ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ತಾಲ್ಲೂಕಿನ ಇಂಗಳದಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಮರಡಿಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ ವತಿಯಿಂದ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಜನತಾ ದರ್ಶನ ನಡೆಯಿತು.
ಜನತಾ ದರ್ಶನದಲ್ಲಿ 1191 ಅರ್ಜಿಗಳು ಸ್ವೀಕೃತವಾಗಿದ್ದು, 791 ಅರ್ಜಿಗಳನ್ನು ಇತ್ಯರ್ಥ ಮಾಡಲಾಗಿದೆ. 400 ಅರ್ಜಿಗಳು ವಿಲೇಪಡಿಸುವುದು ಬಾಕಿ ಇದೆ. ಎಲ್ಲವನ್ನೂ ನಿಗದಿತ ಕಾಲಮಿತಿಯೊಳಗೆ ಅರ್ಜಿಗಳನ್ನು ವಿಲೇಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದ್ದಾರೆ.

ಎಲ್ಲ ಇಲಾಖೆಗಳು ಚುರುಕಾಗಿ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿಗಳು ಕಾಲಕಾಲಕ್ಕೆ ಅಧಿಕಾರಿಗಳ ಸಭೆ ನಡೆಸಿ, ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಆಡಳಿತ ಕೊಡುವಂತೆ ನಿರ್ದೇಶನ ನೀಡಿದ್ದಾರೆ ಎಂದರು.
ಇದನ್ನೂ ಓದಿ: ದಾಖಲೆ ಇಲ್ಲದ 8 ಕೋಟಿ ರೂ. ಜಪ್ತಿ
ಕಂದಾಯ ಇಲಾಖೆಗೆ ಸಂಬಂಧಪಟ್ಟ ಸರ್ವೇ, ಪೋಡಿ ಮಾಡಲು ಸಮಯ ಬೇಕಾಗಲಿದೆ. ಹಾಗಾಗಿ ಅಂತಹ ವಿಷಯಗಳನ್ನು ಒಂದು ತಿಂಗಳೊಳಗೆ ಬಗೆಹರಿಸಲಾಗುವುದು.
ಬಗರ್ಹುಕುಂ ಹಾಗೂ ಸಾಗುವಳಿ ಚೀಟಿ ನೀಡುವಂತೆ ಅರ್ಜಿಗಳು ಸಲ್ಲಿಕೆಯಾಗಿದ್ದು, ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾದ ತಕ್ಷಣವೇ ಅರ್ಜಿಗಳನ್ನು ವಿಲೇಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಮಾತನಾಡಿ, ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟಂತೆ ಅಹವಾಲುಗಳನ್ನು ಪರಿಹರಿಸಲು ಪ್ರತ್ಯೇಕವಾಗಿ ಆಗಮಿಸಿ, ಖುದ್ದು ಪರಿಶೀಲಿಸಿ ಸಮಸ್ಯೆಗಳನ್ನು ಬಗೆಹರಿಸುತ್ತೇನೆ. ಗ್ರಾಮದ ಸಮಸ್ಯೆಗಳ ಬಗ್ಗೆ ಸಮಗ್ರವಾಗಿ ಪಟ್ಟಿ ತಯಾರಿಸಿ, ಸರ್ಕಾರದ ಮಟ್ಟದಲ್ಲಿ ಪರಿಹಾರ ಆಗುವ ಕೆಲಸಗಳಿಗೆ ಸರ್ಕಾರದ ಗಮನ ಸೆಳೆಯಲು ಶಾಸಕರನ್ನು ಕೋರಲಾಗುವುದು. ಜಿಲ್ಲಾ ಪಂಚಾಯಿತಿಯ ಎಲ್ಲಾ ಅಧಿಕಾರಿಗಳು ಗ್ರಾಮಕ್ಕೆ ಆಗಮಿಸುವರು. ವಾರದೊಳಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ ಅವರು, ಗ್ರಾಮದ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಶೀಘ್ರವೇ ಭೂಮಿ ಮಂಜೂರು ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಇಂಗಳದಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿರುವಲ್ಲಪ್ಪ, ಉಪಾಧ್ಯಕ್ಷೆ ನೇತ್ರಮ್ಮ, ಮಾಜಿ ಉಪಾಧ್ಯಕ್ಷೆ ಬೃಂದಾ, ಉಪವಿಭಾಗಾಧಿಕಾರಿ ಎಂ.ಕಾರ್ತೀಕ್, ತಾಲ್ಲೂಕು ಪಂಚಾಯಿತಿ ಇಒ ರವಿಕುಮಾರ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರುಮ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಕೋಟೆನಾಡಿಗೆ ರೆಬಲ್ ವಿಜಯಯಾತ್ರೆ | ಬ್ಯಾಡ್ಮ್ಯಾನರ್ಸ್ ಜತೆ ಅಭಿಷೇಕ್, ರಚಿತಾರಾಮ್ ಎಂಟ್ರಿ
ವಿಂಡ್ಮಿಲ್ ಕಂಪನಿಯವರ ಸಭೆ ಕರೆಯಲು ಸೂಚನೆ:
ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಜನತಾ ದರ್ಶನ ಸಭೆಯಲ್ಲಿ ಮಾತನಾಡುತ್ತಾ,
ಚಿತ್ರದುರ್ಗ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಬಹಳಷ್ಟು ಜಾಗವನ್ನು ವಿಂಡ್ಮಿಲ್ ಕಂಪನಿಗೆ ನೀಡಲಾಗಿದ್ದು, ವಿಂಡ್ಮಿಲ್ ಕಂಪನಿಯ ಸಿಎಸ್ಆರ್ ನಿಧಿಯು ವಿಧಾನಸಭಾ ಕ್ಷೇತ್ರದ ಜನರಿಗೆ ಉಪಯೋಗವಾಗಬೇಕು. ಈ ಕುರಿತು ಮುಂದಿನ ದಿನಗಳಲ್ಲಿ ವಿಂಡ್ಮಿಲ್ ಕಂಪನಿಯವರ ಸಭೆ ಕರೆಯುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಮುಂದಿನ ದಿನಗಳಲ್ಲಿ ಚಿತ್ರದುರ್ಗ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಇಂಗಳದಾಳ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ 160 ಮನೆಗಳಿಗೆ ಅನುಮೋದನೆ ದೊರೆತಿದೆ. ಮುಂದಿನ ದಿನಗಳಲ್ಲಿ ಎಲ್ಲ ಫಲಾನುಭವಿಗಳಿಗೆ ಕಾರ್ಯಾದೇಶ ನೀಡಲು ಕ್ರಮ ಕೈಗೊಳ್ಳಲಾಗುವುದು. ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ-4 ರಿಂದ ಯರೇಹಳ್ಳಿವರೆಗೂ ಉತ್ತಮ ರಸ್ತೆ ನಿರ್ಮಾಣಕ್ಕೆ ಡಿಪಿಆರ್ ಸಿದ್ದಪಡಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜನತಾ ದರ್ಶನದಲ್ಲಿ ಕಂದಾಯ ಇಲಾಖೆಯಿಂದ ಪಿಂಚಣಿ ಆದೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಭಾಗ್ಯಲಕ್ಷ್ಮಿ ಬಾಂಡ್, ಸುಕನ್ಯಾ ಸಮೃದ್ಧಿ ಯೋಜನೆ ಪಾಸ್ಬುಕ್ ವಿತರಣೆ, ಕಾರ್ಮಿಕ ಇಲಾಖೆಯಿಂದ ಹೆರಿಗೆ ಬಾಂಡ್, ವಸತಿ ಯೋಜನೆಯಡಿ ಕಾರ್ಯಾದೇಶ, ರೇಷ್ಮೆ ಇಲಾಖೆಯಿಂದ ರೇಷ್ಮೆಹುಳು ಸಾಕಾಣಿಕೆ ಮನೆಕಟ್ಟಲು ಸಹಾಯಧನ, ಪಶು ಇಲಾಖೆಯಿಂದ ಕುರಿಗಳಿಗೆ ಜಂತುನಾಶಕ ಔಷಧಿ, ರೈತರಿಗೆ ಮೇವಿನಬೀಜದ ಕಿಟ್ ವಿತರಣೆ, ಕೃಷಿ ಇಲಾಖೆಯಿಂದ ಸ್ಪ್ರಿಂಕ್ಲರ್ ಸೆಟ್ ವಿತರಣೆ, ಅಂಗವಿಕಲರಿಗೆ ಸೈಕಲ್ ಹಾಗೂ ಶ್ರವಣಸಾಧನ ವಿತರಣೆ ವಿತರಿಸಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
