CHITRADURTGA NEWS | 11 SEPTEMBER 2025
ಹೊಸದುರ್ಗ: ಪಿಒಪಿ ಗಣಪತಿಯನ್ನು ನಿಷೇಧಿಸಿ ಹಿಂದೂ ಧರ್ಮದ ಭಾವನೆಯನ್ನು ಸಂರಕ್ಷಿಸಿ ಎಂದು ಕಾಯಕಯೋಗಿ ಜಗದ್ಗುರು ಶ್ರೀ ಶಾಂತವೀರ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಡಿಜೆ ಗೆ ಅನುಮತಿ ನೀಡುವಂತೆ ವಿಶ್ವಹಿಂದೂ ಪರಿಷತ್, ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ
ಕುಂಚಿಟಿಗ ಮಹಾಸಂಸ್ಥಾನ ಮಠದ ಕುಂಚ ಶ್ರೀ ಸಭಾಭವನದಲ್ಲಿ ನಡೆದ 23ನೇ ವರ್ಷ ಒಂಭತ್ತನೇ ತಿಂಗಳ ಸುಜ್ಞಾನ ಸಂಗಮ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಇತ್ತೀಚಿಗೆ ಸ್ಪರ್ಧೆಗೆ ಬಿದ್ದಂತೆ ದೊಡ್ಡ ಗಾತ್ರದ ಗಣಪತಿಗಳನ್ನು ತಂದು ವಿಸರ್ಜನೆ ಮಾಡುವ ಸಮಯದಲ್ಲಿ ತುಂಬಾ ಹೀನಾಯವಾಗಿ ವಿಸರ್ಜನೆ ಮಾಡುವ ಮೂಲಕ ಭಕ್ತರ ಭಾವನೆಗೆ ಧಕ್ಕೆ ತಂದಿದ್ದಾರೆ.
ನಮ್ಮ ಪರಂಪರೆಯಂತೆ ಮಣ್ಣಿನ ಗಣಪವನ್ನು ಪ್ರತಿಷ್ಠಾಪಿಸಿ ನಾವು ಕುಡಿಯುವ ನೀರಿನ ಬಾವಿಯಲ್ಲಿ ಬಿಡುವ ವಾಡಿಕೆ ಇತ್ತು, ಆದರೆ ಇತ್ತೀಚಿಗೆ ಸ್ಪರ್ಧೆಗೆ ಬಿದ್ದಂತೆ ಒಂದಕ್ಕಿಂತ ಒಂದು ದೊಡ್ಡ ಗಣಪವನ್ನು ಕೂರಿಸಿ ಕೋಟಿಗಟ್ಟಲೆ ವೆಚ್ಚ ಮಾಡಿ ಜೆಸಿಬಿಯಲ್ಲಿ ಕೆರೆಗೆ ತಳ್ಳಿ ಅದರ ಮೇಲೆ ಕುಣಿದು ಕುಪ್ಪಳಿಸುವ ಮೂಲಕ ಗಣಪತಿಯ ಪವಿತ್ರಕ್ಕೆ ಧಕ್ಕೆ ತಂದಿದ್ದಾರೆ. ತಕ್ಷಣ ಸರ್ಕಾರ ಎಚ್ಚೆತ್ತುಕೊಂಡು ಗಣಪತಿಯ ಪವಿತ್ರತೆಯನ್ನು ಉಳಿಸಿ ಪಿಓಪಿ ಗಣಪತಿಯನ್ನು ನಿಷೇಧಿಸಲು ಆಗ್ರಹಿಸುತ್ತೇವೆ.
ಇದನ್ನೂ ಓದಿ: ಮಾದಾರ ಶ್ರೀ ಆಶೀರ್ವಾದ ಪಡೆದ ಅಯೋಧ್ಯೆ ಶ್ರೀರಾಮ ಮಂದಿರ ಉಸ್ತುವಾರಿ ಗೋಪಾಲ್ ಜೀ
ಗಣಪ ಎಂದರೆ ಭಕ್ತಿಯ ಸಂಕೇತ ವಿಜ್ಞ ನಿವಾರಣೆಯಾಗಲಿ ಎಂದು ವಿಘ್ನೇಶ್ವರನನ್ನು ತರುವ ಜನ ಕುಡಿದ ಮತ್ತಿನಲ್ಲಿ ಸಾಯುತ್ತಿರುವುದು ಅತ್ಯಂತ ನೋವಿನ ಸಂಗತಿ. ಉತ್ಸಾಹ ಮಾಡುವ ಉತ್ಸಾಹದಲ್ಲಿ ಮಧ್ಯಪಾನ ಮಾಡಿ ಗಣಪತಿ ತರುವುದು ಮದ್ಯಪಾನ ಮಾಡಿ ಗಣಪತಿ ಬಿಡುವುದು ಎರಡು ಹಿಂದೂ ಧರ್ಮಕ್ಕೆ ಮಾಡುವ ಅಗೌರವ.
ಶುಭ್ರ ಬಟ್ಟೆಯೊಂದಿಗೆ ಭಕ್ತಿಯಿಂದ ಗಣಪನನ್ನು ತಂದು ಶ್ರದ್ಧೆಯಿಂದ ಗಣಪನನ್ನು ವಿಸರ್ಜನೆ ಮಾಡುವ ಆಚರಣೆ ಜಾರಿಗೆ ಬರಬೇಕು. ವಿಶ್ವ ಹಿಂದೂ ಪರಿಷತ್, ಬಜರಂಗದಳ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಈ ಬಗ್ಗೆ ಜಾಗೃತಿ ವಹಿಸಿ ಸಂಘಟನೆಯಿಂದಲೇ ಪ್ರತಿವರ್ಷ ಮೂರು ಅಥವಾ ಐದು ಅಡಿ ಗಣಪನನ್ನು ಕೂರಿಸಲು ವ್ಯವಸ್ಥೆ ಮಾಡಿಕೊಡಬೇಕು.
ಇಲ್ಲದಿದ್ದರೆ ಸಾಮಾಜಿಕ ಜಾಲತಾಣಗಳಾದ ಯೂಟ್ಯೂಬ್, ಗೂಗಲ್, ಫೇಸ್ಬುಕ್, ಟ್ವಿಟರ್, ಎಕ್ಸ್ ನೋಡುವ ವಿದೇಶಿಗರು ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡುವ ಅವಕಾಶಗಳಿವೆ. ತಕ್ಷಣ ಜಾಗ್ರತರಾಗಿ ಯುವಕರಿಗೆ ಸರಿದಾರಿಯಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಧಿಕಾರಿ ನೂತನ ಕಟ್ಟಡ ವೈದ್ಯಕೀಯ ಕಾಲೇಜಿಗೆ ಹಸ್ತಾಂತರ | ಬೆಂಗಳೂರಿನಲ್ಲಿ ಸಭೆ
ಗುರು ಸ್ಥಾನಕ್ಕೆ ತಮ್ಮ ಮೇರು ವ್ಯಕ್ತಿತ್ವದ ಮೂಲಕ ಸರ್ವಪಲ್ಲಿ ರಾಧಾಕೃಷ್ಣನ್ ರವರು ಗೌರವ ತಂದಿದ್ದಾರೆ. ಅವರ ದಾರಿಯಲ್ಲಿ ನಡೆಯಬೇಕಾದ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಶಿಕ್ಷಕ ಎಂದರೆ ಗುರು ಆ ಗುರುಗಳು ಸಮಾಜದ ಉನ್ನತಿಗೆ, ಪ್ರಗತಿಗೆ ಪೂರಕವಾದ ಪಾಠ ಪ್ರವಚನಗಳನ್ನು ಮಕ್ಕಳಿಗೆ ಬೋಧಿಸುವ ಮೂಲಕ ಸುಭದ್ರ ಸಮಾಜವನ್ನು ನಿರ್ಮಾಣ ಮಾಡಲು ನಿಮ್ಮಗಳ ಪಾತ್ರ ತುಂಬಾ ದೊಡ್ಡದಿದೆ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಚನ್ನಗಿರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಯಪ್ಪ ಮಾತನಾಡಿ, ಶಿಕ್ಷಕ ಉತ್ತಮವಾಗಿ ಕಾರ್ಯನಿರ್ವಹಿಸಿದರೆ ದೇಶವೇ ಉತ್ತಮವಾಗಿರುತ್ತದೆ, ನಾವು ಸದಾ ಕ್ರಿಯಾಶೀಲರಾಗಿ ಸಮಾಜಮುಖಿಯಾಗಿ ವಿದ್ಯಾರ್ಥಿಗಳ ಹಿತ ಕಾಯುವ ಮತ್ತು ಅವರಿಗೆ ಅರಿವನ್ನು ಮೂಡಿಸುವ ಪ್ರಯತ್ನ ನಿರಂತರವಾಗಿರಬೇಕು. ವಿದ್ಯಾರ್ಥಿಗಳನ್ನು ಮತ್ತು ಶಾಲೆಯನ್ನು ಅತ್ಯಂತ ಪವಿತ್ರವಾಗಿ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ.
ಶಿಕ್ಷಕ ಎಲ್ಲರಿಗೂ ಗುರುವಾಗಿ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುವ ಒಬ್ಬ ಶ್ರೇಷ್ಠ ವ್ಯಕ್ತಿ, ಹಾಗಾಗಿ ಶಿಕ್ಷಕರು ಸದಾ ಸಮಾಜದ ಹಿತವನ್ನು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಆಲೋಚನೆಯೊಂದಿಗೆ ಸಾಗಬೇಕು ಎಂದರು.
ಸಾಣೆಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜ್ ನಿವೃತ್ತ ಪ್ರಾಂಶುಪಾಲರಾದ ಬಿ.ಈಶ್ವರಪ್ಪ ಮಾತನಾಡಿದರು, ಚಂದ್ರಶೇಖರ್ ರಂಗಾಪುರ ಉಪನ್ಯಾಸ ನೀಡಿದರು.
ಲಿಂಗದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾದ ಎಲ್.ಅರ್. ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: ಹೊಳಲ್ಕೆರೆ | PDO ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ
ಸುಜ್ಞಾನ ಸಂಗಮ ಕಾರ್ಯಕ್ರಮದಲ್ಲಿ 25ನೇ ಸಾಲಿನ ರಾಜ್ಯ ಪ್ರಶಸ್ತಿ ವಿಜೇತ ಶಿವಶಂಕರ್ ಹೊಸದುರ್ಗ, ಜಿಲ್ಲಾ ಪ್ರಶಸ್ತಿ ವಿಜೇತರಾದ ಮಂಜುನಾಥ್ ಕೊಂಡಾಪುರ, ಉಮಾದೇವಿ ವೆಂಗಸಂದ್ರ, ಮಹಾಂತೇಶ್ ಅರೇನಹಳ್ಳಿ, ರಮೇಶ್ ನಾಗತಿಹಳ್ಳಿ, ಮಂಜುನಾಥ್ ಹೊಸದುರ್ಗ, ವಸಂತ್ ಕುಮಾರ್ ಹಾಗಲಕೆರೆ, ನಿವೃತ್ತ ಶಿಕ್ಷಕರಾದ ಮಂಜುನಾಥ್ ದೇವಪುರ ಇವರನ್ನು ಶ್ರೀಮಠದಿಂದ ಸನ್ಮಾನಿಸಿ ಆಶೀರ್ವದಿಸಲಾಯಿತು.
ಶ್ರೀ ಮಾರುತಿ ಯುವಕ ಸಂಘ ಹಾಗಲಕೆರೆ ಗ್ರಾಮದ ಭಕ್ತರು ಭಜನೆ ನೇರವೇರಿಸಿದರು.
ಸಮಾರಂಭದಲ್ಲಿ ಶ್ರೀ ಮಠದ ಭಕ್ತರು, ಶಿಕ್ಷಕರು, ಶ್ರೀ ಸಂಗಮೇಶ್ವರ ಸಮುದಾಯ ಭವನ ಸಮಿತಿ, ನೌಕರ ಸಂಘ, ಯುವ ವೇದಿಕೆ, ಕುಂಚಶ್ರೀ ಸಂಗಮೇಶ್ವರ ಮಹಿಳಾ ಸಂಘ, ಶಾಂತವೀರ ಶ್ರೀ ಪತ್ತಿನ ಸಹಕಾರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

