ಹಾವೇರಿಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ | ಸೂಕ್ತ ಕ್ರಮಕ್ಕೆ ಚಿತ್ರದುರ್ಗದಲ್ಲಿ ಪ್ರತಿಭಟನೆ 

ಹಾವೇರಿಯಲ್ಲಿ ಪೌರ ಕಾರ್ಮಿಕರ ಮೇಲೆ ಹಲ್ಲೆ | ಸೂಕ್ತ ಕ್ರಮಕ್ಕೆ ಚಿತ್ರದುರ್ಗದಲ್ಲಿ ಪ್ರತಿಭಟನೆ

CHITRADURGA NEWS | 12 JUNE 2025

ಚಿತ್ರದುರ್ಗ: ಹಾವೇರಿಯಲ್ಲಿ ಬ್ಯಾನರ್‍ ಗಳನ್ನು ತೆರವುಗೊಳಿಸುತ್ತಿದ್ದ ಪೌರ ಕಾರ್ಮಿಕರ ಮೇಲೆ ಹಲ್ಲೆ ನಡೆಸಿರುವವರ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೌರ ಕಾರ್ಮಿಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Also Read: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಅನಧಿಕೃತವಾಗಿ ಕಟ್ಟಲಾಗಿದ್ದ ಬ್ಯಾನರ್‍ ಗಳನ್ನು ತೆರವುಗೊಳಿಸಿದರೆಂಬ ಕಾರಣಕ್ಕಾಗಿ ಪೌರ ಕಾರ್ಮಿಕ ರಾಜು ಯಲ್ಲಪ್ಪ ದೊಡ್ಡಮನಿ ಮೇಲೆ ಹಲ್ಲೆ ನಡೆಸಿರುವವರನ್ನು ಬಂಧಿಸಿದ್ದು, ನ್ಯಾಯಾಲಯ ಜಾಮೀನು ನೀಡಬಾರದು.

ಎರಡು ವರ್ಷಗಳ ಕಾಲ ದಲಿತ ಕೇರಿಗಳಲ್ಲಿ ಕಸ ಗುಡಿಸುವುದು, ಚರಂಡಿ ಸ್ವಚ್ಚಗೊಳಿಸುವ ಶಿಕ್ಷೆ ವಿಧಿಸಬೇಕು. ಪೌರ ಕಾರ್ಮಿಕರಿಗೆ ಹಾಗೂ ಕುಟುಂಬದವರಿಗೆ ಸೂಕ್ತ ರಕ್ಷಣೆ ನೀಡುವಂತೆ ಪೌರ ಕಾರ್ಮಿಕರು ಒತ್ತಾಯಿಸಿದರು.

Also Read: ವಾಂತಿ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳನ್ನು ಹೀಗೆ ಆರೈಕೆ ಮಾಡಿ

ಪ್ರತಿಭಟನೆಯಲ್ಲಿ ಪೌರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಡಿ.ದುರುಗೇಶ್, ಪೌರ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಸಿ.ರೇಣುಕಾ, ಕೆ.ರಾಜಣ್ಣ, ಜಗದೀಶ್, ಪುಟ್ಟಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version