CHITRADURGA NEWS | 02 AUGUST 2024
ಚಿತ್ರದುರ್ಗ: 2024-25ನೇ ಸಾಲಿನ ಚಿತ್ರದುರ್ಗ ಜಿಲ್ಲೆಯಲ್ಲಿ ಆತ್ಮ ಯೋಜನೆಯ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ (ರೈತರು ಹಾಗೂ ರೈತ ಮಹಿಳೆಯರು) ಹಾಗೂ ತಾಲ್ಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ (ರೈತರು ಹಾಗೂ ರೈತ ಮಹಿಳೆಯರು) ಪ್ರಶಸ್ತಿಗಳ ಆಯ್ಕೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಜಮೀನು ಹೊಂದಿರುವ, ಆಸಕ್ತ ಕೃಷಿ ಮತ್ತು ಕೃಷಿ ಸಂಬAಧಿತ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ರೈತರು ಹಾಗೂ ರೈತ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬಹುದು.
ಇದನ್ನೂ ಓದಿ: ತೆಂಗಿನ ಮರಗಳಿಗೆ ರೋಗ | ತೋಟಗಾರಿಕಾ ಇಲಾಖೆಯ ಸಲಹೆ
ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿಗಾಗಿ ಸಂಬAದಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಲು ಕೋರಿದೆ.
ಪ್ರಶಸ್ತಿ ಸಲ್ಲಿಸಲು ನಿಯಮಗಳು:
- ಈ ಹಿಂದೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದವರು ಸ್ಪರ್ದಿಸುವಂತಿಲ್ಲ.
- ಸರ್ಕಾರಿ ಸೇವೆಯಲ್ಲಿರಬಾರದು, ವಿಶ್ವವಿದ್ಯಾಲಯ/ ಸರ್ಕಾರಿ ಸ್ವಯಂ ಸಂಸ್ಥೆಗಳ ನೌಕರರು ಮತ್ತು ಅವರ ಕುಟುಂಬದ ಸದಸ್ಯರು ಸ್ಪರ್ದೆಯಲ್ಲಿ ಭಾಗವಹಿಸುವಂತಿಲ್ಲ.
ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ | ಎಲ್ಲೆಲ್ಲಿ ಯಾವ ಹುದ್ದೆ ಖಾಲಿ | ಮೀಸಲಾತಿ ಏನಿದೆ ?
- ಕೃಷಿ ಮತ್ತು ಸಂಬ0ಧಿತ ಇಲಾಖೆಗಳ ನಿವೃತ್ತ ತಾಂತ್ರಿಕ ನೌಕರರು ಮತ್ತು ಕುಟುಂಬದವರು ಭಾಗವಹಿಸುವಂತಿಲ್ಲ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
