By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: DIPLOMA ಕೃಷಿ ಕೋರ್ಸ್ ಗೆ ಅರ್ಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » DIPLOMA ಕೃಷಿ ಕೋರ್ಸ್ ಗೆ ಅರ್ಜಿ

ಮುಖ್ಯ ಸುದ್ದಿ

DIPLOMA ಕೃಷಿ ಕೋರ್ಸ್ ಗೆ ಅರ್ಜಿ

News Desk Chitradurga News
Last updated: 12 May 2025 20:01
News Desk Chitradurga News
2 months ago
Share
ಅರ್ಜಿ ಅಹ್ವಾನ
ಅರ್ಜಿ ಅಹ್ವಾನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 13 MAY 2025

ಚಿತ್ರದುರ್ಗ: ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‍ಗೆ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Also Read: ಅಡಿಕೆ ಧಾರಣೆ | 12 ಮೇ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌

ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್ (4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.

ಪ್ರವೇಶ ಅರ್ಹತೆ: 

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ  ಅಭ್ಯಸಿಸಿ ಕನಿಷ್ಠ ಶೇ. 45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

(ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು) ದಿನಾಂಕ: 06-06-2025 ರಂದು ಅಭ್ಯರ್ಥಿಗಳ ಪಯಸ್ಸು 19 ವರ್ಷಗಳನ್ನು ಮೀರಿರದಾರದು, ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ(ಕೃಷಿ) ಪ್ರವೇಶಾಸಿಗೆ ಮೀಸಲಿಡಲಾಗಿದೆ.

Also Read: ವಿಜೃಂಭಣೆಯ ಪಾಂಡುರಂಗ ವಿಠಲ ರಥೋತ್ಸವ

ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್ ಸೈಟ್ www.nahs.edu.in ನಲ್ಲಿ ದಿನಾಂಕ: 06-05-2025 ರಿಂದ 06-06-2025 ರವರೆಗೆ ಡೌನ್ ಲೋಡ್ ಮಾಡಬಹುದು.

ಈ ರೀತಿ ವೆಬ್‍ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ: 06-06-2025 ರೊಳಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕೆ ಅವರಣ- 577, 412/ಇಲ್ಲಿಗೆ ಕಳುಹಿಸಿಕೊಡಬೇಕು, ದಿನಾಂಕ: 06-06-2025 ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಶುಲ್ಕ: 

ಸಾಮಾನ್ಯ ವರ್ಗದವರಿಗೆ ರೂ. 500/-, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250/- ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‍ಗಳ (Nationalized Bank) ಡಿ.ಡಿ.ಯನ್ನು Comptroller, KSNUAHS, Shivamogga – 577 412 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ಇರುವಕ್ಕಿ ಆವರಣ-577412 ಇಲ್ಲಿಗೆ ಜೂನ್ 06ರ ಸಂಜೆ 4 ಗಂಟೆಯೊಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು. ಜೂನ್ 06ರ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರವೇಶ ಆಯ್ಕೆ ವಿಧಾನ:

ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು.

Also Read: ಭೀಕರ ಅಪಘಾತ | ಮೂರು ಜನ ಸ್ಥಳದಲ್ಲೇ ಸಾವು | ಡಿಕ್ಕಿ ರಭಸಕ್ಕೆ ನಜ್ಜುಗುಜ್ಜಾದ ಕಾರು

ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ಧತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್‍ಸೈಟ್ ಮುಖಾಂತರ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:AgricultureApplicationChitradurgaChitradurga newsChitradurga UpdatesDiplomaKannada Latest NewsKannada Newsಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೃಷಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಪ್ಲೊಮಾ
Share This Article
Facebook Email Print
Previous Article ಕಪ್ಪು ಚುಕ್ಕೆಗಳನ್ನು ತೆಗೆದುಹಾಕಲು ಆಲೂಗಡ್ಡೆಯನ್ನು ಮುಖಕ್ಕೆ ಹೀಗೆ ಬಳಸಿ
Next Article ಮಕ್ಕಳಿಗೆ ಪಾದರಸದ ಮಟ್ಟ ಕಡಿಮೆ ಇರುವ ಈ 4 ಬಗೆಯ ಮೀನುಗಳನ್ನು ತಿನ್ನಿಸಿ 
Leave a Comment

Leave a Reply Cancel reply

Your email address will not be published. Required fields are marked *

today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up