದಿ ಸಂಘದ ಕಾರ್ಯಾಧ್ಯಕ್ಷ ಚಿನ್ನೋಬಯ್ಯ, ಪ್ರಧಾನ ಕಾರ್ಯದರ್ಶಿ ಟಿ.ಬಿ.ಕಾಟಮಲ್ಲಯ್ಯ, ಖಜಾಂಚಿ ಆರ್.ಟಿ.ರಾಜಣ್ಣ, ಪದಾಧಿಕಾರಿಗಳಾದ ಡಾ.ಟಿ.ಕೃಷ್ಣಪ್ಪ, ಡಾ.ಬಿ.ಬೋಮ್ಮಯ್ಯ, ಜೆ.ಸಿದ್ದಲಿಂಗ ನಾಯಕ್, ಎಸ್.ತಿಪ್ಪೇಸ್ವಾಮಿ, ಆರ್.ಪರಮೇಶ್ವರಪ್ಪ, ಬಿ.ಎಂ.ಪಾಲಯ್ಯ ಇನ್ನಿತರರು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
