By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಬೆಳಗಾವಿ ಮೂಲದ ಮೂವರು ಮಹಿಳೆಯರನ್ನು ಬಂಧಿಸಿದ ಬಡಾವಣೆ ಠಾಣೆ ಪೊಲೀಸರು
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಬೆಳಗಾವಿ ಮೂಲದ ಮೂವರು ಮಹಿಳೆಯರನ್ನು ಬಂಧಿಸಿದ ಬಡಾವಣೆ ಠಾಣೆ ಪೊಲೀಸರು

ಕ್ರೈಂ ಸುದ್ದಿ

ಬೆಳಗಾವಿ ಮೂಲದ ಮೂವರು ಮಹಿಳೆಯರನ್ನು ಬಂಧಿಸಿದ ಬಡಾವಣೆ ಠಾಣೆ ಪೊಲೀಸರು

chitradurganews.com
Last updated: 11 December 2023 20:49
chitradurganews.com
2 years ago
Share
FIR
FIR
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ:

ಬಸ್ ನಿಲ್ದಾಣ ಹಾಗೂ ಬಸ್ ಪ್ರಯಾಣವನ್ನು ಟಾರ್ಗೆಟ್ ಮಾಡಿ ಕಳ್ಳತನ ನಡೆಸುತ್ತಿದ್ದ ಮೂವರು ಅಂತರ್ ಜಿಲ್ಲಾ ಮಹಿಳೆಯರನ್ನು ಚಿತ್ರದುರ್ಗದ ಬಡಾವಣೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ 50 ಸಾವಿರ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಅಡ್ಡಬಂದ ನಾಯಿ ತಪ್ಪಿಸಲು ಹೋದ ಬೈಕ್ ಸಾವರ ಅಪಘಾತದಲ್ಲಿ ಸಾವು

ಇತ್ತೀಚೆಗೆ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬಸ್ ನಿಲ್ದಾಣಗಳಲ್ಲಿ, ಬಸ್ಸುಗಳನ್ನು ಹತ್ತುವ ಮತ್ತು ಇಳಿಯುವ ವೇಳೆ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದರು. ಬಸ್ಸಗಳಲ್ಲಿ ಪ್ರಯಾಣಿಕರಂತೆ ಕುಳಿತು ಪ್ರಯಾಣಿಕರ ಬಳಿ ಇರುವ ಬೆಲೆ ಬಾಳುವ ಆಭರಣಗಳನ್ನು ಕಳವು ಮಾಡುವ ಘಟನೆಗಳು ನಡೆಯುತ್ತಿದ್ದವು.

ಚಿತ್ರದುರ್ಗ ಬಡಾವಣೆ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಈ ನಿಟ್ಟಿನಲ್ಲಿ ಬೀಟ್ ಹೆಚ್ಚಿಸಿದ್ದ ಪೊಲೀಸರು, ಡಿ.4ರಂದು ಮೂವರು ಅಂತರ್ ಜಿಲ್ಲಾ ಮಹಿಳಾ ಕಳ್ಳಿಯರನ್ನು ಬಂಧಿಸಿದ್ದಾರೆ.

ನಗರದ ಚಳ್ಳಕೆರೆ ಗೇಟ್ ಬಳಿ ಗಸ್ತಿನಲ್ಲಿರುವಾಗ ಅನುಮಾನಸ್ಪದವಾಗಿ ನಿಂತಿದ್ದ ಮೂವರು ಮಹಿಳೆಯರ ಹೆಸರು ವಿಳಾಸ ಕೇಳಿದಾಗ ಅಸ್ಪಷ್ಟ ಉತ್ತರ ನೀಡಿದ್ದರು. ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದಾಗ ಬೆಳಗಾವಿ ಜಿಲ್ಲೆ, ಹುಕ್ಕೇರಿ ತಾಲೂಕಿನ ಹತ್ತರಗಿ ಗ್ರಾಮದ ಮಹೇಶ್ವರಿ(ರೇಖಾವತಿ @ ರಾಧ), ಸಂಜನಾ ಹಾಗೂ ಅಕಿಲಾ ಎಂದು ಗೊತ್ತಾಗಿದೆ.

ಇದನ್ನೂ ಓದಿ: ಚಿತ್ರದುರ್ಗ-ತುಮಕೂರು ನಡುವೆ ವಿಮಾನ(AIRPORT) ನಿಲ್ದಾಣಕ್ಕೆ ಚಿಂತನೆ

ಮುಂದುವರೆದು ಪ್ರಕರಣಗಳಲ್ಲಿ ಸರಗಳ್ಳತನ & ಒಡವೆಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ. ಸದರಿ ಆರೋಪಿತರಿಂದ ಬಡಾವಣೆ ಠಾಣೆಯಲ್ಲಿ ದಾಖಲಾಗಿದ್ದ ಒಂದು ಪ್ರಕರಣದಲ್ಲಿ 20 ಗ್ರಾಂ ತೂಕದ ತುಂಡಾದ 1 ಲಕ್ಷ ರೂ. ಮೌಲ್ಯದ ಬಂಗಾರದ ಮಾಂಗಲ್ಯ ಸರ, ಹಾಗೂ ಮತ್ತೊಂದು ಪ್ರಕರಣದಲ್ಲಿ 20 ಗ್ರಾಂ ತೂಕದ 1 ಲಕ್ಷ ರೂ. ಬೆಲೆ ಬಾಳುವ 5 ಜೊತೆ ಬಂಗಾರದ ಕಿವಿಯೋಲೆಗಳು, ಒಂದು ಜತೆ ಬೆಳ್ಳಿ ಕಾಲು ಚೈನು ಮತ್ತು 50 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.

ಆರೋಪಿತರು ಬಳ್ಳಾರಿ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖಾ ಸಮಯದಲ್ಲಿ ತಿಳಿದುಬಂದಿದೆ.

ಸದರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ ಬಡಾವಣೆ ವೃತ್ತದ ವೃತ್ತ ನಿರೀಕ್ಷಕರಾದ ನಯೀಂ ಅಹಮದ್, ಪಿ.ಎಸ್.ಐ. ಟಿ.ರಘು ಮತ್ತು ಸಿಬ್ಬಂದಿಗಳಾದ ಲಕ್ಷ್ಮಣ, ಮಂಜುನಾಥ, ವೀರೇಶ ಅವರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರಕುಮಾರ್ ಮೀನಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:Bangarada SarabelagaviChitradurgacrimegold chainPoliceTheftThievesಅಪರಾಧಕಳ್ಳತನಚಿತ್ರದುರ್ಗಪೊಲೀಸ್ಬಂಗಾರದ ಸರಬೆಳಗಾವಿ ಬಡಾವಣೆಸರಗಳ್ಳರು
Share This Article
Facebook Email Print
Previous Article FIR ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಬೈಕಿನಿಂದ ಬಿದ್ದು, ಸವಾರ ಮೃತ
Next Article ಕರುನಾಡ ವಿಜಯಸೇನೆ ಕಾರ್ಯಕರ್ತರು ಚಿತ್ರದುರ್ಗ ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ತಾಲೂಕು ಆಫೀಸ್ ಬಳಿ ಶೌಚಾಲಯ ಇದೆ, ನೀರಿಲ್ಲ..!!!
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up