By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹೊಳಲ್ಕೆರೆಯಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ | ಶಾಸಕ ಎಂ.ಚಂದ್ರಪ್ಪ, ಶಂಕರ್ ಮಹಾದೇವ ಬಿದರಿ ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹೊಳಲ್ಕೆರೆಯಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ | ಶಾಸಕ ಎಂ.ಚಂದ್ರಪ್ಪ, ಶಂಕರ್ ಮಹಾದೇವ ಬಿದರಿ ಭಾಗೀ

ಹೊಳಲ್ಕೆರೆ

ಹೊಳಲ್ಕೆರೆಯಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ | ಶಾಸಕ ಎಂ.ಚಂದ್ರಪ್ಪ, ಶಂಕರ್ ಮಹಾದೇವ ಬಿದರಿ ಭಾಗೀ

News Desk Chitradurga News
Last updated: 24 May 2025 20:19
News Desk Chitradurga News
3 weeks ago
Share
ಹೊಳಲ್ಕೆರೆಯಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 MAY 2025

ಹೊಳಲ್ಕೆರೆ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಹೊಳಲ್ಕೆರೆ ತಾಲ್ಲೂಕು ಘಟಕ, ವೀರಶೈವ ಲಿಂಗಾಯಿತ ಸಮಾಜ, ವೀರಶೈವ ಲಿಂಗಾಯಿತ ನೌಕರರ ಸಂಘದ ಸಹಯೋಗದೊಂದಿಗೆ ಪಟ್ಟಣದ ಸಂವಿಧಾನ ಸೌಧದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಿಸಲಾಯಿತು. ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಹಮ್ಮಿಕೊಳ್ಳಲಾಗಿತ್ತು.

Also Read: CET RESULT | SLV ಕಾಲೇಜಿಗೆ ಉತ್ತಮ ಫಲಿತಾಂಶ 

ಈ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಮಹಾದೇವ ಬಿದರಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿ, ಮೇಲು-ಕೀಳು, ಬಡವ-ಬಲ್ಲಿದ, ಸ್ತ್ರೀ-ಪುರುಷ ಎನ್ನುವ ಅಸಮಾನತೆಯಿಲ್ಲದ ಹನ್ನೆರಡನೆ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಆಚಾರ, ವಿಚಾರ ವಿಶಾಲವಾದುದು. ಯಾವುದೇ ಒಂದು ಜನಾಂಗಕ್ಕೆ ಸೀಮಿತವಲ್ಲ. ಇಡೀ ಮನುಕುಲಕ್ಕೆ ಸಮಾತನೆಯ ಸಂದೇಶ ಸಾರಿದ ಹರಿಕಾರ ಎಂದು ಹೇಳಿದರು.

ಹೊಳಲ್ಕೆರೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಬಸವಣ್ಣನವರ ಜಯಂತಿ ಆಚರಿಸಿ ಕೇವಲ ಕರ್ನಾಟಕ ರಾಜ್ಯಕ್ಕಷ್ಟೆ ಅಲ್ಲ. ಇಡಿ ದೇಶಕ್ಕೆ ಮಾದರಿಯಾಗಿದ್ದೀರ. ಎಲ್ಲಾ ಕಡೆ ಇದೆ ಮನೋಭಾವ ಮೂಡಿದಾಗ ವೀರಶೈವರು ನೆಮ್ಮದಿಯಿಂದ ತಲೆ ಎತ್ತಿ ಜೀವನ ಮಾಡಬಹುದು ಎಂದರು.

ಕರ್ನಾಟಕವನ್ನು ಅಸ್ಪøಶ್ಯತೆಯಿಂದ ಮುಕ್ತಗೊಳಿಸಿದಾಗ ಮಾತ್ರ ಬಸವಣ್ಣನವರಿಗೆ ನಿಜವಾಗಿಯೂ ಗೌರವ ನೀಡಿದಂತಾಗುತ್ತದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ ಅಪ್ಪಿತಪ್ಪಿಯೂ ಒಂದೆ ಒಂದು ಅಸ್ಪøಶ್ಯತೆ ಪ್ರಕರಣವಾಗಬಾರದು. ಪುರುಷರಂತೆ ಮಹಿಳೆಯರನ್ನು ಗೌರವದಿಂದ ಕಾಣಬೇಕು. ಎಲ್ಲಿಯೂ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರಗಳು ನಡೆಯಬಾರದು.

Also Read: ಸಿಇಟಿ ಫಲಿತಾಂಶ | ಡಾನ್‌ಬಾಸ್ಕೊ ಕಾಲೇಜಿನ ಮಾರುತಿ ರಾಜ್ಯಕ್ಕೆ 6ನೇ ರ್ಯಾಂಕ್‌

ಬಸವಣ್ಣನವರು ಹೇಳಿರುವಂತೆ ಕಾಯಕವೆ ಕೈಲಾಸ ಎನ್ನುವ ತತ್ವದಡಿಯಲ್ಲಿ ಜೀವಿಸುತ್ತಿರುವ ವೀರಶೈವ ಲಿಂಗಾಯಿತರು ಪ್ರಾಮಾಣಿಕ, ಪರಿಶುದ್ದವಾದ ಕಾಯಕವನ್ನು ನಂಬಿರುವವರು. ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿಯೂ ವೀರಶೈವ ಲಿಂಗಾಯಿತರು ಸಣ್ಣಪುಟ್ಟ ಅಸೂಯೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಒಗ್ಗಟ್ಟಾಗಿರಬೇಕು. ಆಗ ಮಾತ್ರ ಬಸವಣ್ಣನವರ ತತ್ವಗಳಿಗೆ ನಿಜವಾದ ಅರ್ಥ ಸಿಗುತ್ತದೆ ಎಂದು ಹೇಳಿದರು.

ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಿರುವ ಬಹುದೊಡ್ಡ ಸಮಾಜ ಯಾವುದಾದರೂ ಇದ್ದರೆ ಅದು ವೀರಶೈವ ಲಿಂಗಾಯಿತರು.

ಬಸವಣ್ಣನವರು ಕೇವಲ ವೀರಶೈವ ಲಿಂಗಾಯಿತರಿಗಷ್ಟೆ ಅಲ್ಲ. ಇಡೀ ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿ ವಿಶ್ವ ಮಾನವರೆನಿಸಿಕೊಂಡಿದ್ದಾರೆ. ಕಾಯಕಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದ ಜಗಜ್ಯೋತಿ ಬಸವೇಶ್ವರರು ಹನ್ನೆರಡನೇ ಶತಮಾನದಲ್ಲಿಯೇ ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಸಮಾನತೆ ನೀಡಿದವರು. ಅಂತಹ ಕ್ರಾಂತಿಕಾರಿ ಪುರುಷನ ಪರಿಕಲ್ಪನೆ ಮೇಲೆ ಇಂದಿನ ಪಾರ್ಲಿಮೆಂಟ್ ನಿಂತಿದೆ. ವಿಶ್ವದಲ್ಲಿಯೇ ಬಸವಣ್ಣನವರ ಅನುಯಾಯಿಗಳಿದ್ದಾರೆ.

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Also Read: ಮಾದಾರ ಚನ್ನಯ್ಯ ಶ್ರೀಗಳಿಗೆ ಸಾಮರಸ್ಯ ಪುರಸ್ಕಾರ | ಕೋಟಾ ಶ್ರೀನಿವಾಸ ಪೂಜಾರಿ ಲೇಖನ

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಪಿ.ರಮೇಶ್, ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ಪ್ರಭಾಕರ್ ಮಾಳಿಗೆ ಸೇರಿದಂತೆ ಇತರರು ಭಾಗವಹಿಸಿದ್ದರು.

ವಿವಿಧ ಜಾನಪದ ಕಲಾತಂಡಗಳೊಂದಿಗೆ ಅಲಂಕೃತ ವಾಹನದಲ್ಲಿ ಬಸವಣ್ಣನವರ ಬೃಹತ್ ಭಾವಚಿತ್ರದ ಮೆರವಣಿಗೆ ನಡೆಯಿತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesHolalkereJagajyoti BasaveshwaraJayanthiKannada Latest NewsKannada NewsMLA ChandrappaShankar Mahadeva Bidariಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಗಜ್ಯೋತಿ ಬಸವೇಶ್ವರಜಯಂತಿಶಂಕರ್ ಮಹದೇವ ಬಿದರಿಶಾಸಕ ಚಂದ್ರಪ್ಪಹೊಳಲ್ಕೆರೆ
Share This Article
Facebook Email Print
Previous Article CET RESULT | SLV ಕಾಲೇಜಿಗೆ ಉತ್ತಮ ಫಲಿತಾಂಶ 
Next Article ಇಂಡಿಯನ್‌ ಆರ್ಮಿ ಬೆಂಬಲಿಸಿ ಮಕ್ಕಳಿಂದ ಬೃಹತ್‌ ಮ್ಯಾರಾಥಾನ್‌ | ಇಂಡಿಯನ್‌ ಇಂಟರ್‌ನ್ಯಾಷನಲ್‌ ಶಾಲೆಯಿಂದ ಆಯೋಜನೆ
Leave a Comment

Leave a Reply Cancel reply

Your email address will not be published. Required fields are marked *

ಆಶ್ರಯ ಬಡಾವಣೆ ನಿರ್ಮಾಣ, ಸಿಸಿ ರಸ್ತೆ, ಶಾಲಾ ಕಟ್ಟಡ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ
ಹೊಳಲ್ಕೆರೆ
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ | ಕುರಿ, ಕೋಳಿ ಮತ್ತು ಹಸು ಸಾಕಾಣಿಕೆ ತರಬೇತಿಗೆ ನೇರ ಅಹ್ವಾನ
ಮುಖ್ಯ ಸುದ್ದಿ
arecanut price list
ಅಡಿಕೆ ಧಾರಣೆ | ಜೂನ್‌ 17 | ಇಂದಿನ ಮಾರುಕಟ್ಟೆ ಪೂರ್ಣ ವಿವರ
ಅಡಕೆ ಧಾರಣೆ
ಜೇನು ಕೃಷಿಯನ್ನು ಸಮಗ್ರ ಕೃಷಿಯನ್ನಾಗಿ ಅಳವಡಿಸಿಕೊಳ್ಳಿ | ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up