CHITRADURGA NEWS | 04 OCTOBER 2024
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಡಿ ತುಂತುರು ನೀರಾವರಿ ವ್ಯವಸ್ಥೆ ಕಲ್ಪಿಸಲು ಪೈಪ್ ಅಳವಡಿಸುವ ಮುನ್ನ ರೈತರಿಗೆ ನೋಟಿಸ್ ನೀಡಿಲ್ಲ ಎಂದು ಆರೋಪಿಸಿ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಕೆಲವು ಹಳ್ಳಿಗಳ ರೈತರು ಪೈಪ್ ಅಳವಡಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕಿಗೆ ಭದ್ರಾ ಯೋಜನೆಯ ನೀರು ಬರುವುದು ತಡವಾದರೆ ನೆಲದಲ್ಲಿ ಹೂತಿರುವ ಪೈಪುಗಳು ಉಳಿಯಲು ಸಾಧ್ಯವೇ? ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಹಾಕುವ ಪೈಪ್ಗಳಿಗೆ ಖಾತರಿ ಯಾರು? ಇಂತಹ ಹುಚ್ಚಾಟಗಳನ್ನು ಸ್ಥಗಿತಗೊಳಿಸಿ ಮೊದಲು ಭದ್ರಾ ಕಾಮಗಾರಿ ಪೂರ್ಣಗೊಳಿಸುವ ಇಚ್ಛಾಶಕ್ತಿ ತೋರಿಸಲಿ ಎಂದು ಆಗ್ರಹಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆ ಮೂಲಕ ಜುಲೈನಿಂದ ಅಕ್ಟೋಬರ್ವರೆಗೆ ಮಳೆಗಾಲದಲ್ಲಿ ಜವನಗೊಂಡನಹಳ್ಳಿ ಹೋಬಳಿಯ 13,000 ಹೆಕ್ಟೇರ್ ಪ್ರದೇಶಕ್ಕೆ ತುಂತುರು ನೀರಾವರಿ ಹಾಗೂ ಆರು ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಪೈಪ್ ಅಳವಡಿಸಲು ಅಮೃತ ಕನ್ಸ್ಟ್ರಕ್ಷನ್ ಕಂಪನಿಗೆ ಗುತ್ತಿಗೆ ನೀಡಲಾಗಿದೆ.
ರೈತರಿಗೆ ನೋಟಿಸ್ ನೀಡಿಲ್ಲ ಎನ್ನುವುದು ಸರಿಯಲ್ಲ. ಏಪ್ರಿಲ್ನಲ್ಲಿಯೇ ತಹಶೀಲ್ದಾರ್, ಗ್ರಾಮ ಪಂಚಾಯಿತಿಯವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಅಮೃತ ಕಂಪನಿ ವ್ಯವಸ್ಥಾಪಕ ಸೂರ್ಯನಾರಾಯಣ್ ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ಆಕಾಶದಲ್ಲಿ ವಿಸ್ಮಯ | ಬರಿಗಣ್ಣಿಗೆ ಗೋಚರಿಸಲಿದೆ ಅಟ್ಲಾಸ್ ಧೂಮಕೇತು
ಕೆಲಸ ಮಾಡುತ್ತಿರುವ 33 ಹಳ್ಳಿಗಳ ವ್ಯಾಪ್ತಿಯಲ್ಲಿ ಒಂದೆರಡು ಹಳ್ಳಿಗಳಲ್ಲಿ ಮಾತ್ರ ರೈತರು ವಿರೋಧಿಸಿದ್ದಾರೆ. ಉಳಿದ ಹಳ್ಳಿಗಳಲ್ಲಿ ರೈತರು ಸಂಪೂರ್ಣ ಸಹಕರಿಸುತ್ತಿದ್ದಾರೆ. ರೈತರಿಗೆ ತುಂತುರು ಹನಿ ನೀರಾವರಿ ಕಲ್ಪಿಸುವುದು ಯೋಜನೆ ಉದ್ದೇಶ. ಭೂ ಸ್ವಾಧೀನ ಮಾಡಿಕೊಳ್ಳುತ್ತಿಲ್ಲ. ಜಮೀನಿನಲ್ಲಿ ಬೆಳೆ ಇದ್ದರೆ ಪರಿಹಾರ ಕೊಡುತ್ತಿದ್ದೇವೆ. ನಾವು ಪ್ರೆಷರ್ ಲೈನ್ ಮಾತ್ರ ನಿರ್ಮಿಸುತ್ತಿದ್ದು, ಗುತ್ತಿಗೆ ಅವಧಿ ಎರಡು ವರ್ಷವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number