By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹೊಸದುರ್ಗ | ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹೊಸದುರ್ಗ | ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ

ಹೊಸದುರ್ಗ

ಹೊಸದುರ್ಗ | ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ

News Desk Chitradurga News
Last updated: 5 March 2025 20:25
News Desk Chitradurga News
4 months ago
Share
jobs in chitradurga news
SHARE
https://chat.whatsapp.com/Jhg5KALiCFpDwME3sTUl7x

 CHITRADURGA NEWS | 05 MARCH 2025

ಹೊಸದುರ್ಗ: ತಾಲ್ಲೂಕು ಶ್ರೀರಾಂಪುರ ಹೋಬಳಿ ಶ್ರೀರಾಂಪುರ ಹಾಗೂ ಕುರುಬರಹಳ್ಳಿ ಕಂದಾಯ ವೃತ್ತಕ್ಕೆ ಮತ್ತು ಕಸಬಾ ಹೋಬಳಿ ಹುಣವಿನಡು ಕಂದಾಯ ವೃತ್ತಕ್ಕೆ ಹೆಚ್ಚುವರಿ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Also Read: ಪೊಲೀಸರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಕಡೆಯ ದಿನಾಂಕದಂದು 25 ವರ್ಷ ಪೂರ್ಣಗೊಂಡಿರಬೇಕು. 45ವರ್ಷ ವಯೋಮಿತಿ ಒಳಗಿರಬೇಕು.. ಎಸ್‍ಎಸ್‍ಎಲ್‍ಸಿ, ವರ್ಗಾವಣೆ ಪ್ರಮಾಣ ಪತ್ರ, ಶಾಲಾ ದಾಖಲಾತಿ ಪ್ರಮಾಣ ಪತ್ರದಲ್ಲಿ ದಾಖಲಿಸಿರುವ ಜನ್ಮ ದಿನಾಂಕವನ್ನು ಮಾತ್ರವೇ ಪರಿಗಣಿಸಲಾಗುವುದು.

ಅಭ್ಯರ್ಥಿಯು ಕನ್ನಡ ಓದುವ, ಬರೆಯುವ ಜ್ಞಾನವುಳ್ಳ ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿಯನ್ನು ನಿಗಧಿತ ನಮೂನೆ-1ರಲ್ಲಿ ಸಲ್ಲಿಸಬೇಕು. ಗ್ರಾಮ ಸಹಾಯಕ ಹುದ್ದೆಯ ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗಧಿ ಆಗುವಂತಹ ಗೌರವಧನ ಪಾವತಿಸಲಾಗುವುದು.

ಗ್ರಾಮ ಸಹಾಯಕ ಹುದ್ದೆ ನೇಮಕಾತಿಗಾಗಿ ಈ ಹಿಂದೆ ಈ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ ಸೂಕ್ತ ದಾಖಲೆ ಲಗತ್ತಿಸುವುದು.

Also Read: ಮುರುಘಾ ಮಠದಲ್ಲಿ ಸಾಮೂಹಿಕ ವಿವಾಹ | 12 ಜೋಡಿ ದಾಂಪತ್ಯಕ್ಕೆ | ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಭಾಗೀ

ತಳವಾರ, ತೋಟಿಗಳು, ನೀರಗಂಟಿಗಳು, ವಾಲೀಕರ, ಮಹರ್ಸ್, ಬರ್ಕರ್ಸ್, ನೀರಾಡಿಗಳು, ಬುಲಾತಿದರ್ಸ್, ವೆಟ್ಸಿ, ಊರ ಗಾನಿಸ್ಸ್, ಕುಳವಾಡಿಕೆ ಈ ಕುಟುಂಬದವರಿಗೆ ಮೊದಲ ಆದ್ಯತೆ ನೀಡುವುದು.

ಒಂದು ವೇಳೆ ಈ ವರ್ಗದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಇತರೆ ವರ್ಗದ ಅಭ್ಯರ್ಥಿಗಳಿಗೆ ಪರಿಗಣಿಸಲಾಗುವುದು. ಗ್ರಾಮ ಸಹಾಯಕ ಹುದ್ದೆಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಮೊದಲಿಗೆ ಮೀಸಲಾತಿಯನ್ನು ಪರಿಗಣಿಸಲಾಗುವುದು.

ನಂತರ ವಿದ್ಯಾರ್ಹತೆಯ ಮಾನದಂಡತೆಯ ಹೆಚ್ಚಿನ ವಿದ್ಯಾಭ್ಯಾಸ ಹೊಂದಿರುವ ಮತ್ತು ಹೆಚ್ಚಿನ ಅಂಕಗಳಿಸಿರುವ ಅಭ್ಯರ್ಥಿಯನ್ನು ಪರಿಗಣಿಸಲಾಗುವುದು.

ಗ್ರಾಮ ಸಹಾಯಕನು ಗ್ರಾಮ ಆಡಳಿತ ಅಧಿಕಾರಿಗೆ ಎಲ್ಲ ಕೆಲಸ ಕಾರ್ಯಗಳಲ್ಲಿ ಸಹಾಯಕನಾಗಿ ಕೆಲಸ ನಿರ್ವಹಿಸಬೇಕಿರುತ್ತದೆ. ಗ್ರಾಮ ಸಹಾಯಕರಿಗೆ ಕೂಡಾ ಕಂಪ್ಯೂಟರ್ ತಂತ್ರಾಂಶದ ಜ್ಞಾನ ಹೊಂದಿರುವ ಅವಶ್ಯಕತೆ ಇರುತ್ತದೆ.

Also read: ಅಡಿಕೆ ತೋಟದಲ್ಲಿದ್ದ ಕುರಿಗಳ ಮೇಲೆ ಚಿರತೆ ದಾಳಿ | ಹತ್ತು ಕುರಿ ಸಾವು

ಅಭ್ಯರ್ಥಿಗಳು ಅರ್ಜಿಯೊಂದಿಗೆ ಎಲ್ಲಾ ಪ್ರಮಾಣ ಪತ್ರಗಳು ಮತ್ತು ಅಂಕಪಟ್ಟಿಗಳನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರಬೇಕು.

ತಹಶೀಲ್ದಾರ್ ಅವರಿಂದ ನಿಗಧಿತ ಅವಧಿಯೊಳಗೆ ಪಡೆದ ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಲಗತ್ತಿಸುವುದು. ಅಭ್ಯರ್ಥಿಯು ಕಂದಾಯ ವೃತ್ತದ ವ್ಯಾಪ್ತಿಯ ಖಾಯಂ ನಿವಾಸಿ ಆಗಿರಬೇಕು. ಸ್ಥಳೀಯ ವಾಸಿ ಎಂಬುದರ ನಿಖರತೆಗಾಗಿ ಪಡಿತರ ಚೀಟಿ ನಕಲು, ಸ್ಥಳೀಯ ಅಭ್ಯರ್ಥಿ ಎಂಬ ಬಗ್ಗೆ ದೃಢೀಕರಣ, ವಂಶವೃಕ್ಷ ಪಡೆದು ಸಲ್ಲಿಸುವುದು.

ಗ್ರಾಮ ಸಹಾಯಕರು ಚುನಾಣೆ ಹಾಗೂ ಇನ್ನಿತರೆ ಕೆಲಸ ಕಾರ್ಯಗಳಲ್ಲಿ ದೈಹಿಕ ಶ್ರಮವಹಿಸಿ ಕಾರ್ಯನಿರ್ವಹಿಸಬೇಕಿರುವುದರಿಂದ ದೈಹಿಕವಾಗಿ ಸಶಕ್ತವಾಗಿರುವ ಅವಶ್ಯಕತೆ ಇರುವುದರಿಂದ ಅಭ್ಯರ್ಥಿಯು ದೈಹಿಕ ಶ್ರಮಿಕ ಕೆಲಸ ನಿರ್ವಹಿಸಲು ಸದೃಢವಾಗಿರುವ ಬಗ್ಗೆ ಸ್ಥಳೀಯ ಸರ್ಕಾರಿ ವೈದ್ಯರಿಂದ ದೈಹಿಕ ಧೃಢತೆ ವೈದ್ಯಕೀಯ ಪ್ರಮಾಣ ಪತ್ರ ಪಡೆದು ಸಲ್ಲಿಸುವುದು.

ಅಭ್ಯರ್ಥಿಯು ದೈಹಿಕವಾಗಿ ಹಾಗೂ ಮಾನಸಿಕವಾಗಿ ಆರೋಗ್ಯವಂತನಾಗಿರಬೇಕು. ನೇಮಕಾತಿ ಹೊಂದುವ ಹುದ್ದೆಯ ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನು ಉಂಟು ಮಾಡುವ ಸಂಭವವಿರುವ ಯಾವುದೇ ದೈಹಿಕ ನ್ಯೂನತೆಯಿಂದ ಮುಕ್ತನಾಗಿರಬೇಕು. ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಪ್ರಕರಣ ಹಿನ್ನಲೆಯುಳ್ಳವರಾಗಿರಬಾರದು. ಈ ಬಗ್ಗೆ ಸ್ಥಳೀಯ ಪೊಲೀಸ್ ಇಲಾಖೆಯಿಂದ ದೃಢೀಕರಣ ಪತ್ರ ಪಡೆದು ಲಗತ್ತಿಸುವುದು.

Also Read: ಮೂವರ ಸಾವು | ಕಲ್ಲಂಗಡಿ ತುಂಬಿದ್ದ ಲಾರಿಗೆ ಮತ್ತೆರಡು ಲಾರಿ ಡಿಕ್ಕಿ | ಸರಣಿ ಅಪಘಾತ |

ಅಭ್ಯರ್ಥಿಯ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಅಂತಿಮಗೊಳಿಸಲಾಗುವುದು. ನೇಮಕಾತಿ ಬಗ್ಗೆ ಅಂತಿಮ ತೀರ್ಮಾನವನ್ನು ನೇಮಕಾತಿ ಪ್ರಾಧಿಕಾರವು ಹೊಂದಿರುತ್ತದೆ. ಹಾಗೂ ನೇಮಕಾತಿಯು ಮೇಲ್ಮನವಿ ಪ್ರಾಧಿಕಾರಗಳಾದ ಸರ್ಕಾರ ಹಾಗೂ ನ್ಯಾಯಾಲಯಗಳ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಹೊಸದುರ್ಗ ತಾಲ್ಲೂಕು ತಹಶೀಲ್ದಾರ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ApplicationChitradurgaChitradurga newsChitradurga UpdatesHosadurgaKannada Latest NewsKannada NewsPostVillage Assistantಅರ್ಜಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಗ್ರಾಮ ಸಹಾಯಕರಚಿತ್ರದುರ್ಗಚಿತ್ರದುರ್ಗ ನ್ಯೂಸ್ಹುದ್ದೆಹೊಸದುರ್ಗ
Share This Article
Facebook Email Print
Previous Article ಪೊಲೀಸರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
Next Article arecanut price list ಚನ್ನಗಿರಿ ಅಡಿಕೆ ಮಾರುಕಟ್ಟೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಕಾಂಗ್ರೆಸ್ ಅವಧಿಯಲ್ಲಿ ಶೇ.60 ರಷ್ಟು ಕಮಿಷನ್ ನಡೆಯುತ್ತಿದೆ | AAP ಜಿಲ್ಲಾಧ್ಯಕ್ಷ ಜಗದೀಶ್
ಮುಖ್ಯ ಸುದ್ದಿ
ಗಾಂಧಿವೃತ್ತ, ಸಂತೆಹೊಂಡದ ಬಳಿಯ ವಾಣಿಜ್ಯ ಸಂಕೀರ್ಣಗಳ ಕಾಮಗಾರಿ ವೀಕ್ಷಿಸಿದ ಸಚಿವರು
ಮುಖ್ಯ ಸುದ್ದಿ
ಸಚಿವ ಸ್ಥಾನದಿಂದ ಜಮೀರ್ ಅಹಮದ್‍ ಖಾನ್ ವಜಾಗೊಳಿಸಿ | ಜೆಡಿಎಸ್ ಪ್ರತಿಭಟನೆ
ಮುಖ್ಯ ಸುದ್ದಿ
ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು
ಮುರುಘಾ ಶ್ರೀಗಳ ಪ್ರಕರಣ ಅಂತಿಮ ಹಂತಕ್ಕೆ | ಖುದ್ದು ಹೇಳಿಕೆ ದಾಖಲಿಸಲು ದಿನಾಂಕ ನಿಗಧಿ | ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಶರಣರು
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up