
CHITRADURGA NEWS | 06 SEPTEMBER 2026
ಚಿತ್ರದುರ್ಗ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ‘ಅರಿವು ಶೈಕ್ಷಣಿಕ ಸಾಲ ಯೋಜನೆ’ಯಡಿ (ನವೀಕರಣ) ಸಾಲ ಸೌಲಭ್ಯ ಪಡೆಯಲು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಜನರ ಮನೆ ಬಾಗಿಲಿಗೆ ಸರ್ಕಾರ | ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ | ಸಚಿವ ಟಿ.ರಘುಮೂರ್ತಿ
ಮುಸ್ಲಿಂ, ಜೈನ್, ಬೌದ್ಧ, ಸಿಖ್, ಪಾರ್ಸಿ ಹಾಗೂ ಆಂಗ್ಲೋ-ಇಂಡಿಯನ್ ಸಮುದಾಯದ (ಕ್ರಿಶ್ಚಿಯನ್ ಹೊರತುಪಡಿಸಿ) ವಿದ್ಯಾರ್ಥಿಗಳು ಅರ್ಹರಾಗಿದ್ದಾರೆ.
CET/NEET ಮೂಲಕ ಪ್ರವೇಶಾತಿ ಪಡೆದು ಪದವಿ ಹಾಗೂ ವೃತ್ತಿಪರ ಕೋರ್ಸ್ಗಳಲ್ಲಿ MBBS, B.Tech, MBA, B.Sc Agriculture ಇತ್ಯಾದಿ ವ್ಯಾಸಂಗ ಮಾಡುತ್ತಿರುವವರು ನವೀಕರಣ ಸಾಲಕ್ಕಾಗಿ kmdconline.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಿದ್ದು, ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಈ ಹಿಂದೆ ಪಡೆದಿದ್ದ ಸಾಲದ ಮೊತ್ತದ ಶೇ. 12 ರಷ್ಟನ್ನು ಆನ್ಲೈನ್ನಲ್ಲಿ ಪಾವತಿಸಿ ನವೀಕರಣಕ್ಕೆ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿ ಪ್ರಿಂಟ್ಔಟ್ ಮತ್ತು ಅಗತ್ಯ ದಾಖಲೆಗಳನ್ನು ‘ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಜಿಲ್ಲಾ ಪಂಚಾಯತ್, ಚಿತ್ರದುರ್ಗ’ ಕಚೇರಿಗೆ ಸೆಪ್ಟೆಂಬರ್ 30ರೊಳಗಾಗಿ ಸಲ್ಲಿಸಲು ಕೋರಲಾಗಿದೆ.
ಇದನ್ನೂ ಓದಿ: ಚಿತ್ರದುರ್ಗ ರೈತರ ದಶಕಗಳ ಕನಸು ನನಸು | ಚಿತ್ರದುರ್ಗದತ್ತ ಮುಖ ಮಾಡಿದ ಭದ್ರೆ
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08194-226412, 8277944213 ಅನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

