CHITRADURGA NEWS | 07 AUGUST 2024
ಚಿತ್ರದುರ್ಗ: ಜಿಲ್ಲೆಯಲ್ಲಿ ಕರಡಿ ಕಾಟ ಹೆಚ್ಚಾಗಿದ್ದು, ಗ್ರಾಮಗಳಿಗೆ ಬಂದು ಹೋಗುವುದು, ದಾಳಿ ನಡೆಸುವುದು ಮಾಮೂಲಿಯಾಗಿದೆ. ಇದೀಗ ಮೊಳಕಾಲ್ಮುರು ತಾಲ್ಲೂಕಿನ ಹಿರೇಕೆರೆಹಳ್ಳಿ ಗ್ರಾಮದಲ್ಲಿ ಎರಡು ಕರಡಿ ಓಡಾಡಿರುವುದು ಆತಂಕಕ್ಕೆ ಸೃಷ್ಟಿಸಿದೆ.
ಗ್ರಾಮದಲ್ಲಿ ಸೋಮವಾರ ರಾತ್ರಿ 2 ಕರಡಿಗಳು ಓಡಾಡಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಗ್ರಾಮದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಕರಡಿಗಳು ಓಡಾಡಿ, ಬಳಿಕ ಚರಂಡಿಯೊಂದರ ಬದಿ ಬಿಸಾಡಿರುವ ಹೋಟೆಲ್, ಮನೆಯ ತ್ಯಾಜ್ಯವನ್ನು ತಿಂದಿರುವುದು ಕಂಡುಬಂದಿದೆ. ನಂತರ ಬಂದ ದಾರಿಯಲ್ಲಿಯೇ ವಾಪಸ್ ಹೋಗಿವೆ.
ಇದನ್ನು ಓದಿ: ಸಿರಿಗೆರೆ ತರಳಬಾಳು ಮಠಕ್ಕೆ ಬೈಲಾ ಇಲ್ಲ | ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ

ಗ್ರಾಮದ ಸಮೀಪದ ಗುಡ್ಡವು ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆಗೆ ಹೊಂದಿಕೊಂಡಿದ್ದು, ಅಲ್ಲಿ ಕರಡಿ ಧಾಮವಿದೆ. ಆಹಾರ ಹುಡುಕಿಕೊಂಡು ಗ್ರಾಮದ ಒಳಗೆ ಬಂದಿರುವ ಸಾಧ್ಯತೆ ಇದೆ. ಈ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಕರಡಿ ಕಾಟ ತಪ್ಪಿಸುವಂತೆ ಮನವಿ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
