CHITRADURGA NEWS | 21 APRIL 2026
ಚಿತ್ರದುರ್ಗ: ಕಾರ್ಮಿಕರ ಸಂರಕ್ಷಣಾ ವೇದಿಕೆಯಿಂದ ಪ್ರವಾಸಿ ಮಂದಿರದಲ್ಲಿ ಸೋಮವಾರ ಬಸವ ಜಯಂತಿ ಆಚರಿಸಲಾಯಿತು.
ಇದನ್ನೂ ಓದಿ: ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ದಲಿತ ಮುಖಂಡ ಬಿ.ರಾಜಪ್ಪ ಮಾತನಾಡಿ, ವಿಶ್ವಕ್ಕೆ ಸಮಾನತೆಯ ಸಂದೇಶವನ್ನು ಸಾರಿದ ಹನ್ನೆರಡನೆ ಶತಮಾನದ ಬಸವಣ್ಣನವರ ಆದರ್ಶ ತತ್ವ ಸಿದ್ದಾಂತಗಳ ಪಾಲಿಸುವವರನ್ನು ಇಂದಿನ ದಿನಮಾನಗಳಲ್ಲಿ ಹುಡುಕುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಜಾತಿ ಅಸಮಾನತೆಯನ್ನು ಹೋಗಲಾಡಿಸುವುದಕ್ಕಾಗಿ ಅಂತರ್ಜಾತಿ ವಿವಾಹವನ್ನು ಪ್ರೋತ್ಸಾಹಿಸುತ್ತಿದ್ದ ಬಸವಣ್ಣನವರು ಸಮ ಸಮಾಜಕ್ಕೆ ಹೋರಾಡಿದ ಕ್ರಾಂತಿಕಾರಿ. ಅಂದಿನ ಅನುಭವ ಮಂಟಪವೆ ಇಂದಿನ ಪಾರ್ಲಿಮೆಂಟ್ ಎಂದು ಬಣ್ಣಿಸಿದರು.
ಕಳೆದ 25-30 ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಬಸವಣ್ಣನವರ ಧ್ಯೇಯಗಳನ್ನು ತಪ್ಪದೆ ಜೀವನದಲ್ಲಿ ಪಾಲಿಸಬೇಕಿದೆ. ಯಾವುದೆ ಜಾತಿ ತಾರತಮ್ಯ, ಲಿಂಗ ಬೇಧವಿಲ್ಲದೆ ಸಮಾನತೆಗಾಗಿ ಶ್ರಮಿಸಿದ ಬಸವಣ್ಣನವರನ್ನು ಕೇವಲ ಒಂದು ಜಾತಿ ಧರ್ಮಕ್ಕೆ ಮೀಸಲಿಡಬಾರದು ಎಂದು ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಪಿ.ಕುಮಾರ್ ಮಾತನಾಡುತ್ತ ಕಾಯಕವೇ ಕೈಲಾಸ ಎನ್ನುವ ತತ್ವವನ್ನು ಇಡಿ ಮನು ಕುಲಕ್ಕೆ ಸಾರಿದ ವಿಶ್ವಗುರು ಬಸವಣ್ಣನವರು ಜಾತಿ ತಾರತಮ್ಯದ ವಿರುದ್ದ ಹೋರಾಡಿ ಮಹಾ ಮಾನವತಾವಾದಿ ಎನಿಸಿಕೊಂಡಿದ್ದಾರೆ. ಪ್ರಸ್ತುತ ಸಮಾಜಕ್ಕೆ ಬಸವಣ್ಣನವರ ತತ್ವ ಸಿದ್ದಾಂತಗಳು ಅತ್ಯವಶ್ಯಕ. ಜಯಂತಿಯನ್ನು ಆಚರಿಸುವುದರ ಜೊತೆಗೆ ಅವರ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಕೊಳ್ಳುವುದು ಉತ್ತಮ ಎಂದು ನುಡಿದರು.
ಕೆ.ರಾಜಣ್ಣ ಮಾತನಾಡಿ ಸಮಾಜದ ಪರಿವರ್ತನೆಗಾಗಿ ಹೋರಾಡಿದ ಬಸವಣ್ಣನವರು ಎಲ್ಲರ ಮನದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ. ಅಂಬೇಡ್ಕರ್, ಬುದ್ದ, ಬಸವ ಇವರುಗಳನ್ನು ಯಾರು ಮರೆಯುವಂತಿಲ್ಲ. ಎಲ್ಲರ ಗುರಿ ಸಮಾನತೆಯಾಗಿತ್ತು. ಮೂಢನಂಬಿಕೆ, ಅಸ್ಪøಶ್ಯತೆ, ಅಸಮಾನತೆ ವಿರುದ್ದ ಹೋರಾಡಿದ ಬಸವಣ್ಣನವರು ಹನ್ನೆರಡನೆ ಶತಮಾನದಲ್ಲಿ ಅಂತರ್ಜಾತಿ ವಿವಾಹ ಮಾಡಿಸಿ ಜಾತಿ ನಿವಾರಣೆಗಾಗಿ ಹೋರಾಡಿದ ಮಹಾನ್ ಮಾನವತಾವಾದಿ ಎಂದು ಸ್ಮರಿಸಿದರು.
21 ನೇ ಶತಮಾನದಲ್ಲಿ ಬಸವಣ್ಣನವರ ತತ್ವಗಳ ಪಾಲನೆಯಾಗುತ್ತಿಲ್ಲ. ಜಾತಿ ಧರ್ಮಗಳ ನಡುವೆ ಸಂಘರ್ಷ ನಡೆಯುತ್ತಿದೆ. ಶಾಂತಿಯುತ ಸಮಾಜ ನಿರ್ಮಾಣವಾಗಬೇಕಾದರೆ ಬಸವಣ್ಣವರ ಆದರ್ಶಗಳು ಆಚರಣೆಯಲ್ಲಿರಬೇಕೆಂದರು.
ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಈ ವೇಳೆ ಕಾರ್ಮಿಕರ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾಗರಾಜ್, ರಾಜ್ಯ ಕಾರ್ಯದರ್ಶಿ ಪರಮೇಶಪ್ಪ, ಚಿಕ್ಕಾಲಘಟ್ಟ ರಂಗಸ್ವಾಮಿ, ತಿಪ್ಪೇಸ್ವಾಮಿ, ಓಬಕ್ಕ, ಲಲಿತಮ್ಮ, ಮಲ್ಲಿಕಾರ್ಜುನ್ ಪಾಲ್ಗೊಂಡಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
