CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತದಾರ ಕೇಸರಿ ಪಾಳಯಕ್ಕೆ ಬಹುಪರಾಕ್ ಹೇಳಿರುವುದು ಸ್ಪಷ್ಟವಾಗುತ್ತಿದೆ. ಎಣಿಕೆ ಕಾರ್ಯದ ಮೊದಲ ಸುತ್ತು ಹೊರತುಪಡಿಸಿ ಎರಡನೇ ಸುತ್ತಿನಿಂದ ಎಲ್ಲಿಯೂ ಕಮಲವನ್ನು ಮತದಾರ ಕೈ ಬಿಟ್ಟಿಲ್ಲ.
17ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮತಗಳ ಅಂತರ ಮತ್ತಷ್ಟು ಹೆಚ್ಚಾಗಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 5.93,621 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 5,57,962ಮತ ಪಡೆದಿದ್ದಾರೆ. 35,659 ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.
ಮೊದಲ ಸುತ್ತಿನಲ್ಲಿ ಕೇವಲ 75 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಬಳಿಕ ಎರಡರಿಂದ ಹದಿನೈದನೇ ಸುತ್ತಿನವರೆಗೂ ನಿರಂತರ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತ್ರ ಸುತ್ತಿನಿಂದ ಸುತ್ತಿಗೆ ಅಂತರವನ್ನು ಹೆಚ್ಚಿಸಿಕೊಳ್ಳುತ್ತ ಸಾಗಿದ್ದಾರೆ. ಹದಿನಾನೇ ಸುತ್ತಿನಲ್ಲಿ 33,164 ಮತಗಳ ಅಂತರ ಕಾಯ್ದುಕೊಂಡಿದ್ದ ಕಾರಜೋಳ 17ನೇ ಸುತ್ತಿಗೆ 35,659 ಅಂತರ ಕಾಯ್ದುಕೊಂಡಿದ್ದಾರೆ.
ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದೆ. ವಿಜಯದ ಮಾಲೆ ಬಹುತೇಕ ಬಿಜೆಪಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಕೊರಳನ್ನು ಅಲಂಕರಿಸುವ ಕ್ಷಣ ಶುರುವಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
