
CHITRADURGA NEWS | 21 APRIL 2026
ಚಿತ್ರದುರ್ಗ: ಮೂಢನಂಬಿಕೆ, ಮೌಢ್ಯ, ಕಂದಾಚಾರಗಳನ್ನು ನಿರ್ಮೂಲನೆಗೊಳಿಸಿ ಸಮ ಸಮಾಜ ನಿರ್ಮಾಣಕ್ಕಾಗಿ ಕ್ರಾಂತಿ ಮಾಡಿದ ಬಸವಣ್ಣನವರು ಅನುಭವ ಮಂಟಪದಲ್ಲಿ ಎಲ್ಲಾ ಜಾತಿಯವರಿಗೆ ಮುಕ್ತವಾಗಿ ಪ್ರವೇಶ ಕಲ್ಪಿಸಿದ್ದರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಹೇಳಿದರು.
ಇದನ್ನೂ ಓದಿ: ಮುರುಘಾಮಠವು ಬಸವಾದಿ ಶರಣರ ತತ್ವ, ಚಿಂತನೆಗಳ ಪ್ರಯೋಗಶಾಲೆ | ಡಾ.ಬಸವಕುಮಾರ ಶ್ರೀ
ಜಗಜ್ಯೋತಿ ಬಸವೇಶ್ವರರ 893 ನೇ ಜಯಂತಿ ಅಂಗವಾಗಿ ಬಿಜೆಪಿ ಕಚೇರಿಯಲ್ಲಿ ಸೋಮವಾರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಹನ್ನೆರಡನೆ ಶತಮಾನದಲ್ಲಿ ಸಮಾಜ ಸುಧಾರಣೆಗಾಗಿ ಹೋರಾಡಿದ ಬಸವಣ್ಣನವರ ಜಯಂತಿಯನ್ನು ವಿಶ್ವದಲ್ಲಿಯೇ ಆಚರಿಸಲಾಗುತ್ತಿದೆ. ಅನೇಕ ವಚನಕಾರರಿದ್ದಾರೆಂದರೆ ಅದಕ್ಕೆ ಬಸವಣ್ಣನವರೆ ಕಾರಣ ಎಂದರು.
ದೇಶದ ಪ್ರಧಾನಿ ನರೇಂದ್ರಮೋದಿರವರು ಬಸವಣ್ಣನವರ ಆದರ್ಶಗಳನ್ನು ತಮ್ಮ ಭಾಷಣಗಳಲ್ಲಿ ನೆನಪಿಸಿಕೊಳ್ಳುತ್ತಾರೆ. ಮನುಕುಲಕ್ಕೆ ಅವರ ಮಾರ್ಗದರ್ಶನ ಬೇಕು. ಸಮಾನತೆಯ ಹರಿಕಾರ ಬಸವಣ್ಣನವರ ತತ್ವಗಳನ್ನು ಎಲ್ಲರೂ ಪಾಲಿಸಬೇಕಿದೆ ಎಂದು ನುಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಹೆಚ್.ಮೋಹನ್ಕುಮಾರ್ ಮಾತನಾಡಿ, ವಿಶ್ವಗುರು ಬಸವಣ್ಣನವರ ಆಶಯಗಳಿಗೆ ಕಾಂಗ್ರೆಸ್ನವರು ಅಪಮಾನ ಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಕೇಂದ್ರದಲ್ಲಿ ಮಹಿಳಾ ಮೀಸಲಾತಿಗೆ ವಿರೋಧಿಸುತ್ತಿರುವ ಕಾಂಗ್ರೆಸ್ ನಾಯಕರುಗಳಿಗೆ ಬಸವಣ್ಣನವರ ಜಯಂತಿ ಆಚರಿಸುವ ನೈತಿಕತೆಯಿಲ್ಲ. ಹನ್ನೆರಡನೆ ಶತಮಾನದಲ್ಲಿಯೇ ಬಸವಣ್ಣನವರು ಅಸಮಾನತೆ ವಿರುದ್ದ ಹೋರಾಡಿದರು. ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸ್ತ್ರೀಸಮಾನತೆಯನ್ನು ಅಂದಿನ ಕಾಲದಲ್ಲಿಯೇ ಎತ್ತಿಹಿಡಿದಂತ ಸಮ ಸಮಾಜದ ಹರಿಕಾರ ಎಂದು ಬಣ್ಣಿಸಿದರು.
ಅಂತರ್ಜಾತಿ ವಿವಾಹವನ್ನು ಮುನ್ನೆಲೆಗೆ ತಂದ ಬಸವಣ್ಣನವರು ಲಿಂಗ ತಾರತಮ್ಯ ವಿರೋಧಿಸಿದರು. ಅಂತರ್ಜಾತಿ ವಿವಾಹಕ್ಕೆ ಸಂಬಂಧಿಸಿದಂತೆ 3500 ಅರ್ಜಿಗಳು ಸಲಿಕೆಯಾಗಿದ್ದರೂ ರಾಜ್ಯ ಸರ್ಕಾರ ಇನ್ನು ಅನುದಾನ ನೀಡಿಲ್ಲ.
ಜನರನ್ನು ಮರಳು ಮಾಡುತ್ತಿದೆಯೇ ವಿನಃ ಬಸವನ ತತ್ವ ಸಂದೇಶಗಳನ್ನು ಪಾಲಿಸುತ್ತಿಲ್ಲ. ಸಾರ್ವಕಾಲಿಕ ಸತ್ಯವಾಗಿರುವ ಬಸವಣ್ಣನವರ ನಡೆ-ನುಡಿ-ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬಸವ ಜಯಂತಿಗೆ ನಿಜವಾದ ಅರ್ಥ ಸಿಗುತ್ತದೆಂದು ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ.ಸಿದ್ದಾರ್ಥ, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ಯಾದವ್, ಜಿಲ್ಲಾ ಕಾರ್ಯದರ್ಶಿಗಳಾದ ರೇಖ, ಪಾಲಯ್ಯ, ವಕ್ತಾರ ನಾಗರಾಜ್ಬೇದ್ರೆ, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ಗ್ರಾಮಾಂತರ ಮಾಜಿ ಅಧ್ಯಕ್ಷ ಕಲ್ಲೇಶಯ್ಯ, ನಗರ ಪ್ರಧಾನ ಕಾರ್ಯದರ್ಶಿ ಬಸವೇಶ್, ನಗರ ಯುವ ಮೋರ್ಚಾ ಅಧ್ಯಕ್ಷ ವಸಂತ ಆಚಾರ್, ಬಸಮ್ಮ, ಶಾಂತಮ್ಮ, ವೀಣ, ಮಂಜುಳಮ್ಮ, ಉಮಾ, ಶಂಭು, ವೀರೇಶ್, ಲಕ್ಷ್ಮಿಸಾಗರ ವಸಂತ್, ಸತೀಶ್ಆಚಾರ್, ಪಿ.ಮಹಂತೇಶ್ ಇನ್ನು ಅನೇಕರು ಬಸವ ಜಯಂತಿಯಲ್ಲಿ ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

