
CHITRADURGA NEWS | 22 AUGUST 2026
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಬಲ್ಲಾಳಸಮುದ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಒಳಪಡುವ ಬೆಲಗೂರು ಗ್ರಾಮದ ಅಂಗನವಾಡಿ ಕೇಂದ್ರ ಹಾಗೂ ಸರ್ಕಾರಿ ಹಿರಿಯ ಬಾಲಕಿಯರ ಶಾಲೆಯಲ್ಲಿ ಈಚೆಗೆ ವಿಶ್ವ ಸೊಳ್ಳೆ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: ನಾನು, ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಆ.23ರಂದು ಲೋಕಾರ್ಪಣೆ
ಈ ವೇಳೆ ಮಾತನಾಡಿದ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಮ್ಮ, ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗ್ಯೂ, ಚಿಕ್ಕನ್ಗುನ್ಯಾ, ಮೆದುಳು ಜ್ವರ ಹಾಗೂ ಆನೆಕಾಲು ರೋಗಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು ಹಾಗೂ ಕಿಟಕಿ, ಬಾಗಿಲುಗಳಿಗೆ ಮತ್ತು ಮಲಗುವಾಗ ಸೊಳ್ಳೆ ಪರದೆಗಳನ್ನು ಬಳಸುವುದು ಮುಂತಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಸೊಳ್ಳೆಜನ್ಯ ರೋಗಗಳ ನಿಯಂತ್ರಣ ಕುರಿತು ಪ್ರತಿಜ್ಞಾವಿಧಿ ಬೋಧಿಸಲಾಯಿತು ಹಾಗೂ ಸಾರ್ವತ್ರಿಕ ಲಸಿಕಾ ಅಧಿವೇಶನದ ಮೇಲ್ವಿಚಾರಣೆಯನ್ನು ನಡೆಸಲಾಯಿತು.
ಇದನ್ನೂ ಓದಿ: ಮನೆ-ಮನೆಗೆ ಜಾತಿ ಪ್ರಮಾಣಪತ್ರ ವಿತರಣೆ | ಜಿಲ್ಲಾಡಳಿತದ ಸಾಧನೆಗೆ ಶ್ಲಾಘನೆ
ಕಾರ್ಯಕ್ರಮದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ನಿರ್ಮಲ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೇಖಾ, ಶಾಲಾ ಶಿಕ್ಷಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

