
CHITRADURGA NEWS | 21 DECEMBER 2025
ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಜನರ ಮೂರು ದಶಕಗಳ ಕನಸು. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರ ಕೊನೆಯ ದಿನಗಳ ಹಂಬಲವಾಗಿದ್ದ ಭದ್ರಾ ಮೇಲ್ದಂಡೆ ಯೋಜನೆ ಸಾಕಾರಾವಾಗುತ್ತಿದೆ.
ಜಿಲ್ಲೆಯಲ್ಲಿ ಶೇ.80 ರಷ್ಟು ಭದ್ರಾ ಮೇಲ್ದಂಡೆ ಕಾಲುವೆ ಕಾಮಗಾರಿ ಮುಗಿದಿದೆ. ಈಗಾಗಲೇ ಭದ್ರಾ ಕಾಲುವೆ ಹಾಗೂ ವೇದಾವತಿ ನದಿ ಮೂಲಕ ವಾಣಿವಿಲಾಸ ಸಾಗರಕ್ಕೂ ಕಳೆದ ಮೂರ್ನಾಲ್ಕು ವರ್ಷಗಳಿಂದ ನೀರು ಹರಿದಿದೆ.

ಇದನ್ನೂ ಓದಿ: ವೇದಾವತಿ-ಅಘನಾಶಿನಿ ನದಿ ಜೋಡಣೆ ?|ಉತ್ತರ ಕನ್ನಡದಿಂದ ಬಯಲು ಸೀಮೆಗೆ 35 ಟಿಎಂಸಿ ನೀರು !
ಈಗ ಇನ್ನೊಂದು ಹೆಜ್ಜೆ ಮುಂದೆ ಸಾಗಿದ್ದು, 2026 ಜನವರಿ 26 ರ ವೇಳೆಗೆ ಭದ್ರಾ ಮೇಲ್ದಂಡೆ ಚಿತ್ರದುರ್ಗ ಶಾಖಾ ಕಾಲುವೆ ಮೂಲಕ ನೀರು ಹರಿಯುವ ತಯಾರಿಗಳು ಕಾಣಿಸುತ್ತಿವೆ.
ಹೌದು, ಈ ಬಗ್ಗೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಮಹತ್ವದ ಮಾಹಿತಿ ನೀಡಿದ್ದು, ಮುಂದಿನ ಜನವರಿ 26 ಗಣರಾಜ್ಯೋತ್ಸವದ ವೇಳೆಗೆ ಭದ್ರಾ ಮೇಲ್ದಂಡೆ ಕಾಲುವೆ ಮೂಲಕ ಗೋನೂರುವರೆಗೆ ಕಾಲುವೆಯಲ್ಲಿ ನೀರು ಹರಿಸುವ ಮೂಲಕ ಕೆರೆಗಳಿಗೆ ತುಂಬಿಸಲು ಚಿಂತನೆ ನಡೆದಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಡಿಸೆಂಬರ್ 20 | ಭೀಮಸಮುದ್ರ, ಚನ್ನಗಿರಿ, ದಾವಣಗೆರೆ ಅಡಿಕೆ ರೇಟ್
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಜೊತೆಗೂ ಚರ್ಚೆ ನಡೆಸಿದ್ದು, ಅವರ ದಿನಾಂಕ ನಿಗಧಿ ಆಗುವುದು ಬಾಕಿಯಿದೆ.
ಕಳೆದ ಹಲವು ವರ್ಷಗಳಿಂದ ಕಾಮಗಾರಿ ಬಾಕಿಯಿದ್ದ ಅಜ್ಜಂಪುರ ಸಮೀಪದ ಅಬ್ಬಿನಹೊಳಲು ಗ್ರಾಮದಲ್ಲಿ ಇದ್ದ ಸಮಸ್ಯೆ ಡಿಸೆಂಬರ್ 13 ರಂದು ನಡೆದ ಲೋಕ ಅದಾಲತ್ನಲ್ಲಿ ಚಿಕ್ಕಮಗಳೂರು ನ್ಯಾಯಾಲಯದಲ್ಲಿ ಬಗೆಹರಿದಿದೆ.
ಇದನ್ನೂ ಓದಿ: ಭೂಕಬಳಿಕೆ ಆರೋಪ | ಶಾಸಕ ಎಂ.ಚಂದ್ರಪ್ಪ-ಮಾಜಿ ಸಚಿವ ಎಚ್.ಆಂಜನೇಯ ಜಟಾಪಟಿ
ಈವರೆಗೆ ಇಲ್ಲಿನ ರೈತರಿಗೆ ಸರ್ಕಾರ ನಿಗಧಿ ಮಾಡಿದ್ದ ಪ್ರತಿ ಎಕರೆಗೆ 4 ಲಕ್ಷ ರೂ. ಪರಿಹಾರದ ಬದಲು ನ್ಯಾಯಾಲಯದ ಮೂಲಕ ಲೋಕ ಅದಾಲತ್ನಲ್ಲಿ 35 ಲಕ್ಷ ರೂ.ಗಳಿಗೆ ನಿಗಧಿಯಾಗಿದ್ದು, ಕಾಮಗಾರಿ ಆರಂಭಿಸಲು ರೈತರು ಸಮ್ಮತಿಸಿದ್ದಾರೆ ಎಂಬ ಮಾಹಿತಿ ತಿಳಿಸಿದ್ದಾರೆ.

ಕೆರೆಗಳಿಗೆ ಹರಿಯಲಿದ್ದಾಳೆ ಭದ್ರೆ:
ಈ ಹಿನ್ನೆಲೆಯಲ್ಲಿ ಭದ್ರಾ ಕಾಲುವೆ ಮೂಲಕ ನೀರು ಹರಿಸಿ ಹೊಳಲ್ಕೆರೆ, ಹೊಸದುರ್ಗ ಸೇರಿದಂತೆ ಈಗಾಗಲೇ ಸಂಪರ್ಕ ಕಲ್ಪಿಸುವ ಕೆಲಸ ಮುಗಿದಿರುವ ಕೆರೆಗಳಿಗೆ ನೀರು ತುಂಬಲಿದೆ.
ಚಿತ್ರದುರ್ಗ ಶಾಖಾ ಕಾಲುವೆ ಚಿತ್ರದುರ್ಗ ನಗರದ ಪಕ್ಕದಲ್ಲಿರುವ ಗೋನೂರುವರೆಗೆ ಮುಕ್ತಾಯವಾಗಿದ್ದು, ಗೋನೂರು ಬಳಿ ಮೇಲ್ಗಾಲುವೆ ಕಾಮಗಾರಿ ವಿಳಂಭವಾಗಿದೆ. ಇದು ಮುಗಿದರೆ ನೀರು ಇನ್ನಷ್ಟು ಮುಂದಕ್ಕೆ ಹರಿಯುವ ಸಾಧ್ಯತೆ ಇದೆ.
ಇದನ್ನೂ ಓದಿ: ಭದ್ರೆ ನೀರು ಜಿಲ್ಲೆಗೆ ಹರಿಯಲು ಯಾರೆಲ್ಲಾ ಕಾರಣ ಗೊತ್ತಾ | ನೀರಾವರಿ ಯೋಜನೆ ಕುರಿತು ಶ್ರೀ ಶಾಂತವೀರ ಸ್ವಾಮೀಜಿ ಮುಕ್ತ ಮಾತು
ಶಾಸಕರಾದ ಎಂ.ಚಂದ್ರಪ್ಪ ಅವರು ಬಹುತೇಕ ಜನವರಿ 26ಕ್ಕೆ ನೀರು ಹರಿಸಲು ಪೂಜೆ ಸಲ್ಲಿಸಬೇಕು ಎಂದು ತೀರ್ಮಾನಿಸಿದ್ದೇವೆ. ಒಂದು ವೇಳೆ ಆಗದಿದ್ದರೆ ಫೆಬ್ರವರಿ 15 ರ ಒಳಗಾಗಿ ನೀರು ಹರಿಯುವುದು ನಿಶ್ಚಿತ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಯೋಜನೆ ಕಾರಣೀಭೂತರಾದವರ ಸ್ಮರಣೆ:
ಇದೇ ವೇಳೆ ಭದ್ರಾ ಮೇಲ್ದಂಡೆ ಯೋಜನೆಗೆ ಅಡಿಗಲ್ಲು ಹಾಕಿದ ಮಾಜಿ ಮುಖ್ಯಮಂತ್ರಿ ದಿ.ಎಸ್.ಎಂ.ಕೃಷ್ಣ, 5300 ಕೋಟಿ ರೂ. ಕಾಮಗಾರಿಗೆ ಅನುಮೋದನೆ ನೀಡಿ ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆನಂತರ ಬಂದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಎಲ್ಲರನ್ನೂ ಸ್ಮರಿಸಿದ್ದಾರೆ.
ಇದನ್ನೂ ಓದಿ: Vedavathi rever; ವೇದಾವತಿ ನದಿ ಹರಿಯುವ ದೃಶ್ಯ ನಯನ ಮನೋಹರ
ವಿಶೇಷವಾಗಿ ಅಬ್ಬಿನಹೊಳಲು ರೈತರ ಬಳಿ ಧಾವಿಸಿ ಅವರ ಮನವೊಲಿಸುವಲ್ಲಿ ಯಶಸ್ವಿಯಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಸಕ್ತಿಯನ್ನು ಎಂ.ಚಂದ್ರಪ್ಪ ಶ್ಲಾಘಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
