
CHITRADURGA NEWS | 30 JANUARY 2024
ಚಿತ್ರದುರ್ಗ: ಕತ್ತು ಕೊಯ್ದು ಪ್ರಿಯತಮೆಯನ್ನೇ ಹತ್ಯೆ ಮಾಡಲು ಯತ್ನಿಸಿರುವ ಘಟನೆ ಚಿತ್ರದುರ್ಗ ತಾಲೂಕಿನ ಸುಲ್ತಾನಪುರದಲ್ಲಿ ನಡೆದಿದೆ.
ದಾದಾಪೀರ್ ಎಂಬಾತ ಸೋಮವಾರ ರಾತ್ರಿ ಸಮೀನಾ ಎಂಬುವವರ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ.
ಇದನ್ನೂ ಓದಿ: ಮುಖ್ಯ ರಸ್ತೆಯಲ್ಲೇ ಮೊಣಕಾಲುದ್ದ ಗುಂಡಿ
ಗಂಭೀರವಾಗಿ ಗಾಯಗೊಂಡಿರುವ ಸಮೀನಾ ಅವರನ್ನು ಸ್ಥಳೀಯರು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವವಾಗಿರುವ ಸಮೀನಾ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಕಳೆದ ಒಂದು ತಿಂಗಳಿಂದ ಇಬ್ಬರೂ ಸುಲ್ತಾನಪುರದಲ್ಲಿ ಮನೆ ಮಾಡಿಕೊಂಡು ವಾಸವಿದ್ದರು ಎನ್ನಲಾಗಿದೆ. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿದ್ದು, ರಾತ್ರಿ ಹತ್ಯೆಗೆ ಯತ್ನ ನಡೆದಿದೆ.
ಇದನ್ನೂ ಓದಿ: ಬ್ಯಾಟರಿ ಚಾಲಿತ ವೀಲ್ಚೇರ್ಗೆ ಅರ್ಜಿ ಆಹ್ವಾನ
ಸದ್ಯ ಆರೋಪಿ ದಾದಾಪೀರ್ ಬಂಧನಕ್ಕೆ ಭರಮಸಾಗರ ಪೊಲೀಸರು ಬಲೆ ಬೀಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

