Connect with us

ಅಗ್ನವೀರ್ ನೇಮಕಾತಿ | ಭಾರತೀಯ ಸೇನೆ ಸೇರಲು ಸುವರ್ಣವಕಾಶ | ಇಂದೇ ಅರ್ಜಿ ಸಲ್ಲಿಸಿ

ಸಾಂದರ್ಭಿಕ ಚಿತ್ರ

ಮುಖ್ಯ ಸುದ್ದಿ

ಅಗ್ನವೀರ್ ನೇಮಕಾತಿ | ಭಾರತೀಯ ಸೇನೆ ಸೇರಲು ಸುವರ್ಣವಕಾಶ | ಇಂದೇ ಅರ್ಜಿ ಸಲ್ಲಿಸಿ

CHITRADURGA NEWS | 17 MARCH 2025

ಚಿತ್ರದುರ್ಗ: ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರಿಕ್ಷೇಗೆ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

Also Read: ಬಾನಾಡಿಗಳ ಬಾಯಾರಿಕೆಗೆ ನೀರೆರೆದ ಜಿಪಂ ಸಿಇಓ | ಮರ ಮರದಲ್ಲೂ ನೀರು, ಕಾಳಿನ ವ್ಯವಸ್ಥೆ

ಆಸಕ್ತರು ವೆಬ್ ಪೋರ್ಟಲ್- WWW.JOININDIANARMY.NIC.IN ಮೂಲಕ ಏಪ್ರಿಲ್ 10 ಒಳಗಾಗಿ ಅರ್ಜಿ ಸಲ್ಲಿಸಬಹುದು. ಬರುವ ಜೂನ್‌ನಲ್ಲಿ ಪರೀಕ್ಷೆ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಛೇರಿ ದೂರವಾಣಿ ಸಂಖ್ಯೆ- 0824-2951279 ಹಾಗೂ aromangalore2021@gmail.com ಸಂಪರ್ಕಿಸಬಹುದು.

Also Read: ಸ್ಪ್ರಿಂಕ್ಲರ್ ನೀರಾವರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ | ಯಾವೆಲ್ಲಾ ದಾಖಲೆ ಬೇಕು?

ಭಾರತೀಯ ಸೇನೆಯಲ್ಲಿ ಆಯ್ಕೆಯು ‘ನ್ಯಾಯಯುತ ಮತ್ತು ಪಾರದರ್ಶಕ’ ನಡೆಯುತ್ತದೆ. ಅಭ್ಯರ್ಥಿಗಳು ಯಾವುದೇ ಹಂತದಲ್ಲೂ ಲಂಚ ನೀಡಬಾರದು. ಆಮಿಶ ಒಡ್ಡುವ ವ್ಯಕ್ತಿಗಳಿಗೆ ಬಲಿಯಾಗಬಾರದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿರುತ್ತಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version