CHITRADURGA NEWS | 24 MAY 2025
ಹೊಳಲ್ಕೆರೆ: ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಹೊಳಲ್ಕೆರೆ ತಾಲ್ಲೂಕು ಘಟಕ, ವೀರಶೈವ ಲಿಂಗಾಯಿತ ಸಮಾಜ, ವೀರಶೈವ ಲಿಂಗಾಯಿತ ನೌಕರರ ಸಂಘದ ಸಹಯೋಗದೊಂದಿಗೆ ಪಟ್ಟಣದ ಸಂವಿಧಾನ ಸೌಧದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಿಸಲಾಯಿತು. ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಹಮ್ಮಿಕೊಳ್ಳಲಾಗಿತ್ತು.
Also Read: CET RESULT | SLV ಕಾಲೇಜಿಗೆ ಉತ್ತಮ ಫಲಿತಾಂಶ
ಈ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಮಹಾದೇವ ಬಿದರಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿ, ಮೇಲು-ಕೀಳು, ಬಡವ-ಬಲ್ಲಿದ, ಸ್ತ್ರೀ-ಪುರುಷ ಎನ್ನುವ ಅಸಮಾನತೆಯಿಲ್ಲದ ಹನ್ನೆರಡನೆ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಆಚಾರ, ವಿಚಾರ ವಿಶಾಲವಾದುದು. ಯಾವುದೇ ಒಂದು ಜನಾಂಗಕ್ಕೆ ಸೀಮಿತವಲ್ಲ. ಇಡೀ ಮನುಕುಲಕ್ಕೆ ಸಮಾತನೆಯ ಸಂದೇಶ ಸಾರಿದ ಹರಿಕಾರ ಎಂದು ಹೇಳಿದರು.
ಹೊಳಲ್ಕೆರೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಬಸವಣ್ಣನವರ ಜಯಂತಿ ಆಚರಿಸಿ ಕೇವಲ ಕರ್ನಾಟಕ ರಾಜ್ಯಕ್ಕಷ್ಟೆ ಅಲ್ಲ. ಇಡಿ ದೇಶಕ್ಕೆ ಮಾದರಿಯಾಗಿದ್ದೀರ. ಎಲ್ಲಾ ಕಡೆ ಇದೆ ಮನೋಭಾವ ಮೂಡಿದಾಗ ವೀರಶೈವರು ನೆಮ್ಮದಿಯಿಂದ ತಲೆ ಎತ್ತಿ ಜೀವನ ಮಾಡಬಹುದು ಎಂದರು.
ಕರ್ನಾಟಕವನ್ನು ಅಸ್ಪøಶ್ಯತೆಯಿಂದ ಮುಕ್ತಗೊಳಿಸಿದಾಗ ಮಾತ್ರ ಬಸವಣ್ಣನವರಿಗೆ ನಿಜವಾಗಿಯೂ ಗೌರವ ನೀಡಿದಂತಾಗುತ್ತದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ ಅಪ್ಪಿತಪ್ಪಿಯೂ ಒಂದೆ ಒಂದು ಅಸ್ಪøಶ್ಯತೆ ಪ್ರಕರಣವಾಗಬಾರದು. ಪುರುಷರಂತೆ ಮಹಿಳೆಯರನ್ನು ಗೌರವದಿಂದ ಕಾಣಬೇಕು. ಎಲ್ಲಿಯೂ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರಗಳು ನಡೆಯಬಾರದು.
Also Read: ಸಿಇಟಿ ಫಲಿತಾಂಶ | ಡಾನ್ಬಾಸ್ಕೊ ಕಾಲೇಜಿನ ಮಾರುತಿ ರಾಜ್ಯಕ್ಕೆ 6ನೇ ರ್ಯಾಂಕ್
ಬಸವಣ್ಣನವರು ಹೇಳಿರುವಂತೆ ಕಾಯಕವೆ ಕೈಲಾಸ ಎನ್ನುವ ತತ್ವದಡಿಯಲ್ಲಿ ಜೀವಿಸುತ್ತಿರುವ ವೀರಶೈವ ಲಿಂಗಾಯಿತರು ಪ್ರಾಮಾಣಿಕ, ಪರಿಶುದ್ದವಾದ ಕಾಯಕವನ್ನು ನಂಬಿರುವವರು. ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿಯೂ ವೀರಶೈವ ಲಿಂಗಾಯಿತರು ಸಣ್ಣಪುಟ್ಟ ಅಸೂಯೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳದೆ ಒಗ್ಗಟ್ಟಾಗಿರಬೇಕು. ಆಗ ಮಾತ್ರ ಬಸವಣ್ಣನವರ ತತ್ವಗಳಿಗೆ ನಿಜವಾದ ಅರ್ಥ ಸಿಗುತ್ತದೆ ಎಂದು ಹೇಳಿದರು.
ಶಾಸಕ ಡಾ.ಎಂ.ಚಂದ್ರಪ್ಪ ಮಾತನಾಡಿ, ರಾಜ್ಯದಲ್ಲಿ ಇತಿಹಾಸ ಸೃಷ್ಟಿಸಿರುವ ಬಹುದೊಡ್ಡ ಸಮಾಜ ಯಾವುದಾದರೂ ಇದ್ದರೆ ಅದು ವೀರಶೈವ ಲಿಂಗಾಯಿತರು.
ಬಸವಣ್ಣನವರು ಕೇವಲ ವೀರಶೈವ ಲಿಂಗಾಯಿತರಿಗಷ್ಟೆ ಅಲ್ಲ. ಇಡೀ ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿ ವಿಶ್ವ ಮಾನವರೆನಿಸಿಕೊಂಡಿದ್ದಾರೆ. ಕಾಯಕಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದ ಜಗಜ್ಯೋತಿ ಬಸವೇಶ್ವರರು ಹನ್ನೆರಡನೇ ಶತಮಾನದಲ್ಲಿಯೇ ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಸಮಾನತೆ ನೀಡಿದವರು. ಅಂತಹ ಕ್ರಾಂತಿಕಾರಿ ಪುರುಷನ ಪರಿಕಲ್ಪನೆ ಮೇಲೆ ಇಂದಿನ ಪಾರ್ಲಿಮೆಂಟ್ ನಿಂತಿದೆ. ವಿಶ್ವದಲ್ಲಿಯೇ ಬಸವಣ್ಣನವರ ಅನುಯಾಯಿಗಳಿದ್ದಾರೆ.
ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕ ಮಾಧುರಿ ಗಿರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
Also Read: ಮಾದಾರ ಚನ್ನಯ್ಯ ಶ್ರೀಗಳಿಗೆ ಸಾಮರಸ್ಯ ಪುರಸ್ಕಾರ | ಕೋಟಾ ಶ್ರೀನಿವಾಸ ಪೂಜಾರಿ ಲೇಖನ
ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ, ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್, ಮಾಜಿ ಶಾಸಕ ಪಿ.ರಮೇಶ್, ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಉಪಾಧ್ಯಕ್ಷೆ ನಾಗರತ್ನ ವೇದಮೂರ್ತಿ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ತಾಲ್ಲೂಕು ಅಧ್ಯಕ್ಷ ಪ್ರಭಾಕರ್ ಮಾಳಿಗೆ ಸೇರಿದಂತೆ ಇತರರು ಭಾಗವಹಿಸಿದ್ದರು.
ವಿವಿಧ ಜಾನಪದ ಕಲಾತಂಡಗಳೊಂದಿಗೆ ಅಲಂಕೃತ ವಾಹನದಲ್ಲಿ ಬಸವಣ್ಣನವರ ಬೃಹತ್ ಭಾವಚಿತ್ರದ ಮೆರವಣಿಗೆ ನಡೆಯಿತು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number