CHITRADURGA NEWS | 16 APRIL 2024
ಚಿತ್ರದುರ್ಗ: ಆಟೊವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಜಾಜೂರು ಸಮೀಪದ ಗುಂಜಿಗನೂರು ಗೇಟ್ ಬಳಿ ನಡೆದಿದೆ.
ಹೊಳಲ್ಕೆರೆ ತಾಲ್ಲೂಕಿನ ಕುಡಿನೀರುಕಟ್ಟೆ ಗ್ರಾಮದ ವೀರೇಶ್ (28) ಮೃತ ಚಾಲಕ. ಡಿಕ್ಕಿ ರಭಸಕ್ಕೆ ಆಟೋದಲ್ಲಿದ್ದ ರಂಗವ್ವನಹಳ್ಳಿ ಗ್ರಾಮದ ಮಂಜುನಾಥ್, ವಿಜಯಮ್ಮ, ಶ್ರೀದೇವಿ, ಶಶಿಕುಮಾರ್, ಮೂರು ವರ್ಷದ ಈಶ್ವರ ಹಾಗೂ ಒಂದು ವರ್ಷದ ರಿಷಿಕುಮಾರ್ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಹೊಳಲ್ಕೆರೆ ಹಾಗೂ ಚಿತ್ರದುರ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಲಿಕ್ ಮಾಡಿ ಓದಿ: ಸಚಿವ ಜಮೀರ್ ಅಹಮ್ಮದ್ ಆರೋಗ್ಯದಲ್ಲಿ ವ್ಯತ್ಯಾಸ | ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೊಳಲ್ಕೆರೆ ತಾಲ್ಲೂಕಿನ ದುಮ್ಮಿ ಗೊಲ್ಲರಹಟ್ಟಿ ಗ್ರಾಮದ ಜುಂಜಪ್ಪ ದೇವಸ್ಥಾನಕ್ಕೆ ಹೋಗಿದ್ದ ವೀರೇಶ್, ಅಲ್ಲಿಂದ ಮಗುವಿನ ಚಿಕಿತ್ಸೆಗಾಗಿ ಹೊಳಲ್ಕೆರೆಯ ಆಸ್ಪತ್ರೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ. ಚಿಕ್ಕಜಾಜೂರು ಪಿಎಸ್ಐ ರೂಪಾ ತೆಂಬದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದೂರು ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
