CHITRADURGA NEWS | 22 DECEMBER 2024
ಚಿತ್ರದುರ್ಗ: ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರವಾಗಿ ಕೊಲೆಯಾಗಿದ್ದ ಆಂಧ್ರ ಮೂಲದ ಯುವಕನ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಘಟನೆ ನಡೆದ 48 ಗಂಟೆ ಅಂದರೆ ಎರಡೇ ದಿನಗಳಲ್ಲಿ ಪರಶುರಾಂಪುರ ಹಾಗೂ ನಾಯಕನಹಟ್ಟಿ ಪೊಲೀಸರು ಕೊಲೆಗಾರರ ಎಡೆಮುರಿ ಕಟ್ಟಿದ್ದಾರೆ.

ಇದನ್ನೂ ಓದಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ
ಡಿಸೆಂಬರ್ 19 ರಾತ್ರಿ ವೇಳೆ ನಾಗಪ್ಪನಹಳ್ಳಿ ಗೇಟ್ನಲ್ಲಿ ಆಂಧ್ರ ಮೂಲದ ವಡ್ಡೇಂ ಪಾಳ್ಯದ ಗಿತ್ತರಾಜು ಕೊಲೆ ಮಾಡಿ ಪಕ್ಕದ ಜಮೀನಿನಲ್ಲಿ ದೇಹ ಎಸೆಯಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಆಂದ್ರಪ್ರದೇಶ ಅನಂತಪುರ ಜಿಲ್ಲೆಯ ಮಲಯನೂರು ಗ್ರಾಮದ ರಾಮಣ್ಣ, ಕೊಟ್ರೇಶ್, ಬಸವರಾಜ ಮತ್ತು ಸುಧಮ್ಮ ಎಂಬುವವರನ್ನು ಬಂದಿಸಿದ್ದಾರೆ.
ಇದನ್ನೂ ಓದಿ: ದಿನ ಭವಿಷ್ಯ | ಡಿಸೆಂಬರ್ 22 | ಈ ರಾಶಿಯವರಿಗೆ ಆದಾಯ ಸಾಕಾಗುವುದಿಲ್ಲ
ಗಿತ್ತರಾಜು ಕೊಲೆ ಪ್ರಕರಣ ಸಂಬಂಧ ಅವರ ತಮ್ಮ ನಾಗರಾಜ ಪರಶುರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ನಾಯಕನಹಟ್ಟಿ ಹಾಗೂ ಪರಶುರಾಂಪುರ ಪೊಲೀಸರು ಪ್ರಕರಣವನ್ನು ಬೇಧಿಸಿ ಆರೋಪಿಗಳನ್ನು ಬಂದಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
