
CHITRADURGA NEWS | 13 MARCH 2024
ಚಿತ್ರದುರ್ಗ: ಬೀದಿ ಬದಿಗಳಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಮತ್ತು ಗುಣಮಟ್ಟವಲ್ಲದ ಆಹಾರ ತಯಾರಿಸಿ ನೀಡುವುದರಿಂದ ಜನರ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ರಾಜ್ಯ ಸರ್ಕಾರವು ಕೂಡ ಇತ್ತೀಚೆಗೆ ಗೋಭಿ ಮಂಚೂರಿಗೆ ಬಣ್ಣ ಹಾಕುವುದನ್ನು ನಿಷೇಧಿಸಿದ್ದು, ಗೋಭಿ ಮಂಚೂರಿಗೆ ಬಣ್ಣ ಹಾಕಿ ನೀಡಿದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಅಂಕಿತಾಧಿಕಾರಿ ಡಾ. ಪಾಲಾಕ್ಷ ಅವರು ಹೇಳಿದ ರು.
ಇದನ್ನೂ ಓದಿ: ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕುರಿತಂತೆ ಬೀದಿ ಬದಿ ವ್ಯಾಪಾರಸ್ಥರಿಗೆ ಅರಿವು ಮೂಡಿಸಲು ನಗರಸಭಾ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ: ಕತ್ತಲ ರಾತ್ರಿ ಹೆಗಲ ಮೇಲೆ ಬಂದೂಕು | ಹೆದ್ದಾರಿ ತೋಟದಲ್ಲಿ ಆಗಂತುಕರ ಹೆಜ್ಜೆ
ಬೀದಿ ಬದಿಯಲ್ಲಿ ಸುರಕ್ಷತೆ, ಗುಣಮಟ್ಟವಲ್ಲದ ಆಹಾರ ತಯಾರಿಸಿ ವಿತರಿಸುವುದು ನಿಯಮ ಬಾಹಿರವಾಗಿದ್ದು, ಪ್ರತಿಯೊಬ್ಬರೂ ಆಹಾರ ಸುರಕ್ಷತೆ ಕಾಯ್ದೆಯಡಿ ನೊಂದಣಿ ಮಾಡಿಸುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ಆಹಾರ ತಯಾರಿಸಿ ನೀಡುವಂತಹ ಪ್ರತಿಯೊಬ್ಬ ಬೀದಿ ಬದಿ ವ್ಯಾಪಾರಸ್ಥರು ಕೂಡ ಆಹಾರ ಸುರಕ್ಷತೆ ಕಾಯ್ದೆಯಡಿ ನೊಂದಣಿ ಹಾಗೂ ಪರವಾನಿಗಿ ಪಡೆಯುವುದು ಕಡ್ಡಾಯವಾಗಿದೆ. ತಪ್ಪಿದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: 5, 8 ಮತ್ತು 9 ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ತಡೆ
ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತೆ ರೇಣುಕಾ, ಸಮುದಾಯ ಸಂಘಟಕರಾದ ಕೆಂಚಪ್ಪ, ನಗರಸಭೆ ಪರಿಸರ ಅಭಿಯಂತರ ವಾಸಿಂ ಜಾಫರ್ ಉಪಸ್ಥಿತರಿದ್ದರು. ನಗರದ ಬೀದಿ ಬದಿ ವ್ಯಾಪಾರಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

