
CHITRADURGA NEWS | 29 SEPTEMBER 2025
ಚಿತ್ರದುರ್ಗ: ಬಸವಸಂಸ್ಕೃತಿ ಅಭಿಯಾನ ನಿಮಿತ್ತ ಬಸವ ಸಂಸ್ಕೃತಿ ಅಭಿಯಾನ ಪಾದಯಾತ್ರೆಯನ್ನು ಆಯೋಜಿಸಲಾಗಿತ್ತು. ಮಧ್ಯ ಕರ್ನಾಟಕದ ಕೋಟೆನಾಡಿನಲ್ಲಿ ಬಸವಸಂಸ್ಕೃತಿ ಅಭಿಯಾನದ ಅಂಗವಾಗಿ ವೈಚಾರಿಕ ಮತ್ತು ಸಾಂಸ್ಕೃತಿಕ ಪಾದಯಾತ್ರೆಗೆ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಚಾಲನೆ ನೀಡಿದರು.
ಇದನ್ನೂ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 29 |ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ

ಬಸವಾದಿ ಶರಣರ ತತ್ವ ಸಿದ್ಧಾಂತಗಳನ್ನು ಸಾರುವ ಈ ಮೆರವಣಿಗೆಗೆ ನಗರದ ಜನತೆ ಉತ್ತಮವಾಗಿ ಸ್ಪಂದಿಸಿದರು.
ಪಾದಯಾತ್ರೆಯು ನಗರದ ನೀಲಕಂಠೇಶ್ವರ ದೇವಸ್ಥಾನದ ಆವರಣದಿಂದ ಹೊರಟು, ಪ್ರಮುಖ ರಸ್ತೆಗಳಾದ ಗಾಂಧಿ ವೃತ್ತ, ಮುಖ್ಯರಸ್ತೆ, ಪ್ರವಾಸಿ ಮಂದಿರ, ಅಂಬೇಡ್ಕರ್ ವೃತ್ತದ ಮೂಲಕ ಬಸವಮಂಟಪ, ದೊಡ್ಡಪೇಟೆ, ಚಿಕ್ಕಪೇಟೆ ಮೂಲಕ ಸಾಗಿ ನೀಲಕಂಠೇಶ್ವರ ದೇವಸ್ಥಾನದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಮೆರವಣಿಗೆಯುದ್ದಕ್ಕೂ ಬಸವ ತತ್ವದ ಘೋಷಣೆಗಳು ಮೊಳಗಿದವು. ಮೆರವಣಿಗೆಯಲ್ಲಿ ಬಸವಾದಿ ಶರಣರ ಭಾವಚಿತ್ರಗಳು ಮತ್ತು ಜೀವನ ಸಂದೇಶಗಳನ್ನು ಸಾರುವ ವಿವಿಧ ಸ್ತಬ್ಧಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು. ಈ ಸ್ತಬ್ಧಚಿತ್ರಗಳು ಜನರಲ್ಲಿ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾದವು.
ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹತ್ವದ ಈ ಪಾದಯಾತ್ರೆಯು, ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ವಗಳನ್ನು ಮತ್ತೊಮ್ಮೆ ಜನಮಾನಸಕ್ಕೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿತು. ಬಸವ ತತ್ವ ಸಾರುವ ವಿವಿಧ ಸ್ತಬ್ಧಚಿತ್ರಗಳು, ಡೊಳ್ಳು ಕುಣಿತ, ಕಂಸಾಳೆ, ವೀರಗಾಸೆ, ನಂದಿಕೋಲು ಹಾಗೂ ವಿವಿಧ ಸಾಂಸ್ಕೃತಿಕ ಕಲಾ ಮೇಳಗಳು ವಿವಿಧ ವಾದ್ಯಗಳ ತಂಡಗಳು ಭಾಗವಹಿಸಿದ್ದವು.
ಇದನ್ನೂ ಓದಿ: ಇಂದು ವಿದ್ಯುತ್ ವ್ಯತ್ಯಯ
ಶ್ರೀ ತರಬಾಳು ಬೃಹನ್ಮಠ ಶಾಖಾಮಠವಾದ ಸಾಣೆಹಳ್ಳಿ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀತೋಂಟದಾರ್ಯಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಡಾ.ಬಸವಕುಮಾರ ಸ್ವಾಮೀಜಿ, ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದ ಡಾ.ಬಸವಮೂರ್ತಿ ಮಾದಾರಚೆನ್ನಯ ಸ್ವಾಮಿಗಳು, ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರು, ಮಾತೆ ಗಂಗಾದೇವಿ, ಅಥಣಿ ಮೋಟಗಿಮಠದ ಶ್ರೀ ಪ್ರಭುಚನ್ನಬಸವಸ್ವಾಮಿಗಳು, ಹರಗುರುಚರಮೂರ್ತಿಗಳು ಜಿ ಎಸ್ ಅನೀತ್, ಕೆ ಎಂ ವೀರೇಶ್, ಶಂಕರಮೂರ್ತಿ, ಸುರೇಶ್ ಬಾಬು, ಹಾಗೂ ವೀರಶೈವ ಸಮಾಜದ ಹಿರಿಯ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
