By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    12 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    13 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    13 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    21 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    12 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    5 minutes ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    1 hour ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: ಮುರುಘಾ ಮಠದಲ್ಲಿ 5 ಸಾವಿರಕ್ಕೂ ಅಧಿಕ ಬಸವ ಭಕ್ತರಿಂದ ವಚನ ಝೇಂಕಾರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮುರುಘಾ ಮಠದಲ್ಲಿ 5 ಸಾವಿರಕ್ಕೂ ಅಧಿಕ ಬಸವ ಭಕ್ತರಿಂದ ವಚನ ಝೇಂಕಾರ

News Desk Chitradurga News
Last updated: 28 September 2025 18:45
News Desk Chitradurga News
8 months ago
Share
ವಚನ ಝೇಂಕಾರ ಕಾರ್ಯಕ್ರಮ
SHARE

CHITRADURGA NEWS | 28 SEPTEMBER 2025

ಚಿತ್ರದುರ್ಗ: ಮುರುಘಾ ಮಠದ ಅನುಭವ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ವಚನ ಝೇಂಕಾರ ಕಾರ್ಯಕ್ರಮದಲ್ಲಿ ತೋಟಪ್ಪ ಉತ್ತಂಗಿ ಅವರ ಗಾನಸುದೆಯಲಿ ಏಕಕಾಲಕ್ಕೆ ಸುಮಾರು 5000ಕ್ಕೂ ಮೇಲ್ಪಟ್ಟು ಬಸವ ಭಕ್ತರಿಂದ ವಚನ ಝೇಂಕಾರ ನಡೆಯಿತು. 12ನೇ ಶತಮಾನದ ವಚನಕಾರರ ವಚನಗಳನ್ನು ಒಮ್ಮೆಲೇ ಸ್ವರ್ಗವೇ ಕೆಳಗಿಳಿದಂತೆ ಭಕ್ತಿ ಪೂರ್ವಕವಾಗಿ ಹಾಡಿದರು.

ಇದನ್ನೂ ಓದಿ:  KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ | ಸಂಸದರಿಂದ ಗಾಯಾಳುಗಳ ಭೇಟಿ

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು, ಸಾವಿರಾರು ಮಹಿಳೆಯರು, ಸಾಹಿತಿಗಳು, ವಾಣಿಜ್ಯೋದ್ಯಮಿಗಳು, ವಿದ್ಯಾರ್ಥಿಗಳು, ವಿವಿಧ ಶಾಲಾ ಕಾಲೇಜುಗಳ ಸಿಬ್ಬಂದಿ ವರ್ಗದವರು, ಹರಗುರು ಚರಮೂರ್ತಿಗಳು ಭಾಗವಹಿಸಿ ವಚನ ಝೇಂಕಾರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಶಿವ ಶರಣ ಮಾದಾರ ಚೆನ್ನಯ್ಯಗುರು ಪೀಠದ ಶ್ರೀ ಬಸವಮೂರ್ತಿ ಮಾದರಚೆನ್ನಯ್ಯ ಸ್ವಾಮಿಗಳು ಪ್ರಸ್ತಾವಿಕ ಮಾತನಾಡಿ, ಹಿಮಾಲಯ ಪರ್ವತ ಇಲ್ಲದ ಭಾರತ ಕಲ್ಪನೆ ಮಾಡಿಕೊಳ್ಳಲು ಹೇಗೆ ಸಾಧ್ಯವಿಲ್ಲವೋ, ಹಾಗೆ ಬಸವ ಸಂಸ್ಕೃತಿ ಇಲ್ಲದ ಭಾರತವನ್ನು ಕಲ್ಪಿಸಿಕೊಳ್ಳುವುದು ಅಸಾದ್ಯ ಅನಿಸುತ್ತದೆ. ಇಂದು ನೂರಾರು ಸ್ವಾಮೀಜಿಗಳು ಇಲ್ಲಿ ಭಾಗವಹಿಸಿದ್ದಾರೆ.

ಕರ್ನಾಟಕ ಸರ್ಕಾರ ಬಸವಣ್ಣನವರಿಗೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಕರೆದಿರುವುದು ಅತ್ಯಂತ ಸಂತಸದ ವಿಷಯವಾಗಿದೆ. 

ಇದನ್ನೂ ಓದಿ: SJM ತಾಂತ್ರಿಕ ಮಹಾವಿದ್ಯಾಲಯದಲ್ಲಿ 205 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಚಿತ್ರದುರ್ಗದಲ್ಲಿ ಬಸವಣ್ಣನವರಿಗೆ ಸಿಕ್ಕ ಗೌರವ ಅತ್ಯಂತ ದೊಡ್ಡದು. ಜಗತ್ತಿನಲ್ಲಿ ಬಹಳಷ್ಟು ಜನ ಸಂಶೋಧಕರು, ದಾರ್ಶನಿಕರು ಇದ್ದಾರೆ. ಕೆಲವೊಂದು ಆವಿಷ್ಕಾರಗಳು ಆಯಾ ಕಾಲಘಟ್ಟಕ್ಕೆ ಮಾತ್ರ ಸೀಮಿತವಾಗಿರುತ್ತದೆ. ಆದರೆ ಬಸವಣ್ಣನವರ ತತ್ವ ಸಿದ್ಧಾಂತ ಎಂದೆಂದಿಗೂ ಪ್ರಸ್ತುತ. 

ಬಸವಧರ್ಮ ಮತ್ತೊಮ್ಮೆ ಮೇಲೆದ್ದು ಬರುತ್ತಿದೆ. ಕೇವಲ ಅದರ ವಿಜೃಂಭಣೆ ಮಾಡಿದರೆ ಸಾಲದು, ಬಸವಣ್ಣನವರ ತತ್ವ ಸಿದ್ಧಾಂತಗಳು ಎಲ್ಲರ ಮನೆ-ಮನಗಳಲ್ಲಿ ಬೆಳೆಸಬೇಕು. ಮುಂದಿನ ದಿನಗಳಲ್ಲಿ ಬಸವಣ್ಣನ ಅನುಯಾಯಿಗಳು ಏನು ಎಂಬುದನ್ನು ಜನರಿಗೆ ತಿಳಿಸಬೇಕಾಗಿದೆ. 

ಕರ್ನಾಟಕದಲ್ಲಿ ಶೂನ್ಯ ಪೀಠದ ಪರಂಪರೆ ಮುರುಘಾ ಮಠಕ್ಕೆ ಮಾತ್ರ ಇದೆ. ಈ ಪೀಠದಲ್ಲಿ ಬಂದ ಅನೇಕ ಸ್ವಾಮೀಜಿಗಳು ವಿದ್ಯೆ, ಅನ್ನ, ವಸತಿ ದಾಸೋಹಕ್ಕೆ ಪ್ರಾಶಸ್ತ್ಯ ನೀಡಿದವರಾಗಿದ್ದಾರೆ. ಸಾವಿರಾರು ನಾಯಕರನ್ನು ಉದ್ಧಾರ ಮಾಡಿದ್ದು ಶ್ರೀ ಮುರುಘಾಮಠ ಎಂದು ನುಡಿದರು.

ಸಾಣೆಹಳ್ಳಿ ಶ್ರೀ ತರಳಬಾಳು ಬೃಹನ್ಮಠ ಶಾಖೆಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ, ಒಬ್ಬ ವ್ಯಕ್ತಿ ಧರ್ಮದ ಮಾರ್ಗದಲ್ಲಿ ನಡೆಯಬೇಕಾದರೆ ಅವನು ದಯಾವಂತನಾಗಿರಬೇಕು. ಪ್ರೀತಿ, ಕರುಣೆ, ಅನುಕಂಪ ಇದ್ದರೆ ಮಾತ್ರ ಧೈರ್ಯವಂತ ಮನುಷ್ಯನಾಗಲು ಸಾಧ್ಯ. 

ಇದನ್ನೂ ಓದಿ:  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಗೈರಾಗುವ ಸಿಬ್ಬಂದಿಗಳ ಮೇಲೆ ಕಠಿಣ ಕ್ರಮ | ಡಿಸಿ ಎಚ್ಚರಿಕೆ

12ನೇ ಶತಮಾನದಲ್ಲಿ ಈ ಅಂಶಗಳು ಪ್ರಮುಖವಾಗಿದ್ದವು. ನಾವು ಪ್ರಾದೇಶಿಕವಾಗಿ ಹಿಂದುಗಳು, ಜೈನ, ಬೌದ್ಧ, ಕ್ರೈಸ್ತ ಮೊದಲಾದ ಧರ್ಮಗಳ ಇದ್ದ ಹಾಗೇ ಬಸವ ಧರ್ಮವೂ ಇದೆ. ಧಾರ್ಮಿಕ ವಿಚಾರವಾಗಿ ಬಂದರೆ ಬಸವನ್ಣನವರು ನಮಗೆ ಲಿಂಗಾಯತ ಧರ್ಮವನ್ನು ಕೊಟ್ಟವರು.  

ನಮ್ಮ ಕಲುಷಿತ ಭಾವನೆಗಳನ್ನು ದೂರ ತಳ್ಳಿ ತಲೆಎತ್ತಿ ನಾವು ಲಿಂಗವಂತರು, ಲಿಂಗಾಯತರು ಎಂದು ಹೇಳಬೇಕು. ಅದರ ಆಚರಣೆಯಲ್ಲಿ ಹಿಂದೆೆ ಇದ್ದೇವೆ. ಈ ಹಿಂದೆ ಅನೇಕ ಮಠಾಧೀಶರು, ಬಸವಭಕ್ತರು, ಮಾನ್ಯ ಮುಖ್ಯಮಂತ್ರಿಗಳು ಎಲ್ಲರೂ ಒಟ್ಟಿಗೆ ಚರ್ಚೆ ಮಾಡಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ಇಲ್ಲಿಗೆ ಒಂದು ವರ್ಷವಾಯಿತು. 

ಅದಕ್ಕಾಗಿ ಲಿಂಗಾಯತ ಮಠಾಧೀಪತಿಗಳ ಒಕ್ಕೂಟ ಸೆಪ್ಟೆಂಬರ್ 1ರಂದು ಬಸವ ಸಂಸ್ಕೃತಿ ಅಭಿಯಾನ ಪ್ರಾರಂಭಿಸಿ ಅದು ಇಲ್ಲಿಯವರೆಗೆ ಬಂದು ಶ್ರೀ ಮಠದಲ್ಲಿ ನಿಂತಿದೆ. ಬಸವಸಂಸ್ಕೃತಿ ಅಭಿಯಾನವು ಬಸವನ ಬಾಗೇವಾಡಿಯಲ್ಲಿ ಪರಿಣಾಮಕಾರಿಯಾಗಿ ಆರಂಭವಾಗಿ ಇಂದು ಚಿತ್ರದುರ್ಗ ಮುರುಘಾ ಮಠದಲ್ಲಿ ಅದರ ಎತ್ತರವನ್ನು ಕಂಡಿದೆ.

ಬಸವಾದಿ ಶರಣರತತ್ವ ಸಿದ್ಧಾಂತಗಳನ್ನು ಜನಮನದಲ್ಲಿ ತುಂಬುವ ಕಾರ್ಯ ಮಾಡುವ ದೃಷ್ಟಿಯಿಂದ ಈ ಅಭಿಯಾನವನ್ನು ನಡೆಸಲಾಗುತ್ತಿದೆ. ಈ ಅಭಿಯಾನದ ಉದ್ದೇಶವೇನೆಂದರೆ, ನಾಡಿನ ಪ್ರಗತಿ ಮುಂತಾದ ವಿಚಾರಗಳಲ್ಲಿ ಮುಕ್ತವಾದ ಪ್ರಶ್ನೆಗಳನ್ನು ಕೇಳಿ ಅವುಗಳಿಗೆ ಉತ್ತರವನ್ನು ಪಡೆಯುದಾಗಿದೆ. 

ನಮ್ಮ ಪಟ್ಟಾಭಿಷೇಕದ ಸಂದರ್ಭದಲ್ಲಿ ಸಿರಿಗೆರೆಯ ಶ್ರೀ. ಶಿವಕುಮಾರ ಮಹಾಸ್ವಾಮಿಗಳು ಹಾಗೂ ಶ್ರೀ. ಮಲ್ಲಿಕಾರ್ಜುನ ಮಹಾ ಸ್ವಾಮಿಗಳು ಒಂದಾದರು. ನಮ್ಮ ಅಭಿಯಾನದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಮಾಡಲು ಇದೊಂದು ಅಪರೂಪದ ಅವಕಾಶ ಸಿಕ್ಕಂತಾಗಿದೆ. ಎಂದು ನುಡಿದರು.

ಇದನ್ನೂ ಓದಿ: ಬಿಜೆಪಿಗೆ ನಗರ ಮಂಡಲಕ್ಕೆ ಪದಾಧಿಕಾರಿಗಳ ನೇಮಕ | ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಆದೇಶ

ಕಾರ್ಯಕ್ರಮದಲ್ಲಿ ಎಸ್.ಜೆ.ಎಂ ವಿದ್ಯಾಪೀಠ ಹಾಗೂ ಬೃಹನ್ಮಠದ ಅಧ್ಯಕ್ಷರಾದ ಶ್ರೀ. ಶಿವಯೋಗಿ ಸಿ.ಕಳಸದ, ಎರೆಹೊಸಹಳ್ಳಿ ಶ್ರೀ.ಯೋಗಿ ವೇಮನ ಗುರುಪೀಠದ ಶ್ರೀ ಜಗದ್ಗುರು ವೇಮನಾನಂದ ಸ್ವಾಮಿಗಳು, ತಲಸಂಗದ ಶ್ರೀ. ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರಗುಂಡಯ್ಯ ಸ್ವಾಮಿಗಳು, ದಾವಣಗೆರೆ ವಿರಕ್ತಮಠದ ಡಾ.ಬಸವ ಪ್ರಭುಸ್ವಾಮಿಗಳು, ಅಂಬಿಗರ ಚೌಡಯ್ಯ ಗುರುಪೀಠದ ಶ್ರೀ ಜಗದ್ಗುರು ಶಾಂತಭೀಷ್ಮ ಅಂಬಿಗರ ಚೌಡಯ್ಯ ಮಹಾಸ್ವಾಮಿಗಳು, ಅಥಣಿಯ ಶ್ರೀ ಮೋಟಗಿ ಮಠದ ಶ್ರೀ ಪ್ರಭು ಚನ್ನಬಸವಸ್ವಾಮಿಗಳು, ಚಿತ್ರದುರ್ಗದ ಶ್ರೀ ಸದ್ಗುರು ಕಬೀರನಂದಾಶ್ರಮದ ಶ್ರೀ ಶಿವಲಿಂಗಾನಂದ ಮಹಾಸ್ವಾಮಿಗಳು, ಗದುಗಿನ ಶ್ರೀ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಭಾಲ್ಕಿ ಹಿರೇಮಠ ಸಂಸ್ಥಾನದ ಡಾ. ಬಸವಲಿಂಗ ಪಟ್ಟದೇವರು, ಚಿತ್ರದುರ್ಗದ ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಶ್ರೀಗಳು, ಕೂಡಲಸಂಗಮದ ಗಂಗಾ ಮಾತಾಜಿ, ಹುಲಸೂರಿನ ಶಿವಾನಂದಸ್ವಾಮಿಗಳು ಕೂಡಲಸಂಗಮದ ರಾಜೇಶ್ವರಿ ಮಾತಾಜಿ, ಹರಿಹರದ ಹರಕ್ಷೇತ್ರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಶ್ರೀ ಜಗದ್ಗುರು ವಚನಾನಂದ ಸ್ವಾಮಿಗಳು, ಭಾಲ್ಕಿ ಹಿರೇಮಠ ಸಂಸ್ಥಾನದ ಡಾ.ಬಸವಲಿಂಗ ಪಟ್ಟದೇವರು, ಇಳಕಲ್ ಶ್ರೀ ವಿಜಯ ಮಹಾಂತೇಶ್ವರ ಮಠದ ಶ್ರೀ ಗುರುಮಹಾಂತ ಸ್ವಾಮಿಗಳು, ಹರಗುರು ಚರಮೂರ್ತಿಗಳು ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ಶ್ರೀ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಮಹಾಸ್ವಾಮಿಗಳು ಸ್ವಾಗತಿಸಿದರು. ತೋಟಪ್ಪ ಉತ್ತಂಗಿ ಬಳಗದಿಂದ ಬಸವ ಪ್ರಾರ್ಥನೆ ಸಲ್ಲಿಸಿದರು. ಶೈಲಾಜ ಜಯಕುಮಾರ್ ನಿರೂಪಿಸಿ ವಂದನಾರ್ಪಣೆ ಸಲ್ಲಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMuruga MathSharan Culture FestivalVachana Zenkaraಚಿತ್ರದುರ್ಗಚಿತ್ರದುರ್ಗ ನ್ಯೂಸ್ಮುರುಘಾ ಮಠವಚನ ಝೇಂಕಾರಶರಣ ಸಂಸ್ಕೃತಿ ಉತ್ಸವ
Share This Article
Facebook Email Print
Previous Article KSRTC ಬಸ್ – ಲಾರಿ ನಡುವೆ ಭೀಕರ ಅಪಘಾತ | ಸಂಸದರಿಂದ ಗಾಯಾಳುಗಳ ಭೇಟಿ
Next Article GST ಇಳಿಕೆ | ಜನರು, ವ್ಯಾಪಾರಿಗಳ ಬಳಿ ತೆರಳಿ ರಿಯಾಲಿಟಿ ಚೆಕ್ | ಸಂಸದ ಗೋವಿಂದ ಕಾರಜೋಳ | ಜಿ.ಎಚ್ ತಿಪ್ಪಾರೆಡ್ಡಿ
Leave a Comment

Leave a Reply Cancel reply

Your email address will not be published. Required fields are marked *

Purple seed powder
ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
Dina Bhavishya
rose water
ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
Life Style
ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up