CHITRADURGA NEWS | 07 MAY
ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಮತ್ತು ಬೊಮ್ಮನಕಟ್ಟೆ ಮೊರಾರ್ಜಿ ದೇಸಾಯಿ ವಿಜ್ಞಾನ ಪದವಿ ಪೂರ್ವ ವಸತಿ ಕಾಲೇಜುಗಳಿಗೆ 2025-26ನೇ ಸಾಲಿಗೆ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ (ಪಿ.ಸಿ.ಎಂ.ಬಿ/ಪಿ.ಸಿ.ಎಂಸಿ.ಎಸ್) ಪ್ರವೇಶಕ್ಕೆ ಆಯಾ ಕಾಲೇಜುವಾರು ಪ್ರತ್ಯೇಕ ಅರ್ಜಿ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
Also Read: ನಾಕೀಕೆರೆ ಶ್ರೀ ಕಲ್ಲೇಶ್ವರ ಸ್ವಾಮಿ ಅಗ್ನಿಕುಂಡ ಮಹೋತ್ಸವ | ವಿಜೃಂಭಣೆಯ ಅಡ್ಡಪಲ್ಲಕ್ಕಿ ಉತ್ಸವ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿರುವ ಶಾಲೆಗಳಲ್ಲಿ ಓದಿರುವ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಮೇ 05 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದ್ದು, ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸಂಬಂಧಪಟ್ಟ ವಸತಿ ಕಾಲೇಜುಗಳಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು.
ಅರ್ಜಿಯ ಜೊತೆಗೆ ಎಸ್ಎಸ್ಎಲ್ಸಿ ಪ್ರವೇಶ ಪತ್ರದ ಜೆರಾಕ್ಸ್, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಜೆರಾಕ್ಸ್, ಇತ್ತೀಚಿನ ಎರಡು ಭಾವಚಿತ್ರ, ವಿಶೇಷ ವರ್ಗಕ್ಕೆ ಸೇರಿದ ಪ್ರಮಾಣ ಪತ್ರ, ಎಸ್ಎಸ್ಎಲ್ಸಿ ಅಂಕಪಟ್ಟಿ (ಪ್ರಾಂಶುಪಾಲರ ಸಹಿಯೊಂದಿಗೆ) ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.
Also Read: ಮಾರುಕಟ್ಟೆ ಧಾರಣೆ | ಇಂದಿನ ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
