ಚಿತ್ರದುರ್ಗ ನ್ಯೂಸ್.ಕಾಂ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನಾಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭರ್ಜರಿ ರೌಡ್ಸ್ ಹಾಕಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಇಂದು ಜವಾಬ್ದಾರಿ ವಹಿಸಿಕೊಳ್ಳಲಿದ್ದು, ನಾಳೆಯಿಂದ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ.
ರಾಜ್ಯಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಇಲ್ಲಿ ಹಲವು ಮಠ, ಮಂದಿರ, ಪಕ್ಷದ ಕಾರ್ಯಾಲಯ, ಕಾರ್ಯಕರ್ತರು ಹಾಗೂ ಮುಖಂಡರ ಮನೆಗಳಿಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 10.30ಕ್ಕೆ ಚಿತ್ರದುರ್ಗ ನಗರಕ್ಕೆ ಆಗಮಿಸಲಿರುವ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮನೆಗೆ ಭೇಟಿ ನೀಡಿ ಅಲ್ಲಿ ಚಹಾ, ಉಪಹಾರ ಸೇವಿಸಿ ನಂತರ ಮಠಗಳ ಕಡೆಗೆ ಪ್ರಯಾನ ಬೆಳೆಸಲಿದ್ದಾರೆ.
ಇದನ್ನೂ ಓದಿ: ಬಿ.ವೈ.ವಿಜಯೇಂದ್ರ ಬಿಜೆಪಿಯ ರೋಹಿತ್ ಶರ್ಮಾ
ಶ್ರೀ ಮಾದಾರ ಚನ್ನಯ್ಯ ಗುರುಪೀಠ, ಶ್ರೀ ಮಡಿವಾಳ ಮಾಚಿದೇವ ಗುರುಪೀಠ, ಶ್ರೀ ಭೋವಿ ಗುರುಪೀಠ, ಶ್ರೀ ಯಾದವ ಗುರುಪೀಠ, ಶ್ರೀ ಕೇತೇಶ್ವರ ಗುರುಪೀಠ, ಶ್ರೀ ಕಬೀರಾನಂದ ಆಶ್ರಮ, ಸಿರಿಗೆರೆ ತರಳಬಾಳು ಮಠಗಳಿಗೆ ಭೇಟಿ ನೀಡುವರು.
ಇಲ್ಲಿಂದ ಹೊಸದುರ್ಗಕ್ಕೆ ತೆರಳುವ ಬಿವೈವಿ ಮಧುರೆಯಲ್ಲಿರುವ ಭಗೀರಥ ಗುರುಪೀಠ, ಸಾಣೇಹಳ್ಳಿ ತರಳಬಾಳು ಶಾಖಾ ಮಠ, ಕಾಗಿನೆಲೆ ಕನಕಗುರುಪೀಠ ನಂತರ ಹೊಸದುರ್ಗ ಪಟ್ಟಣದಲ್ಲಿರುವ ಕುಂಚಿಟಿಗ ಮಠಕ್ಕೆ ಬೇಟಿ ನೀಡಿ ಎಲ್ಲ ಗುರುಗಳ ಆಶೀರ್ವಾದ ಪಡೆದುಕೊಳ್ಳಲಿದ್ದಾರೆ.
ಇಲ್ಲಿ ಮುಗಿಸಿದ ನಂತರ ಕಾರ್ಯಕರ್ತರ ಜೊತೆಗೆ ಸಮಾಲೋಚನೆ ನಡೆಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಜವಾಬ್ದಾರಿ ವಹಿಸಿಕೊಳ್ಳುತ್ತಲೇ ಪಕ್ಷದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕಾರ್ಯಕರ್ತರು ಉತ್ಸಾಹದಿಂದ ತೊಡಗಿಸಿಕೊಳ್ಳುತ್ತಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆ ವೇಳೆ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ ತಾಲೂಕುಗಳಿಗೆ ವಿಜಯೇಂದ್ರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ್ದರು. ಆನಂತರ ಇಲ್ಲಿ ನಡೆದ ಸಿರಿಗೆರೆ ಮಠದ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ರಾಜ್ಯಾಧ್ಯಕ್ಷರಾಗಿ ಜಿಲ್ಲೆಗೆ ಕಾಲಿಡುತ್ತಿದ್ದಾರೆ.
ಇದನ್ನೂ ಓದಿ: ಮುರುಘಾಶ್ರೀ ಪ್ರಕರಣ | ಜಾಮೀನು ಅರ್ಜಿ ಪರಿಶೀಲನೆ ಇಂದು
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ರಾಜಾಹುಲಿ ಎಂದು ಗುರುತಿಸುತ್ತಿದ್ದ ಕಾರ್ಯಕರ್ತರು, ಬಿ.ವೈ.ವಿಜಯೇಂದ್ರ ಅವರನ್ನು ಮರಿಹುಲಿ ಎಂದು ಕರೆಯುವ ಮೂಲಕ ಸೋಲಿನ ಕಹಿ ಮರೆತು ಲೋಕಸಭೆ ಚುನಾವಣೆಗೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಈಗಾಗಲೇ ವಿಜಯೇಂದ್ರ ಜಿಲ್ಲೆಗೆ ಭೇಟಿ ನೀಡುತ್ತಿರುವ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟರ್ಗಳು ಹರಿದಾಡುತ್ತಿದ್ದು, ಕೋಟೆನಾಡಿಗೆ ಮರಿಹುಲಿ ಎಂಬ ಮೀಮ್ಸ್ ಹರಿದಾಡುತ್ತಿವೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number