
CHITRADURGA NEWS | 31 MAY 2026
ಚಿತ್ರದುರ್ಗ: ಕೀಟ ಚಿಕ್ಕದಾದರೂ ಅದರ ಕಾಟ ದೊಡ್ಡದು. ಡೆಂಗ್ಯೂ ನಿಯಂತ್ರಣಕ್ಕೆ ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲದೆ, ಸಾರ್ವಜನಿಕರು ಮತ್ತು ಎಲ್ಲಾ ವಿವಿಧ ಇಲಾಖೆಗಳು ಒಟ್ಟಾಗಿ ಕೈಜೋಡಿಸಬೇಕು ಎಂದು ಹೊಸದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರಾಘವೇಂದ್ರ ಪ್ರಸಾದ್ ತಿಳಿಸಿದರು.
ಇದನ್ನೂ ಓದಿ: ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
ಹೊಸದುರ್ಗ ತಾಲ್ಲೂಕಿನ ಬೆಲಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಮುದಾಯದ ಸಹಭಾಗಿತ್ವ ಪರಿಶೀಲಿಸಿ, ಸ್ವಚ್ಛಗೊಳಿಸಿ ಹಾಗೂ ಮುಚ್ಚಿಡಿ ಎಂಬ ಘೋಷವಾಕ್ಯದ ಮಹತ್ವ ತಿಳಿಸಿದ ಅವರು, ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಅದನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಿದರು. ವಿವಿಧ ಇಲಾಖೆಗಳ ನಿರಂತರ ಸಹಯೋಗ ಹಾಗೂ ಸಾರ್ವಜನಿಕರ ಜಾಗೃತಿಯಿಂದಾಗಿ ಸದ್ಯ ಡೆಂಗ್ಯೂ ಪ್ರಕರಣಗಳ ಪ್ರಮಾಣ ಇಳಿಕೆಯ ಹಾದಿಯಲ್ಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ಜಿಲ್ಲಾ ಯಾದವ ಗೊಲ್ಲ ಸಂಘದ ಅಧ್ಯಕ್ಷರಾಗಿ ಮೀಸೆ ಮಹಾಲಿಂಗಪ್ಪ ಆಯ್ಕೆ | ಭಾರೀ ಪೈಪೋಟಿಯಲ್ಲಿ ಮೇಲುಗೈ ಸಾಧಿಸಿದ ಮಹಾಲಿಂಗಪ್ಪ ಬಣ
ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ. ಸಹನಾ, ಡಾ. ಸುಮಾ, ಡಾ. ಕೃಪಾಕರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಲಲಿತಮ್ಮ, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಇದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

