
CHITRADURGA NEWS | 30 JULY 2024
ಚಿತ್ರದುರ್ಗ: ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಸೂರ್ಯಕಾಂತಿ ಬೆಳೆ ಇಳುವರಿ ಹೆಚ್ಚಿಸಬೇಕೆ.. ಇಲ್ಲಿದೆ ಸಲಹೆ
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ.
ಜಿಲ್ಲೆಯ ಭರಮಸಾಗರ, ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ 63 ಅಂಗನವಾಡಿ ಕಾರ್ಯಕರ್ತೆ, 3 ಮಿನಿ ಅಂಗನವಾಡಿ ಹುದ್ದೆಗಳಿಗೆ ಹಾಗೂ 149 ಅಂಗನವಾಡಿ ಸಹಾಯಕಿಯರು ಹುದ್ದೆಗಳು ಸೇರಿದಂತೆ ಒಟ್ಟು 215 ಖಾಲಿ ಸ್ಥಾನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆರಿಗೆ ದ್ವಿತೀಯ ಪಿಯುಸಿ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ 19 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು https://karnemakaone.kar.nic.
ಖಾಲಿ ಹುದ್ದೆಗಳ ವಿವರ: ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 08 ಮುಖ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ 21 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ ಒಟ್ಟು 29 ಖಾಲಿ ಹುದ್ದೆಗಳಿವೆ. ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 3 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 12 ಅಂಗನವಾಡಿ ಸಹಾಯಕಿ ಸೇರಿದಂತೆ 15 ಹುದ್ದೆಗಳು ಖಾಲಿ ಇವೆ. ಚಳ್ಳಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 16 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 30 ಅಂಗನವಾಡಿ ಸಹಾಯಕಿ ಸೇರಿದಂತೆ 46 ಹುದ್ದೆಗಳು ಖಾಲಿ ಇದೆ.
ಹಿರಿಯೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 4 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಸೇರಿದಂತೆ 40 ಹುದ್ದೆಗಳು ಖಾಲಿ ಇದೆ. ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 09 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 14 ಅಂಗನವಾಡಿ ಸಹಾಯಕಿಯರ ಸೇರಿದಂತೆ 24 ಹುದ್ದೆಗಳು ಖಾಲಿ ಇವೆ. ಹೊಸದುರ್ಗ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 18 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಸೇರಿದಂತೆ 42 ಹುದ್ದೆಗಳು ಮತ್ತು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ 05 ಮುಖ್ಯ ಅಂಗನವಾಡಿ ಕಾರ್ಯಕರ್ತೆ, 14 ಅಂಗನವಾಡಿ ಸಹಾಯಕಿಯರ ಸೇರಿದಂತೆ 19 ಹುದ್ದೆಗಳು ಖಾಲಿ ಇವೆ.
ಕ್ಲಿಕ್ ಮಾಡಿ ಓದಿ: Suspended; ಕರ್ತವ್ಯ ಲೋಪ | ಭರಮಸಾಗರ ಪಿಡಿಓ ಶ್ರೀದೇವಿ ಅಮಾನತು
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

