Connect with us

    ಪ್ರಿಯತಮೆಯ ಕತ್ತು ಕೊಯ್ದು ಹತ್ಯೆಗೆ ಯತ್ನ

    ಕ್ರೈಂ ಸುದ್ದಿ

    ಪ್ರಿಯತಮೆಯ ಕತ್ತು ಕೊಯ್ದು ಹತ್ಯೆಗೆ ಯತ್ನ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 30 JANUARY 2024

    ಚಿತ್ರದುರ್ಗ: ಕತ್ತು ಕೊಯ್ದು ಪ್ರಿಯತಮೆಯನ್ನೇ ಹತ್ಯೆ ಮಾಡಲು ಯತ್ನಿಸಿರುವ ಘಟನೆ ಚಿತ್ರದುರ್ಗ ತಾಲೂಕಿನ ಸುಲ್ತಾನಪುರದಲ್ಲಿ ನಡೆದಿದೆ.

    ದಾದಾಪೀರ್ ಎಂಬಾತ ಸೋಮವಾರ ರಾತ್ರಿ ಸಮೀನಾ ಎಂಬುವವರ ಕುತ್ತಿಗೆಯನ್ನು ಚಾಕುವಿನಿಂದ ಕೊಯ್ದು ಹತ್ಯೆಗೆ ಯತ್ನಿಸಿದ್ದಾನೆ.

    ಇದನ್ನೂ ಓದಿ: ಮುಖ್ಯ ರಸ್ತೆಯಲ್ಲೇ ಮೊಣಕಾಲುದ್ದ ಗುಂಡಿ

    ಗಂಭೀರವಾಗಿ ಗಾಯಗೊಂಡಿರುವ ಸಮೀನಾ ಅವರನ್ನು ಸ್ಥಳೀಯರು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವವಾಗಿರುವ ಸಮೀನಾ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

    ಕಳೆದ ಒಂದು ತಿಂಗಳಿಂದ ಇಬ್ಬರೂ ಸುಲ್ತಾನಪುರದಲ್ಲಿ ಮನೆ ಮಾಡಿಕೊಂಡು ವಾಸವಿದ್ದರು ಎನ್ನಲಾಗಿದೆ. ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿದ್ದು, ರಾತ್ರಿ ಹತ್ಯೆಗೆ ಯತ್ನ ನಡೆದಿದೆ.

    ಇದನ್ನೂ ಓದಿ: ಬ್ಯಾಟರಿ ಚಾಲಿತ ವೀಲ್‍ಚೇರ್‍ಗೆ ಅರ್ಜಿ ಆಹ್ವಾನ

    ಸದ್ಯ ಆರೋಪಿ ದಾದಾಪೀರ್ ಬಂಧನಕ್ಕೆ ಭರಮಸಾಗರ ಪೊಲೀಸರು ಬಲೆ ಬೀಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top