By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನರೇಗಾ ಕೆಲಸಕ್ಕೆ ಹಾಜರಾತಿ ಕಡ್ಡಾಯ | ಜಿಪಂ ಉಪ ಕಾರ್ಯದರ್ಶಿ ತಿಮ್ಮಪ್ಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನರೇಗಾ ಕೆಲಸಕ್ಕೆ ಹಾಜರಾತಿ ಕಡ್ಡಾಯ | ಜಿಪಂ ಉಪ ಕಾರ್ಯದರ್ಶಿ ತಿಮ್ಮಪ್ಪ

ಮುಖ್ಯ ಸುದ್ದಿ

ನರೇಗಾ ಕೆಲಸಕ್ಕೆ ಹಾಜರಾತಿ ಕಡ್ಡಾಯ | ಜಿಪಂ ಉಪ ಕಾರ್ಯದರ್ಶಿ ತಿಮ್ಮಪ್ಪ

News Desk Chitradurga News
Last updated: 3 March 2025 19:38
News Desk Chitradurga News
4 months ago
Share
ನರೇಗಾ ಪ್ರಗತಿ ಪರಿಶೀಲನಾ ಸಭೆ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 03 MARCH 2025

ಚಿತ್ರದುರ್ಗ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಲ್ಲಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರ ಹಾಜರಾತಿಯನ್ನು ಕಡ್ಡಾಯವಾಗಿ ಎರಡು ಬಾರಿ ಎನ್.ಎಂ.ಎಂ.ಎಸ್. ಆ್ಯಪ್ ಮೂಲಕ ನಮೂದಿಸಬೇಕು, ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿ.ಪಂ. ಉಪಕಾರ್ಯದರ್ಶಿ ಕೆ. ತಿಮ್ಮಪ್ಪ ಎಚ್ಚರಿಕೆ ನೀಡಿದರು.

Also Read: ಬೆಲ್ಟ್, ಪರ್ಸ್, ವ್ಯಾನಿಟಿ ಬ್ಯಾಗ್ ಸೇರಿ ಚರ್ಮದ ಉತ್ಪನ್ನಗಳಿಗೆ ರಿಯಾಯಿತಿ

ಚಿತ್ರದುರ್ಗದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಹಿರಿಯೂರು ಮತ್ತು ಚಿತ್ರದುರ್ಗ ತಾಲ್ಲೂಕಿನ ನರೇಗಾ ಸಿಬ್ಬಂದಿಗಳಿಗೆ ಸೋಮವಾರ ನಡೆದ ನರೇಗಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿ ಕಾರ್ಮಿಕರ ಹಾಜರಾತಿಯನ್ನು ಎನ್.ಎಂ.ಎಂ.ಎಸ್. ಆ್ಯಪ್ ಮೂಲಕ ತೆಗೆದುಕೊಳ್ಳಬೇಕು. ಇದರಲ್ಲಿ ನಿರ್ಲಕ್ಷ್ಯ ವಹಿಸುವ ಗ್ರಾಮ ಕಾಯಕ ಮಿತ್ರ ಮತ್ತು ಬಿ.ಎಫ್.ಟಿ ಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು.

 ಕಾರ್ಮಿಕ ಹಾಜರಾತಿ ತೆಗೆದುಕೊಳ್ಳುವಾಗ ನಿಯಮ ಮೀರಿ ನಮೂದಿಸುವಂತೆ ಯಾವುದಾದರು ಅಥವಾ ಯಾರಿಂದಲಾದರೂ ಒತ್ತಡ ಬಂದಲ್ಲಿ, ನೇರವಾಗಿ ಸಂಬಂಧಿಸಿದ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಬೇಕು.

Also Read: ನಾಯಕನಹಟ್ಟಿ ಜಾತ್ರೆಗೆ ಸಿದ್ಧತೆ | ಎಲ್ಲ ಕಡೆ ಸಿಸಿ ಕ್ಯಾಮರಾ | ಡಿಸಿ ವೆಂಕಟೇಶ್ 

ನರೇಗಾ ಸಮುದಾಯ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರ ಹಾಜರಾತಿಯನ್ನು ಕಡ್ಡಾಯವಾಗಿ ಎರಡು ಬಾರಿ ಆ್ಯಪ್ ಮೂಲಕ ದೃಢೀಕರಿಸಬೇಕು. ಸೃಜಿತ ಎನ್.ಎಂ.ಆರ್ ನಂತೆ ಮಹಿಳೆಯರು ಕೆಲಸದಲ್ಲಿ ಭಾಗವಹಿಸಿರುವದನ್ನು ಖಚಿತಪಡಿಸಿಕೊಳ್ಳಬೇಕು.

ಅಲ್ಲದೆ, ಯಾವುದೇ ಕಾರಣಕ್ಕೂ ಕೆಲಸಕ್ಕೆ ಗೈರಾದವರ ಹಾಜರಾತಿ ನೀಡದಂತೆ ನೋಡಿಕೊಳ್ಳಬೇಕು. ನರೇಗಾ ನಿಯಮ ಮೀರಿ ಹಾಜರಾತಿಯಲ್ಲಿ ಯಾವುದೇ ಲೋಪದೋಷಗಳು ಕಂಡುಬಂದಲ್ಲಿ ಅಂತಹ ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಲಾಗುವುದು ಎಂದು ತಿಮ್ಮಪ್ಪ ಎಚ್ಚರಿಸಿದರು.

ಜಿಲ್ಲೆಯಲ್ಲಿ ಸೋಷಿಯಲ್ ಆಡಿಟ್ ಆಕ್ಷೇಪಣೆಯ 46,000 ಕಂಡಿಕೆಗಳು ಬಾಕಿ ಇದ್ದು, ತ್ವರಿತ ತಿರುವಳಿ ಮಾಡಿ ಮುಕ್ತಾಯಗೊಳಿಸಲು ತಿಳಿಸಿದರು.

Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಹಿರಿಯೂರು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಕುಮಾರ್ ಮಾತನಾಡಿ, ನರೇಗಾ ಅನುಷ್ಠಾನದ ಪಾರದರ್ಶಕತೆಗೆ ಮುಂದುವರೆದ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಬಳಸಿಕೊಳ್ಳಲಾಗುತ್ತಿದೆ, ಹಾಗಾಗಿ ಉತ್ತಮ ಹಾಗೂ ಗುಣಮಟ್ಟದ ಅನುಷ್ಠಾನಕ್ಕೆ ಹೆಚ್ಚಿನ ಗಮಹರಿಸಬೇಕಿದೆ. ಕಾಮಗಾರಿ ಅನುಷ್ಠಾನದ ತಳಹಂತದಲ್ಲಿ ಸಂಬಂಧಿಸಿದ ಸಿಬ್ಬಂದಿಗಳು, ಕಾರ್ಮಿಕ ಗುಂಪು ರಚಿಸುವಲ್ಲಿ ಮತ್ತು ಕೆಲಸದ ಹಾಜರಾತಿ ತೆಗೆದುಕೊಳ್ಳುವಲ್ಲಿ ಪ್ರಮುಖರಾಗಿರುತ್ತಾರೆ, ತದನಂತರ ತಾಂತ್ರಿಕ ಸಹಾಯಕರು, ಇನ್ನೂ ಮುಂದುವರೆದು ಮೇಲುಸ್ತುವಾರಿಗೆ ಪಿಡಿಒ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರು ಇದ್ದು ಗಮನಹರಿಸುತ್ತಾರೆ ಎಂದರು.

ಚಿತ್ರದುರ್ಗ ತಾ. ಪಂ. ಇಒ ರವಿಕುಮಾರ್ ಮಾತನಾಡಿ, ತಾಂತ್ರಿಕ ಸಹಾಯಕರು ತಮ್ಮ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಆಕ್ಷೇಪಣೆ ಇರುವ ಕಾಮಗಾರಿಗಳ ಪೂರಕ ಮಾಹಿತಿ ಕ್ರೋಢೀಕರಿಸಿ ಸಮಿತಿ ಸಭೆಗೆ ಸಲ್ಲಿಸಿ, ತಿರುವಳಿ ಮಾಡಿಸಿ, ಪ್ರಕರಣ, ಕಂಡಿಕೆಗಳನ್ನು ಮುಕ್ತಾಯಗೊಳಿಸಬೇಕು.

ಸರ್ಕಾರದಿಂದ ನರೇಗಾಕ್ಕೆ ಸಂಬಂಧಿಸಿದಂತೆ ಎರಡು ತಿಂಗಳಿಗೆ ಒಮ್ಮೆ ಸಾಮಗ್ರಿ ಹಣ ಪಾವತಿ ಆಗುತ್ತಿದ್ದು, ಕಾಮಗಾರಿಗಳ ಮುಕ್ತಾಯದ ಪ್ರಗತಿ ನೂರು ಪ್ರತಿಶತ ಸಾಧನೆಯಾಗಬೇಕು. ಇನ್ನೂ ಜಿಯೋ ಟ್ಯಾಗ್‍ನ ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಸಂಬಂಧಿಸಿದವರ ಸಹಾಯ ಪಡೆದು ತ್ವರಿತ ಕ್ಲಿಯರೆನ್ಸ್ ಮಾಡುವಂತೆ ಸೂಚಿಸಿದರು.

Also Read: Kannada Novel: 22. ಜಂಗಮಯ್ಯರಲ್ಲಿ ಬಿಕ್ಕಟ್ಟು

ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಿತ್ರದುರ್ಗ ತಾ.ಪಂ. ಇ.ಒ. ವೈ. ರವಿಕುಮಾರ್, ಹಿರಿಯೂರು ಇ ಒ ಜಿ.ಎಸ್. ಸತೀಶ್ ಕುಮಾರ್, ಜಿ. ಪಂ. ಕಚೇರಿಯ ಮೋಹನ್, ಸಹಾಯಕ ನಿರ್ದೇಶಕರಾದ ಹೆಚ್ ಎರ್ರಿಸ್ವಾಮಿ ಮತ್ತು ಶಿವಮೂರ್ತಿ ಕೆ, ತಾಂತ್ರಿಕ ಸಂಯೋಜಕರು, ಎಂಐಎಸ್ ಸಂಯೋಜಕರು, ತಾಲ್ಲೂಕು ಐಇಸಿ ಸಂಯೋಜಕರು, ಎರಡೂ ತಾಲ್ಲೂಕಿನ ತಾಂತ್ರಿಕ ಸಹಾಯಕರು ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:attendanceChitradurgaChitradurga newsChitradurga UpdatesCompulsoryKannada Latest NewsKannada NewsNREGAwage laborersZilla Panchayatಕಡ್ಡಾಯಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೂಲಿ ಕಾರ್ಮಿಕರುಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾಪಂಚಾಯತ್ನರೇಗಾಹಾಜರಾತಿ
Share This Article
Facebook Email Print
Previous Article ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರಕ್ಕೆ ಚಾಲನೆ
Next Article arecanut price list ಚನ್ನಗಿರಿ ಮಾರುಕಟ್ಟೆ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up